ವಿದೇಶಗಳಲ್ಲಿದ್ದಾರೆ 28 ಖಲಿಸ್ಥಾನಿ ಉಗ್ರರು; ಕೇಂದ್ರ ಗೃಹ ಸಚಿವಾಲಯ ವರದಿಯಲ್ಲಿ ಉಲ್ಲೇಖ
ಅಮೆರಿಕ, ಪಾಕಿಸ್ತಾನ, ಕೆನಡ ಸೇರಿ ಹಲವು ದೇಶಗಳಿಂದ ಕಾರ್ಯಾಚರಣೆ
Team Udayavani, Apr 3, 2023, 7:23 AM IST
ನವದೆಹಲಿ: ನಾಪತ್ತೆಯಾಗಿರುವ ಖಲಿಸ್ತಾನಿ ನಾಯಕ ಅಮೃತ್ಪಾಲ್ ಸಿಂಗ್ಗಾಗಿ ತನಿಖೆ ಮುಂದುವರಿದಿರುವಂತೆಯೇ ಕೇಂದ್ರ ಗೃಹ ಸಚಿವಾಲಯ ವಿದೇಶಗಳಲ್ಲಿ ತಲೆಮರಿಸಿಕೊಂಡಿರುವ 28 ಅಗ್ರ ಪ್ರತ್ಯೇಕತಾವಾದಿಗಳ ಪಟ್ಟಿ ಬಿಡುಗಡೆ ಮಾಡಿದೆ.
ಈ ಪೈಕಿ ಹೆಚ್ಚಿನವರು ಖಲಿಸ್ತಾನಿ ಪ್ರತ್ಯೇಕವಾದಿ ಹೋರಾಟದಲ್ಲಿ ಗುರುತಿಸಿಕೊಂಡಿದ್ದಾರೆ.ಸತೀಂದ್ರಜಿತ್ ಸಿಂಗ್ ಅಲಿಯಾಸ್ ಗೋಲ್ಡಿ ಬ್ರಾರ್ ಅಮೆರಿಕದಲ್ಲಿ ತಲೆಮರೆಸಿಕೊಂಡಿದ್ದಾನೆ. ಬ್ರಾಬ್ ಮತ್ತು ಲಾರೆನ್ಸ್ ಬಿಷ್ಣಾಯ್ ಪಂಜಾಬಿ ಗಾಯಕ ಸಿಧು ಮೂಸೇವಾಲ ಕೊಲೆಯ ಮಾಸ್ಟರ್ಮೈಂಡ್ ಗಳಾಗಿದ್ದಾರೆ.
ಮತ್ತೊಬ್ಬ ಗ್ಯಾಂಗ್ಸ್ಟರ್ ಅನ್ಮೋಲ್ ಬಿಷ್ಣಾಯ್ ಅಲಿಯಾಸ್ ಭಾನು ಕೂಡ ಅಮೆರಿಕದಲ್ಲಿ ತಲೆಮರೆಸಿಕೊಂಡಿದ್ದಾನೆ ಎನ್ನಲಾಗಿದೆ. ಇದೇ ರೀತಿ ನಟೋರಿಯಸ್ ಗ್ಯಾಂಗ್ಸ್ಟರ್ಗಳಾದ ಹರ್ಜೋತ್ ಸಿಂಗ್ ಗಿಲ್, ಅಮೃತ್ ಬಾಲ್, ಸ್ನೋವರ್ ಧಲ್ಲಾನ್, ಲಖೀರ್ ಸಿಂಗ್ ಅಲಿಯಾಸ್ ಲಂಡಾ ಸೇರಿದಂತೆ ಒಟ್ಟು 28 ಮಂದಿ ಅಮೆರಿಕ, ಕೆನಡಾ, ದುಬೈ, ಐರೋಪ್ಯ ಒಕ್ಕೂಟ, ಅರ್ಮೇನಿಯಾ, ಪಾಕಿಸ್ತಾನ ಸೇರಿದಂತೆ ವಿವಿಧ ದೇಶಗಳಲ್ಲಿ ತಲೆಮರೆಸಿಕೊಂಡಿದ್ದಾರೆ.
ಅಸ್ಸಾಂ ಸಿಎಂಗೆ ಬೆದರಿಕೆ:
ಈ ನಡುವೆ, ಖಲಿಸ್ತಾನಿ ಬೆಂಬಲಿಗರು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮ ಅವರಿಗೆ ಬೆದರಿಕೆ ಹಾಕಿದ್ದಾರೆ. “ತಲೆಮರೆಸಿಕೊಂಡಿರುವ ಅಮೃತ್ಪಾಲ್ ಸಿಂಗ್ನ ಆರು ಸಹಚರರನ್ನು ಅಸ್ಸಾಂ ಸರ್ಕಾರ ಬಂಧಿಸಿ, ಜೈಲಿನಲ್ಲಿ ಅವರಿಗೆ ಕಿರುಕುಳ ನೀಡುತ್ತಿದೆ. ಇದು ಖಲಿಸ್ತಾನಿ ಬೆಂಬಲಿಗರು ಮತ್ತು ಭಾರತದ ವಿರುದ್ಧ ಹೋರಾಟ. ಇದರಲ್ಲಿ ನೀವು(ಶರ್ಮ) ಮಧ್ಯಪ್ರವೇಶಿಸಿ ಕುತ್ತು ತಂದುಕೊಳ್ಳದಿರಿ,’ ಎಂದು ಸಿಖ್ ಫಾರ್ ಜಸ್ಟಿಸ್ ಸಂಘಟನೆಯ ಉಗ್ರ ಗುರುಪತ್ವಾನ್ ಸಿಂಗ್ ಪನ್ನು ಬೆದರಿಕೆ ಹಾಕಿದ್ದಾನೆ.
ಇನ್ನೊಂದೆಡೆ, ಅಹ್ಮದಾಬಾದ್ನಲ್ಲಿ ಮಾ.8ರಂದು ನಡೆದಿದ್ದ ಕ್ರಿಕೆಟ್ ಪಂದ್ಯ ವೀಕ್ಷಿಸಲು ಆಗಮಿಸಬಾರದು ಎಂದು ಸಾರ್ವಜನಿಕರಿಗೆ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರು ಖಲಿಸ್ತಾನಿ ಬೆಂಬಲಿಗರನ್ನು ಉತ್ತರ ಪೊಲೀಸರು ಬಂಧಿಸಿದ್ದಾರೆ. ಅವರ ಬಳಿ ಇದ್ದ ಹಲವು ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್.. ಕಾಲಿನಲ್ಲಿ ನೇತಾಡಿದ ಮಗು.!
Chennai: ಕೆಲಸದ ಒತ್ತಡಕ್ಕೆ ಮತ್ತೊಂದು ಬಲಿ; ವೈಯರ್ ಸುತ್ತಿಕೊಂಡು ಟೆಕ್ಕಿ ಆ*ತ್ಮಹತ್ಯೆ
HIV vaccine; ಎಚ್ಐವಿ ತಡೆಗೆ 2 ಡೋಸ್ ಲಸಿಕೆ ಅಭಿವೃದ್ಧಿ: ಎಂಐಟಿ
Bullet Train; ಬೆಂಗಳೂರಿನಲ್ಲೇ ತಯಾರಾಗಲಿದೆ ದೇಶದ ಮೊದಲ ಬುಲೆಟ್ ರೈಲು?
Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Belagavi; 2ಎ ಮೀಸಲಾತಿ ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ
Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್.. ಕಾಲಿನಲ್ಲಿ ನೇತಾಡಿದ ಮಗು.!
Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ
Belthangady: ತೋಡಿಗೆ ಅಡಿಕೆ ಮರವೇ ಸಂಕ!
Tirupati Laddu Case; ದೇವಳಗಳನ್ನು ಸರ್ಕಾರದ ಸ್ವಾಧೀನದಿಂದ ಮುಕ್ತಗೊಳಿಸಿ: ಪೇಜಾವರ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.