ಮಿಸ್ಟರ್ ಹಾಲಪ್ಪ… ಅಭಿವೃದ್ಧಿ ಸಂಬಂಧ ಬಹಿರಂಗ ಚರ್ಚೆ; ಬೇಳೂರು ಸವಾಲು

ದಬ್ಬಾಳಿಕೆ ರಾಜಕಾರಣವನ್ನು ಸಾಗರ ಕ್ಷೇತ್ರದ ಜನರು ಸಹಿಸುವುದಿಲ್ಲ ...

Team Udayavani, Mar 30, 2023, 5:20 PM IST

1-csa-dsasad

ಸಾಗರ: ಮಿಸ್ಟರ್ ಹಾಲಪ್ಪ ಸಾಗರ ಕ್ಷೇತ್ರದ ಅಭಿವೃದ್ಧಿಗೆ ನಿಮ್ಮ ಕೊಡುಗೆಯೇನು, ನಾನು ಮತ್ತು ಕಾಗೋಡು ನೀಡಿದ ಕೊಡುಗೆ ಏನು ಎನ್ನುವುದನ್ನು ಚರ್ಚೆ ಮಾಡಲು ಗಾಂಧಿ ಮೈದಾನಕ್ಕೆ ಬನ್ನಿ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಘೋಷಿತ ಕಾಂಗ್ರೆಸ್ ಅಭ್ಯರ್ಥಿ ಗೋಪಾಲಕೃಷ್ಣ ಬೇಳೂರು ಸವಾಲು ಎಸೆದಿದ್ದಾರೆ.

ಇಲ್ಲಿನ ಮಹಿಳಾ ಸಮಾಜದ ಆವರಣದಲ್ಲಿ ಗುರುವಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾಗರಕ್ಕೆ ಕುಡಿಯುವ ನೀರು ತರಲು 70 ಕೋಟಿ ರೂ. ಬಂದದ್ದು ನನ್ನ ಕಾಗೋಡು ಅವಧಿಯಲ್ಲಿ, ತಹಶೀಲ್ದಾರ್ ಕಚೇರಿ ನಿರ್ಮಾಣಕ್ಕೆ ಹಣ ಬಂದಿದ್ದು ಕಾಗೋಡು ಅವಧಿಯಲ್ಲಿ ಎನ್ನುವುದು ಮರೆಯಬೇಡಿ. ತಹಶೀಲ್ದಾರ್ ಕಚೇರಿಯನ್ನು ಈತನಕ ಲೋಕಾರ್ಪಣೆ ಮಾಡಲು ಆಗದ ನೀವು ಮಾವ ಅಳಿಯ ಏನು ಅಭಿವೃದ್ಧಿ ಮಾಡಿಲ್ಲ ಎಂದು ಹೇಳುತ್ತಿರುವುದು ಹಾಸ್ಯಾಸ್ಪದವಾಗಿದ್ದು, ಚರ್ಚೆಗೆ ಬನ್ನಿ ಎಂದು ಸವಾಲು ಎಸೆದರು.

ನನಗೆ ಟಿಕೆಟ್ ಸಿಗುವುದಿಲ್ಲ ಎಂದು ಹಾಲಪ್ಪ ಹೋದಲ್ಲಿ ಬಂದಲ್ಲಿ ಹೇಳಿದ್ದರು. ಈಗ ನನಗೆ ಕಾಂಗ್ರೆಸ್ ಪಕ್ಷ ಟಿಕೆಟ್ ಕೊಟ್ಟಿದೆ. ಆದರೆ ಬಿಜೆಪಿಯಲ್ಲಿ ಹಾಲಪ್ಪ ಅವರಿಗೆ ಟಿಕೆಟ್ ಕೊಡಬೇಡಿ ಎಂದು ಸಭೆಗಳನ್ನು ನಡೆಸಲಾಗುತ್ತಿದೆ. ಒಂದೊಮ್ಮೆ ಹಾಲಪ್ಪ ಅವರಿಗೆ ಟಿಕೆಟ್ ಕೊಟ್ಟರೆ ಮತದಾರರ ಕೈಕಾಲು ಹಿಡಿದು ಅವರನ್ನು ಸೋಲಿಸುತ್ತೇವೆ ಎಂದು ಬಿಜೆಪಿ ಹಿರಿಯ ನಾಯಕರೇ ಸಭೆ ನಡೆಸಿ ಕರೆ ನೀಡುತ್ತಿದ್ದಾರೆ. ಎಂಡಿಎಫ್‌ನಲ್ಲಿ ಗಲಾಟೆ ಮಾಡಿಸಿ ಬ್ರಾಹ್ಮಣ ಸಮುದಾಯದ ಶ್ರೀಪಾದ ಹೆಗಡೆ, ಲಿಂಗಾಯಿತ ಸಮಾಜದ ಜಗದೀಶ್ ಗೌಡ ಅವರ ಮೇಲೆ ಹಲ್ಲೆ ನಡೆಸಿದ್ದೇ ಹಾಲಪ್ಪ ಅವರ ಸಾಧನೆಯಾಗಿದೆ. ಭ್ರಷ್ಟಾಚಾರದ ಹಣ, ಅಹಂಕಾರವನ್ನು ತುಂಬಿಕೊಂಡಿರುವ ಶಾಸಕ ಹಾಲಪ್ಪ ಅವರ ದಬ್ಬಾಳಿಕೆ ರಾಜಕಾರಣವನ್ನು ಸಾಗರ ಕ್ಷೇತ್ರದ ಜನರು ಸಹಿಸುವುದಿಲ್ಲ ಎಂದರು.

ಹಿಂದಿನ ಚುನಾವಣೆಯಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗುತ್ತಾರೆ ಎನ್ನುವ ಕಾರಣಕ್ಕೆ ಜನರು ಹಾಲಪ್ಪ ಕೈ ಹಿಡಿದಿದ್ದಾರೆ. ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದ ಯಡಿಯೂರಪ್ಪ ಅವರನ್ನು ಕಣ್ಣೀರು ಹಾಕಿಸಿ ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿದ ಬಿಜೆಪಿ ವರ್ತನೆಯನ್ನು ರಾಜ್ಯದ ಜನರು ಯಾವತ್ತೂ ಕ್ಷಮಿಸುವುದಿಲ್ಲ. ಸಾಗರ ಕ್ಷೇತ್ರವ್ಯಾಪ್ತಿಯಲ್ಲಿ ಒಂದೂ ನಿವೇಶನ ಕೊಟ್ಟಿಲ್ಲ, ತಮ್ಮ ನೆಂಟರಿಗೆ ಬಗರ್‌ಹುಕುಂ ಭೂಮಿ ಕೊಟ್ಟಿದ್ದಾರೆ. ಎಲ್ಲೆಂದರಲ್ಲಿ ಮದ್ಯದಂಗಡಿ ತೆರೆದು ಸಾಗರವನ್ನು ಗೋವಾವನ್ನಾಗಿ ಮಾರ್ಪಡಿಸುತ್ತಿದ್ದಾರೆ. ರಾಜ್ಯದ ಬಿಜೆಪಿ ಸರ್ಕಾರ ಜನವಿರೋಧಿಯಾಗಿದೆ. ಪಕ್ಷದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯವಿದ್ದರೂ ಕಾಗೋಡು ನೇತೃತ್ವದಲ್ಲಿ ಎಲ್ಲವನ್ನೂ ಸರಿಪಡಿಸಿಕೊಳ್ಳುತ್ತೇವೆ. ಮೇ 10 ರಂದು ನಡೆಯುವ ಚುನಾವಣೆಯಲ್ಲಿ ತಮ್ಮನ್ನು ಗೆಲ್ಲಿಸುವ ಮೂಲಕ ಎಲ್ಲ ವರ್ಗದ ಹಿತಕಾಯುವ ಕಾಂಗ್ರೇಸ್ ಪಕ್ಷವನ್ನು ಬೆಂಬಲಿಸಲು ಮನವಿ ಮಾಡಿದರು.

ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ರಾಜ್ಯದಲ್ಲಿ ಕಾಂಗ್ರೆಸ್ ಮಾತ್ರ ಎಲ್ಲ ವರ್ಗವನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ, ಸಾಮಾಜಿಕ ನ್ಯಾಯ ಕಲ್ಪಿಸುವ ಪಕ್ಷವಾಗಿದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಜನರಿಗೆ ಏನೆಲ್ಲಾ ಸೌಲಭ್ಯ ಕೊಡುತ್ತೇವೆ ಎಂದು ಗ್ಯಾರೆಂಟಿ ಕಾರ್ಡ್ ಮೂಲಕ ಭರವಸೆ ನೀಡಿದ್ದಾರೆ. ಸಾಗರ ಕ್ಷೇತ್ರವ್ಯಾಪ್ತಿಯಲ್ಲಿ ಅಭಿವೃದ್ಧಿ ನಿಂತ ನೀರಾಗಿದ್ದು, ಗೋಪಾಲಕೃಷ್ಣ ಬೇಳೂರು ಅವರನ್ನು ಗೆಲ್ಲಿಸುವ ಮೂಲಕ ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಲು ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು.

ವಿಧಾನ ಪರಿಷತ್ ಮಾಜಿ ಸದಸ್ಯೆ ಪ್ರಫುಲ್ಲಾ ಮಧುಕರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್.ಜಯಂತ್, ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಎನ್.ರಮೇಶ್ ಮಾತನಾಡಿದರು. ವೇದಿಕೆಯಲ್ಲಿ ಸುರೇಶಬಾಬು, ಮಧುಮಾಲತಿ, ಸುಮಂಗಲಾ ರಾಮಕೃಷ್ಣ, ಜ್ಯೋತಿ ಕೋವಿ, ರವಿಕುಮಾರ್, ಕೆ.ಹೊಳೆಯಪ್ಪ, ಮಕ್ಬೂಲ್ ಅಹ್ಮದ್, ಎಲ್.ಟಿ.ತಿಮ್ಮಪ್ಪ, ಗಣಪತಿ ಮಂಡಗಳಲೆ, ಸಬೀನಾ ತನ್ವೀರ್, ಅಣ್ಣಪ್ಪ ಭೀಮನೇರಿ, ತಸ್ರೀಫ್ ಇಬ್ರಾಹಿಂ, ಎಲ್.ಚಂದ್ರಪ್ಪ ಇನ್ನಿತರರು ಹಾಜರಿದ್ದರು. ತಾರಾಮೂರ್ತಿ ಸ್ವಾಗತಿಸಿದರು. ಮೈಕೆಲ್ ಡಿಸೋಜ ವಂದಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.