ಮತದಾನ ಜಾಗೃತಿಗೆ ವಿದ್ಯಾರ್ಥಿಗಳಿಂದ ಪತ್ರ ಅಭಿಯಾನ : ಡಾ| ಕುಮಾರ್‌


Team Udayavani, Apr 4, 2023, 6:50 AM IST

ಮತದಾನ ಜಾಗೃತಿಗೆ ವಿದ್ಯಾರ್ಥಿಗಳಿಂದ ಪತ್ರ ಅಭಿಯಾನ : ಡಾ| ಕುಮಾರ್‌

ಮಂಗಳೂರು: ಮತದಾನ ಜಾಗೃತಿಗೆ ಜಿಲ್ಲೆಯ ಹಾಸ್ಟೆಲ್‌ಗ‌ಳಲ್ಲಿರುವ ವಿದ್ಯಾರ್ಥಿಗಳ ಮೂಲಕ “ಪತ್ರ ಅಭಿಯಾನ’ ನಡೆಸಲಾಗುವುದು ಎಂದು ದ.ಕ ಜಿಲ್ಲಾ “ಸ್ವೀಪ್‌’ ಮುಖ್ಯಸ್ಥ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಕುಮಾರ್‌ ತಿಳಿಸಿದ್ದಾರೆ.

ಸೋಮವಾರ ಜಿ.ಪಂ. ಕಚೇರಿಯಲ್ಲಿ ಸ್ವೀಪ್‌ ಸಮಿತಿ ವತಿಯಿಂದ ರೂಪಿಸಲಾದ “ಎಲೆಕ್ಷನ್‌-ಫೋಕಸ್‌’ ಚುನಾವಣ ಜಾಗೃತಿ ಇ-ಪೇಪರ್‌ ಅನಾವರಣಗೊಳಿಸಿ ಅವರು ಮಾತನಾಡಿದರು.
ಎಂಜಿನಿಯರಿಂಗ್‌, ಮೆಡಿಕಲ್‌ ಸಹಿತ ಎಲ್ಲ ಹಾಸ್ಟೆಲ್‌ ಗಳ ವಿದ್ಯಾರ್ಥಿಗಳಿಗೂ ಸ್ವೀಪ್‌ ವತಿಯಂದ ಪೋಸ್ಟ್‌ ಕಾರ್ಡ್‌ಗಳನ್ನು ಉಚಿತವಾಗಿ ನೀಡಲಾಗುವುದು. ಅವರು ತಮ್ಮ ಬಂಧುಮಿತ್ರರು, ಸಂಬಂಧಿಕರಿಗೆ ಪತ್ರ ಬರೆದು ತಪ್ಪದೆ ಮತದಾನ ಮಾಡುವಂತೆ ಮನವಿ ಮಾಡಲಿದ್ದಾರೆ. ಹಾಸ್ಟೆಲ್‌ಗ‌ಳನ್ನು ಹೊರತು ಪಡಿಸಿ ಮನೆಯಿಂದಲೇ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳಿಗೂ ಇದೇ ರೀತಿ ಪೋಸ್ಟ್‌ಕಾರ್ಡ್‌ ನೀಡಲಾಗುವುದು. ಅವರು ತಮ್ಮ ಗೆಳೆಯರು, ಸಂಬಂಧಿಕರಿಗೆ ಪತ್ರ ಬರೆಯಲಿದ್ದಾರೆ ಎಂದು ತಿಳಿಸಿದರು.

ಯಕ್ಷಗಾನ ವೇಷಧಾರಿಗಳಿಂದ ಜಾಗೃತಿ
ಯಕ್ಷಗಾನ ವೇಷಧಾರಿಗಳು ವಿಮಾನ ನಿಲ್ದಾಣ, ಬಸ್‌ – ರೈಲು ನಿಲ್ದಾಣ ಮೊದಲಾದೆಡೆ ಮತ  ದಾನ ಜಾಗೃತಿ ನಡೆಸ ಲಿದ್ದಾರೆ. ಕಸ ಸಂಗ್ರಹ ವಾಹನ ಗಳಲ್ಲೂ ಮತದಾನ ಜಾಗೃತಿ ಮಾಡ ಲಾಗುವುದು. ಮತಗಟ್ಟೆಗಳಲ್ಲಿ ಮೂಲ ಸೌಕರ್ಯ ಕಲ್ಪಿಸಲು ಒಟ್ಟು 35 ಲ.ರೂ. ಬಿಡುಗಡೆ ಮಾಡಲಾಗಿದೆ. ಹೆಚ್ಚುವರಿ ಅನುದಾನ ಅಗತ್ಯವಿದ್ದರೆ ಒದಗಿಸಲಾಗುವುದು ಎಂದು ಡಾ| ಕುಮಾರ್‌ ತಿಳಿಸಿದರು.

ಮತದಾನ ಹೆಚ್ಚಳಕ್ಕೆ ಕ್ರಮ
2013ರ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಶೇ. 74.48 ಹಾಗೂ 2018ರಲ್ಲಿ ಶೇ. 77.67 ಮತದಾನವಾಗಿತ್ತು. ಇದು ರಾಜ್ಯದ ಮತದಾನ ಪ್ರಮಾಣಕ್ಕಿಂತ ಶೇ.6ರಷ್ಟು ಹೆಚ್ಚು. ಆದರೆ ಮಂಗಳೂರು ನಗರವನ್ನೊಳಗೊಂಡ ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶೇ.10ರಷ್ಟು ಕಡಿಮೆ ಮತ ದಾನ ವಾಗಿತ್ತು. ಅದನ್ನು ಹೆಚ್ಚಿಸಲು “ಅಪಾರ್ಟ್‌ಮೆಂಟ್‌ ಅಭಿಯಾನ’ ನಡೆಸಲಾಗುವುದು ಎಂದರು.

ದಾಖಲೆ ಇಲ್ಲದ ಹಣವಿದ್ದರೆ ಮಾತ್ರ ಕ್ರಮ
50,000 ರೂ.ಗಳಿಗಿಂತ 10 ಲ.ರೂ.ವರೆಗಿನ ಮೊತ್ತದ ಹಣ ಸಾಗಿಸುವಾಗ ಸೂಕ್ತ ದಾಖಲೆಗಳನ್ನು ಇಟ್ಟು ಕೊಂಡಿದ್ದರೆ ಅಡ್ಡಿಪಡಿಸುವುದಿಲ್ಲ. ಸೂಕ್ತ ದಾಖಲೆ ಇಲ್ಲದಿದ್ದರೆ ಸ್ವಾಧೀನಪಡಿಸಿಕೊಳ್ಳಲಾಗುತ್ತದೆ. ಚೆಕ್‌ಪೋಸ್ಟ್‌ಗಳಲ್ಲಿ ಸ್ವಾಧೀನಪಡಿಸಿ ಜಿ.ಪಂ. ಸಿಇಒ ಅಧ್ಯಕ್ಷತೆಯ ಸಮಿತಿಗೆ ವರದಿ ಸಲ್ಲಿಸಲಾಗುತ್ತದೆ. ಅನಂತರ ಸಂಬಂಧಿಸಿದವರಿಗೆ ನೋಟೀಸು ನೀಡಿ ವಿಚಾರಣೆ ನಡೆಸಲಾಗುತ್ತದೆ. ವಿಚಾರಣೆ ವೇಳೆ ಅದು ಅಕ್ರಮ ಸಾಗಾಟವೆಂಬುದು ಕಂಡುಬಂದರೆ ಪ್ರಕರಣ ವನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗುತ್ತದೆ. 10 ಲ.ರೂ.ಗಳಿಗಿಂತ ಹೆಚ್ಚಿನ ಮೊತ್ತವನ್ನು ದಾಖಲೆ ಸಮೇತ ವಾಗಿ ಸಾಗಿಸಿದರೂ ಆದಾಯ ತೆರಿಗೆ ಇಲಾ ಖೆಗೆ ವರದಿ ನೀಡಲಾಗುತ್ತದೆ. ಒಂದು ವೇಳೆ ಹಣದ ಜತೆಗೆ ಚುನಾವಣೆ ಪ್ರಚಾರಕ್ಕೆ ಸಂಬಂಧಿಸಿದ ಸಾಮಗ್ರಿ ಗಳು ಪತ್ತೆಯಾದರೆ ನೇರವಾಗಿ ಎಫ್ಐಆರ್‌ ದಾಖಲಿಸ ಲಾಗುವುದು. ಹಣ ಸ್ವಾಧೀನಪಡಿಸಿ ಕೊಳ್ಳುವ ಮೊದಲು ಪೂರ್ಣವಾಗಿ ವೀಡಿಯೋ ಚಿತ್ರೀಕರಣ ನಡೆಸ ಲಾಗು ವುದು. ಸಾರ್ವಜನಿಕರಿಗೆ ತೊಂದರೆ ಯಾಗದ ರೀತಿಯಲ್ಲಿ ವಾಹನ ತಪಾಸಣೆ ನಡೆಸಲಾಗುತ್ತಿದೆ ಎಂದು ಡಾ| ಕುಮಾರ್‌ ತಿಳಿಸಿದರು.

ಟಾಪ್ ನ್ಯೂಸ್

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

Mulki: ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

Mangaluru: ನೂತನ ಮೇಯರ್‌ ಮನದಾಳ:ಜನಸ್ನೇಹಿ ಆಡಳಿತ, ಸ್ಮಾರ್ಟ್‌ ಸಿಟಿಗೆ ವೇಗ

Mangaluru: ನೂತನ ಮೇಯರ್‌ ಮನದಾಳ:ಜನಸ್ನೇಹಿ ಆಡಳಿತ, ಸ್ಮಾರ್ಟ್‌ ಸಿಟಿಗೆ ವೇಗ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.