![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 28, 2023, 12:17 PM IST
ಚಿಕ್ಕಮಗಳೂರು: ನಮ್ಮ ಮೊದಲ ರಾಜಕೀಯ ವಿರೋಧಿ ಜೆಡಿಎಸ್ ಎಂದು ಅಮಿತ್ ಶಾ ಹೇಳಿದ್ದಾರೆ. ಹೀಗಿರುವಾಗ ಹೊಂದಾಣಿಕೆ ಎಲ್ಲಿಂದ. ಹೊಂದಾಣಿಕೆ ಪ್ರಶ್ನೆಯೇ ಇಲ್ಲ ಎಂದು ಚಿಕ್ಕಮಗಳೂರಿನಲ್ಲಿ ಶಾಸಕ ಸಿ.ಟಿ.ರವಿ ಹೇಳಿದ್ದಾರೆ.
ಕಳೆದ ಬಾರಿ ಕೂಡ ನಾವು ಯಾವುದೇ ಹೊಂದಾಣಿಕೆ ಮಾಡಿಕೊಂಡಿರಲಿಲ್ಲ. ಹೊಂದಾಣಿಕೆಯಾಗಿದ್ರೆ, ಹೆಚ್.ಡಿ.ಕೆ. ವಿರುದ್ಧ ಯೋಗೀಶ್ವರ್ ಸ್ಪರ್ಧೆ ಮಾಡ್ತಿರಲಿಲ್ಲ ಎಂದರು.
ನನ್ನ ವಿರುದ್ಧ ಜೆಡಿಎಸ್ ಅಭ್ಯರ್ಥಿ 32 ಸಾವಿರ ಮತ ತೆಗೆದುಕೊಂಡರು. ಹೊಂದಾಣಿಕೆ ಮಾಡಿದ್ರೆ ಅಷ್ಟು ಮತಗಳ ತೆಗೆದುಕೊಳ್ತಿದ್ರಾ ಎಂದು ಪ್ರಶ್ನಿಸಿದರು.
ನಮಗೆ ಹೊಂದಾಣಿಕೆ ಅಗತ್ಯವಿಲ್ಲ, ಬಿಜೆಪಿ ಸ್ವತಂತ್ರವಾಗಿಯೇ ಸ್ಪರ್ಧೆ ಮಾಡುತ್ತದೆ. ವರುಣಾದಲ್ಲಿ ಸಿದ್ದು ವಿರುದ್ಧ ಬಿಜೆಪಿಯಿಂದ ಯಾರು ಸ್ಪರ್ಧಿಸುತ್ತಾರೆ ಎಂಬುದನ್ನು ಪಾರ್ಲಿಮೆಂಟರಿ ಬೋರ್ಡ್ ಸಿದ್ಧ ಪಡಿಸುತ್ತದೆ ಎMದರು.
ನಾವು ಯಾರ ವಿರುದ್ಧವೂ ಹೇಳುತ್ತಿಲ್ಲ. ನಾವು ಬಿಜೆಪಿ ಪರ ಅಷ್ಟೆ, ನಮ್ಮದು ವೈಚಾರಿಕ ರಾಜಕೀಯ ಪಕ್ಷ, ನಮ್ಮ ಪಕ್ಷದ ವಿಚಾರವನ್ನು ಬೆಳೆಸುವುದಷ್ಟೆ ನಮ್ಮ ಗುರಿ. ನಮ್ಮದು ನಕಾರಾತ್ಮಕ ರಾಜಕೀಯ ಅಲ್ಲ, ಸಕಾರಾತ್ಮಕ ರಾಜಕೀಯ, ಪಕ್ಷ ಬೆಳೆಸುವುದು ನಮ್ಮ ಗುರಿ ಎಂದು ಹೇಳಿದರು.
ಮಾಡಾಳು ವಿರೂಪಾಕ್ಷಪ್ಪ ಬಂಧನ ಹಿನ್ನೆಲೆ ಮಾತನಾಡಿದ ಶಾಸಕ ಸಿ.ಟಿ.ರವಿ, ಕಾನೂನಿನ ದೃಷ್ಠಿಯಲ್ಲಿ ಎಲ್ಲರೂ ಸಮಾನರು. ಕಾನೂನು ಅದರ ಕೆಲಸ ಮಾಡುತ್ತೆ, ತನಿಖೆ ಹಂತದಲ್ಲಿ ನಾವು ಮಧ್ಯಪ್ರವೇಶ ಮಾಡುವ ಪ್ರಶ್ನೆಯೇ ಇಲ್ಲ ಎಂದ ಅವರು, ನಾವು ಕಾನೂನಿಗಿಂತ ಮಿಗಿಲು ಅಂತ ಕಾಂಗ್ರೆಸ್ಸಿನ ಒಂದು ಕುಟುಂಬ ಭಾವಿಸುತ್ತಿದೆ. ಸಂವಿಧಾನ, ಕಾನೂನಿಗಿಂತ ಮಿಗಿಲು ಹಾಗೂ ಎತ್ತರದಲ್ಲಿ ಇರುವವರು ಎಂದು ಭಾವಿಸುತ್ತೆ ಎಂದರು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.