![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 27, 2023, 4:09 PM IST
ಮುಂಬಯಿ: ರಾಹುಲ್ ಗಾಂಧಿ ಅವರು ಸಾವರ್ಕರ್ ಅಲ್ಲದ ಕಾರಣ ಕ್ಷಮೆ ಕೇಳುವುದಿಲ್ಲ ಎಂದು ಹೇಳುತ್ತಿದ್ದಾರೆ, ಸಾವರ್ಕರ್ ಅವರು ಕ್ಷಮೆಯಾಚಿಸಿದ್ದಾರೆ ಎಂಬುದನ್ನು ತೋರಿಸುವ ದಾಖಲೆಗಳನ್ನು ತೋರಿಸಲು ನಾನು ಅವರಿಗೆ ಸವಾಲು ಹಾಕುತ್ತೇನೆ ಎಂದು ವಿಡಿ ಸಾವರ್ಕರ್ ಮೊಮ್ಮಗ ರಂಜಿತ್ ಸಾವರ್ಕರ್ ಸೋಮವಾರ ಸವಾಲು ಹಾಕಿದ್ದಾರೆ.
ವ್ಯತಿರಿಕ್ತವಾಗಿ ರಾಹುಲ್ ಗಾಂಧಿ ಅವರು ಸುಪ್ರೀಂ ಕೋರ್ಟ್ ಗೆ ಎರಡು ಬಾರಿ ಕ್ಷಮೆಯಾಚಿಸಿದ್ದಾರೆ. ರಾಹುಲ್ ಗಾಂಧಿ ಏನು ಮಾಡಿದರೂ ಬಾಲಿಶ. ರಾಜಕೀಯ ಪ್ರಚಾರಕ್ಕೆ ದೇಶಭಕ್ತರ ಹೆಸರು ಬಳಸುವುದು ಶೋಚನೀಯ ಎಂದು ರಂಜಿತ್ ಸಾವರ್ಕರ್ ಕಿಡಿ ಕಾರಿದ್ದಾರೆ.
ಇದನ್ನೂ ಓದಿ: ರಾಷ್ಟ್ರೀಯ ಸ್ಮಾರಕವಾಗಿ ರಾಮ ಸೇತು: ಸುಪ್ರೀಂಗೆ ಮತ್ತೊಂದು ಅರ್ಜಿ
ನಾನು ಸಾವರ್ಕರ್ ಅಲ್ಲ, ನಾನು ಗಾಂಧಿ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ . ಈ ಕಾರಣಕ್ಕಾಗಿ ಸೋಮವಾರ ರಾತ್ರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆಯಲಿರುವ ಸಭೆಗೆ ಹಾಜರಾಗದಿರಲು ಉದ್ಧವ್ ಠಾಕ್ರೆ ಬಣ ನಿರ್ಧರಿಸಿದೆ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಹೇಳಿಕೆ ನೀಡಿದ್ದಾರೆ.
ಇನ್ನೊಂದೆಡೆ ಮಾಹಾರಾಷ್ಟ್ರ ದಲ್ಲೂ ರಾಹುಲ್ ಹೇಳಿಕೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಹಿಂದೂ ಪರ ಸಂಘಟನೆಗಳು ಕಿಡಿ ಕಾರಿವೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.