ವಿರೋಧದ ಮಧ್ಯೆಯೂ ಪೈಪ್‌ ಹಾಕಿದ ಅಧಿಕಾರಿಗಳು; ‌ಯುವಶಕ್ತಿ ಸಂಘದ ಹೋರಾಟಕ್ಕೆ ಜಯ

ನಿಯಮದ ಪ್ರಕಾರ ಕೆಲಸ ಮಾಡುವುದು ಬಿಟ್ಟು ರಸ್ತೆ ಮಧ್ಯೆ ಪೈಪ್‌ ಹಾಕುವುದು ಯಾವ ನ್ಯಾಯ?

Team Udayavani, Apr 1, 2023, 5:09 PM IST

ವಿರೋಧದ ಮಧ್ಯೆಯೂ ಪೈಪ್‌ ಹಾಕಿದ ಅಧಿಕಾರಿಗಳು; ‌ಯುವಶಕ್ತಿ ಸಂಘದ ಹೋರಾಟಕ್ಕೆ ಜಯ

ದೋಟಿಹಾಳ: ಹೈದ್ರಾಬಾದ್‌-ಕರ್ನಾಟಕ ಯುವಶಕ್ತಿ ಸಂಘದವರು ಗ್ರಾಮದ ಮೂರು ಪ್ರಮುಖ ಬೇಡಿಕೆ ಈಡೇರಿಗಾಗಿ ಒತ್ತಾಯಿಸಿ ಧರಣಿ ಸತ್ಯಾಗ್ರಹ ಮಾಡಿದರು. ಈ ವೇಳೆ ತಾತ್ಕಾಲಿಕವಾಗಿ ರಸ್ತೆ ಮಧ್ಯ ಪೈಪ್‌ ಹಾಕಿ ಸಂಚಾರಕ್ಕೆ ಅನುಕೂಲ ಮಾಡಿಕೊಡುತ್ತೇವೆ ಎಂದು ಹೋರಾಟಗಾರರಿಗೆ ಲಿಖೀತ ಭರವಸೆ ನೀಡಿದ ಕಾರಣ ಇಂದು ರಸ್ತೆಯ ಮಧ್ಯೆ ಪೈಪ್‌ ಹಾಕಿ ಸಂಚಾರಕ್ಕೆ ಅನುಕೂಲ ಮಾಡಿದರು.

ಕಳೆದ 5-6 ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ರಸ್ತೆ ಕಾಮಗಾರಿ ಕೆಲಸ ಇಂದು ಒಂದು ಹಂತಕ್ಕೆ ಬಂದಿದೆ. ಆದರೆ ರಸ್ತೆ ಅಗಲೀಕರಣದ ನಿಮಯ ಪಾಲಿಸದೇ ಮತ್ತು ದೋಟಿಹಾಳ ಗ್ರಾಪಂ ಸಾಮಾನ್ಯ ಸಭೆಯಲ್ಲಿ ಚರ್ಚೆಯಾಗಿ ಯಾವುದೇ ಕಾರಣಕ್ಕೂ ಪೈಪ್‌ ಹಾಕಲು ನಮ್ಮ ಒಪ್ಪಿಗೆ ಇಲ್ಲ. ರಸ್ತೆ ಅಗಲೀಕರಣ ಮಾಡಿ ಎರಡು ಕಡೆ ಚರಂಡಿ ನಿರ್ಮಿಸಿ ಎಂದು ಜಿಲ್ಲಾಧಿಕಾರಿ, ಸಿಇಒ, ಲೋಕೋಪಯೋಗಿ ಇಲಾಖೆಗೆ 2018ರಲ್ಲಿ ಮನವಿ ಸಲ್ಲಿಸಲಾಗಿದೆ. ಆದರೂ ಇದುವರೆಗೂ ಯಾವುದೇ ಕ್ರಮ ಆಗಿರಲಿಲ್ಲ.

ಕಾಮಗಾರಿ ಸ್ಥಳಕ್ಕೆ ದೋಟಿಹಾಳ ಗ್ರಾಮದ ಮಹಿಳೆಯರು ಆಗಮಿಸಿ ಯಾವುದೇ ಕಾರಣಕ್ಕೂ ರಸ್ತೆ ಮಧ್ಯೆ ಪೈಪ್‌ ಹಾಕಲು ಬಿಡುವುದಿಲ್ಲ. ರಸ್ತೆ ಪಕ್ಕದಲ್ಲಿ ಚರಂಡಿ ಮಾಡಿ. ರಸ್ತೆ ಮಧ್ಯೆ ಪೈಪ್‌ ಹಾಕಿದರೆ ತೊಂದರೆಯಾಗುತ್ತದೆ. ಇದರ ಬಗ್ಗೆ ಈಗಾಗಲೇ ತಹಶೀಲ್ದಾರ್‌ ಅವರಿಗೆ ಮನವಿ ನೀಡಲಾಗಿದೆ. ಈ ವೇಳೆ ಪರಿಸ್ಥಿತಿ ಕೈಮೀರುವ ಲಕ್ಷಣಗಳು ತಿಳಿದ ಪಿಎಸ್‌ಐ ಮೌನೇಶ ರಾಠೊಡ್‌ ಅವರು ಇದು ಸರಕಾರದ ಕೆಲಸವಾಗಿದೆ.

ಸರಕಾರದ ಕೆಲಸಕ್ಕೆ ತೊಂದರೆ ಮಾಡಿದರೆ ಸೂಕ್ತ ಕ್ರಮಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು. ಈ ವೇಳೆ ಮಹಿಳೆಯರು ಜೆಸಿಬಿ ಹತ್ತಿರ ಹೋಗಿ ನಿಂತರು. ಪರಿಸ್ಥಿತಿ ಕೈಮೀರುವ ಲಕ್ಷಣ ತಿಳಿದು ಲಾಠಿ ಬೀಸಿ ಕೆಲವರನ್ನು ವಶಕ್ಕೆ ಪಡೆದುಕೊಂಡರು.

ಮಹಿಳೆಯರ ಆರೋಪ: ರಸ್ತೆ ಕಾಮಗಾರಿ ನಿಯಮ ಉಲ್ಲಂಘಿಸಿ ಹೋರಾಟಗಾರರ ಒತ್ತಡಕ್ಕೆ ಮಣಿದು ರಸ್ತೆ ಮಧ್ಯೆ ಪೈಪ್‌ ಹಾಕುತ್ತಿರುವುದನ್ನು ಪಶ್ನಿಸಿದರೆ ಪೊಲೀಸರು ಗ್ರಾಮಸ್ಥರನ್ನೇ ವಶಕ್ಕೆ ಪಡೆಯುತ್ತಿದ್ದಾರೆ. ಸರಕಾರದ ನಿಯಮದ ಪ್ರಕಾರ ಕೆಲಸ ಮಾಡುವುದು ಬಿಟ್ಟು ರಸ್ತೆ ಮಧ್ಯೆ ಪೈಪ್‌ ಹಾಕುವುದು ಯಾವ ನ್ಯಾಯ ? ಎಂದು ಅಧಿಕಾರಿಗಳಿಗೆ ಮಹಿಳೆಯರು ಪ್ರಶ್ನೆ ಮಾಡಿದರು.

ಇದಕ್ಕೆ ಬೆಲೆ ಕೊಡದ ಅಧಿಕಾರಿಗಳು ರಸ್ತೆಯ ಮಧ್ಯೆ ಪೈಪ್‌ ಹಾಕಿ ಹೊರಟು ಹೋದ ಅಧಿಕಾರಿಗಳು. ಇದರ ಬಗ್ಗೆ ವಿಚಾರಿಸಲು ತಹಶೀಲ್ದಾರ್‌ ರಾಘವೇಂದ್ರರಾವ್‌ ಕುಲಕರ್ಣಿ ಅವರನ್ನು ಸಂಪರ್ಕಿಸಿದರು ಅವರು ಕರೆ ಸ್ವೀಕರಿಸುತ್ತಿಲ್ಲ.ಸರಕಾರದ ನಿಯಮದ ಪ್ರಕಾರ ರಸ್ತೆ ಅಗಲೀಕರಣ ಮಾಡಿ. ಎರಡು ಕಡೇ ಚರಂಡಿ ನಿರ್ಮಿಸಬೇಕಾದ ಅಧಿಕಾರಿಗಳು ಹೋರಾಟಗಾರರ ಒತ್ತಡಕ್ಕೆ ಮಣಿದು ರಸ್ತೆ ಮಧ್ಯೆ ಪೈಪ್‌ ಹಾಕಿದ್ದಾರೆ. ನಮ್ಮ ಸಮಸ್ಯೆ ಕೇಳುವರು ಯಾರು ಎಂದು ದೋಟಿಹಾಳ ಗ್ರಾಮದ ಮಹಿಳೆಯರು ಅಳಲು ತೋಡಿಕೊಂಡರು.

ತಹಶೀಲ್ದಾರ್‌ ಅವರ ಆದೇಶದ ಮೇರೆಗೆ ಕೆಲಸ ನೀಡುವ ಸ್ಥಳಕ್ಕೆ ಬಂದೋಬಸ್ತ್ ನೀಡಿದ್ದೇವೆ. ಸರ್ಕಾರದ ಕೆಲಸಕ್ಕೆ ಅಡ್ಡಿಪಡಿಸಿದ ಕಾರಣ ಕೆಲವರನ್ನು ವಶಕ್ಕೆ ಪಡೆದುಕೊಂಡಿದ್ದೇವೆ.
ಮೌನೇಶ ರಾಠೊಡ, ಪಿಎಸ್‌ಐ ಕುಷ್ಟಗಿ

ಟಾಪ್ ನ್ಯೂಸ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

Shettar (3)

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

15

Kamanur village: ದಾರಿ ತೋರುವ ಮಾದರಿ ಗ್ರಾಮ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-gangavathi-3

Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ

CM ಸಿದ್ದರಾಮಯ್ಯನವರಿಗೆ ಗಂಗಾವತಿಯಲ್ಲಿ ಅದ್ದೂರಿಯ ಸ್ವಾಗತ

CM ಸಿದ್ದರಾಮಯ್ಯನವರಿಗೆ ಗಂಗಾವತಿಯಲ್ಲಿ ಅದ್ದೂರಿಯ ಸ್ವಾಗತ

Koppala; ‘ಒಂದು ವರ್ಷ ಅವಕಾಶ ಕೊಡಿ’ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

Koppala; ‘ಒಂದು ವರ್ಷ ಅವಕಾಶ ಕೊಡಿ’ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

ಕುಷ್ಟಗಿ: ಹೆಚ್ಚಿದ ಕಾರ್ಯಭಾರ-ಒತ್ತಡದಲ್ಲಿ ಪೊಲೀಸ್‌ ಸಿಬ್ಬಂದಿ

ಕುಷ್ಟಗಿ: ಹೆಚ್ಚಿದ ಕಾರ್ಯಭಾರ-ಒತ್ತಡದಲ್ಲಿ ಪೊಲೀಸ್‌ ಸಿಬ್ಬಂದಿ

Koppala: ಆದಷ್ಟು ಬೇಗ ಆರ್ಥಿಕ ಗಣತಿ ವರದಿ ಜಾರಿಯಾಗಲಿ: ಬಸವರಾಜ ರಾಯರಡ್ಡಿ

Koppala: ಆದಷ್ಟು ಬೇಗ ಆರ್ಥಿಕ- ಜಾತಿ ಗಣತಿ ವರದಿ ಜಾರಿಯಾಗಲಿ: ಬಸವರಾಜ ರಾಯರಡ್ಡಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

Shettar (3)

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

POlice

Kundapura: ಅಕ್ರಮ ಮದ್ಯ ಸಾಗಾಟ; ವಶ

courts-s

POCSO ಪ್ರಕರಣದ ಆರೋಪಿ ನಟಿ ಸಲ್ಲಿಸಿದ ನಿರೀಕ್ಷಣ ಜಾಮೀನು ಅರ್ಜಿ ವಜಾ

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.