ಕೆಕೆಆರ್ ಟಿಸಿ ಗೆ 802 ಬಸ್ ಸೇರ್ಪಡೆ: 28ರಂದು ಸೇಡಂದಲ್ಲಿ ಲೋಕಾರ್ಪಣೆ


Team Udayavani, Mar 26, 2023, 2:37 PM IST

1-sad-sadsad

ಕಲಬುರಗಿ: ಬಸ್ ಅಭಾವ ಎದುರಿಸುತ್ತಿರುವ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ ಹೊಸದಾಗಿ 802 ಬಸ್ ಗಳ ಸೇರ್ಪಡೆಯಾಗಿವೆ ಎಂದು ನಿಗಮದ ಅಧ್ಯಕ್ಷರಾಗಿರುವ ಸೇಡಂ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ತಿಳಿಸಿದರು.

ನಿಗಮದ ಕಚೇರಿಯಲ್ಲಿ ಕರೆಯಲಾದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 330 ಕೋ.ರೂ ವೆಚ್ಚದಲ್ಲಿ ಬಸ್ ಗಳ ಖರೀದಿ ಮಾಡಿ ನಿಗಮ ಕ್ಕೆ ಸೇರಿಸಲಾಗಿದೆ. ಹೊಸ ಬಸ್ ಗಳನ್ನು ಇದೇ ಮಾಚ್೯ 28 ರಂದು ಸಾರಿಗೆ ಸಚಿವ ಶ್ರೀ ರಾಮುಲು ಚಾಲನೆ ನೀಡುವರು ಎಂದು ವಿವರಿಸಿದರು.

ಹೊಸ ಬಸ್ ಗಳ ಸೇರ್ಪಡೆಯಿಂದ ಬಸ್ ಗಳ ಕೊರತೆ ನಿವಾರಣೆ ಯಾಗಲಿದ್ದು, ಗ್ರಾಮೀಣ ಭಾಗಕ್ಕೆ ಸಾರಿಗೆ ಸೇವೆ ಮತ್ತಷ್ಟು ವಿಸ್ತರಿಸಲಾಗಲಿದೆ. 802 ಬಸ್ ಗಳಲ್ಲಿ 6ವೋಲ್ವೋ, 40 ಎಸಿ ಸ್ಲೀಪರ್ ಬಸ್ ಗಳಿದ್ದು, ಒಟ್ಟಾರೆ ಎಲ್ಲ ಹೊಸ ಬಸ್ ಗಳು ಅತ್ಯಾಧುನಿಕ ತಾಂತ್ರಿಕತೆ ಹೊಂದಿವೆ ಎಂದು ತಿಳಿಸಿದರು.

ಸಾವಿರ ಕೋ.ರೂ ವೆಚ್ಚದ ಕಾಮಗಾರಿಗಳಿಗೆ ಚಾಲನೆ: ಇದೇ ಮಾಚ್೯ 28ರಂದು ಬೆಳಿಗ್ಗೆ 11ಕ್ಕೆ ಸೇಡಂ ವಿಧಾನಸಭಾ ಕ್ಷೇತ್ರದ ಸಾವಿರ ಕೋ.ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ಸಚಿವರು ನೆರವೇರಿಸಲಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಶಾಸಕ ತೇಲ್ಕೂರ ತಿಳಿಸಿದರು.

ಕಾಗಿಣಾ ಏತ ನೀರಾವರಿಗೆ ಅಡಿಗಲ್ಲು

ಬಹು ದಶಕಗಳ ಬೇಡಿಕೆಯಾದ ಕಾಗಿಣಾ ಏತ ನೀರಾವರಿ ಯೋಜನೆಗೆ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮಾ. 28 ರಂದು ಅಡಿಗಲ್ಲು ನೆರವೇರಿಸುವರು.

160 ಕೋ. ರೂ ವೆಚ್ಚದ ಮೊದಲ ಹಂತದ ಕಾಮಗಾರಿಗೆ ಚಾಲನೆ ನೀಡಲಾಗುತ್ತಿದ್ದು, ಈ ಯೋಜನೆಯಿಂದ 40 ಹಳ್ಳಿಗಳ 75 ಸಾವಿರ ಎಕರೆ ಭೂಮಿ ನೀರಾವರಿಯಾಗಲಿದೆ. 650 ಕೋ.ರೂ ವೆಚ್ಚದ ಈ ಯೋಜನೆ ಸಾಕಾರಗೊಳಿಸದೇ ಹಾಗೆ ಬರಲಾಗಿತ್ತು. ಆದರೆ ತಾವು ಬಂದ ಮೇಲೆ ಚಾಲನೆ ದೊರಕಿರುವುದು ನಿಜಕ್ಕೂ ಒಂದು ಮೈಲುಗಲ್ಲಾಗಿದೆ ಎಂದು ಹೇಳಿದರು.

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಗೂ ಚಾಲನೆ: ಮನೆ- ಮನೆಗೆ ನೀರು ಯೋಜನೆಯ ಮಾದರಿಯಂತೆ ಹರ ಖೇತ ಕೊ ಪಾನಿ ಯೋಜನೆಗೂ ಅಂದರೆ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಪಿಎಂಕೆಎಸ್ ವೈ- ಎಚ್ ಕೆಕೆಪಿ) 93 ಕೋ.ರೂ ವೆಚ್ಚದ 28 ಬ್ಯಾರೇಜ್ ಗಳ ನಿರ್ಮಾಣ ಕಾರ್ಯಕ್ಕೂ ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿ ಅಡಿಗಲ್ಲು ನೆರವೇರಿಸುವರು.

ಕಲಬುರಗಿ- ಯಾದಗಿರಿ ಜಿಲ್ಲೆಯ ಅಂತರ್ಜಲ ಹೆಚ್ಚಿಸುವ ನಿಟ್ಟಿನಲ್ಲಿ ಪ್ರತಿ ಹೊಲಕ್ಕೆ ನೀರು ಕಲ್ಪಿಸುವ ಮಹತ್ವಾಕಾಂಕ್ಷೆ ಯೋಜನೆ ಇದಾಗಿದ್ದು,ಸೇಡಂ ತಾಲೂಕಿನ ಕಮಲಾವತಿ ನದಿಗೆ ದೇವನೂರ ಗ್ರಾಮದ ಬಳಿ ಕಾಲುವೆ‌ ಮೂಲಕ ಹೊಲ ಕ್ಕೆ ನೀರು ಹರಿಸುವ ಕಾಮಗಾರಿ ಗೆ ಹಾಗೂ ತೊಟ್ನಳ್ಳಿ- ಸಂಗಾವಿ ಗ್ರಾಮದ ನಡುವೆ ತಲಾ 7.32 ಕೋ.ರೂ ವೆಚ್ಚದ ಬ್ರಿಜ್ ಕಂ ಬ್ಯಾರೇಜ್ ನಿರ್ಮಿಸಿ ಕಾಲುವೆ ‌ಮೂಲಕ ಹೊಲಗಳಿಗೆ ನೀರುಣಿಸುವ, ಅದೇ ರೀತಿ ಕಾಚಾವರ ಗ್ರಾಮದ ಬಳಿ 2.58 ಕೋ.ರೂ ಮೊತ್ತದ ಕಾಮಗಾರಿ, ಚಂದಾಪುರ ಗ್ರಾಮ್ ಮಲ್ಲಿಕಾರ್ಜುನ ದೇವಾಲಯ ಹತ್ತಿರ 2.81 ಕೋ.ರೂ ಮೊತ್ತದ ಕಾಮಗಾರಿ ಸೇರಿ ಒಟ್ಟಾರೆ 28 ಕಾಮಗಾರಿಗಳಿಗೆ 138 ಕೋ.ರೂ ಮೊತ್ತದ ಕಾಮಗಾರಿಗಳಿಗೆ ಸಚಿವರು ಚಾಲನೆ ನೀಡುವರು.

ಹೊಲದ ಪಕ್ಕದಲ್ಲೇ ಇರುವ ಹಳ್ಳ ಕೊಳ್ಳಗಳು, ಬ್ಯಾರೇಜ್, ಕೆರೆ ಕಾಲುವೆಗಳ ಮೂಲಕ ಹೊಲ ಕ್ಕೆ ನೀರು ಹರಿಸಿ ಚಿಕ್ಕ ಪುಟ್ಟ ಬೆಳೆಗಳನ್ನು ಬೆಳೆಯುವ ಮಹತ್ವಾಕಾಂಕ್ಷೆ ಯೋಜನೆ ಇದಾಗಿದೆ ಎಂದರು.

ಅದಲ್ಲದೇ ಸನ್ನತಿ ಬ್ಯಾರೇಜ್ ದಿಂದ ಸೇಡಂ ತಾಲೂಕಿನ 54 ಕೆರೆಗಳಿಗೆ ನೀರು ತುಂಬುವ 592 ಕೋ.ರೂ ವೆಚ್ಚದ ಯೋಜನೆಗೆ ಡಿಪಿಆರ್ ಸಿದ್ಧವಾಗಿದೆ. ‌ಈಯೋಜನೆಯೂ ಮುಂದಿನ ದಿನಗಳಲ್ಲಿಕಾರ್ಯಾನುಷ್ಡಾನಗೊಳ್ಳಲಿದೆ ಎಂದರು.

ಸೇಡಂದಲ್ಲಿ ಬಸವಣ್ಣನವರ, ಅಂಬಿಗರ ಚೌಡಯ್ಯ, ಸಂಗೋಳಿ ರಾಯಣ್ಣ, ಮಾದಾರ ಚನ್ನಯ್ಯ, ಶಿವಾಜಿ ಪ್ರತಿಮೆಗಳನ್ನು ಸ್ಥಾಪಿಸಲಾಗಿದೆಯಲ್ಲದೇ ದೇವಾಲಯ ಅಭಿವೃದ್ಧಿ ಗಳಿಗಾಗಿ 20 ಕೋ.ರೂ ಖರ್ಚು ಮಾಡಲಾಗಿದೆ. ‌ಕೊರೊನಾ ನಡುವೆ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ. ಒಟ್ಟಾರೆ ಅಭಿವೃದ್ಧಿ ಕಾರ್ಯಗಳ ಕುರಿತಾಗಿ ಶ್ವೇತ ಪತ್ರದ ಪುಸ್ತಕವೊಂದನ್ನು ಹೊರ ತರಲಾಗುತ್ತಿದೆ. ಇದನ್ನು ಎಲ್ಲರಿಗೂ ವಿತರಿಸಲಾಗುವುದು ಎಂದು ರಾಜಕುಮಾರ ಪಾಟೀಲ್ ತೇಲ್ಕೂರ ಇದೇ ಸಂದರ್ಭದಲ್ಲಿ ತಿಳಿಸಿದರು. ಕೆಕೆಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕ ಎಂ. ರಾಚಪ್ಪ ಹಾಗೂ ನಿಗಮದ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.