
New Born Baby; ಹೆರಿಗೆ ಆದ ಕೂಡಲೇ ಶಿಶುವನ್ನು ಬಕೆಟ್ಗೆ ಹಾಕಿದ ಮಹಾ ತಾಯಿ!
ನವಜಾತ ಶಿಶುವನ್ನು ರಕ್ಷಿಸಿದ ಕೇರಳ ಪೊಲೀಸರು, ನರ್ಸಿಂಗ್ ಹೋಂ ಸಿಬ್ಬಂದಿ
Team Udayavani, Apr 6, 2023, 7:30 AM IST

ಚೆಂಗನ್ನೂರ್: ಮನೆಯ ಸ್ನಾನದ ಕೊಠಡಿಯಲ್ಲಿ ಬಕೆಟ್ವೊಂದರಲ್ಲಿ ಹಾಕಲಾಗಿದ್ದ ನವಜಾತ ಶಿಶುವೊಂದು ಕೇರಳ ಪೊಲೀಸರು ಮತ್ತು ಖಾಸಗಿ ನರ್ಸಿಂಗ್ ಹೋಂ ವೈದ್ಯರ ಸಮಯಪ್ರಜ್ಞೆಯಿಂದಾಗಿ ಬದುಕುಳಿಯಲು ಸಾಧ್ಯವಾಗಿದೆ.
ಪಟ್ಟಣಂತಿಟ್ಟ ಜಿಲ್ಲೆಯ ಕೊಟ್ಟ ಎಂಬ ಗ್ರಾಮದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ತನಗೆ ತೀವ್ರ ರಕ್ತಸ್ರಾವವಾಗುತ್ತಿದ್ದು, ಚಿಕಿತ್ಸೆ ನೀಡಿ ಎಂದು ಕೋರಿ 34 ವರ್ಷದ ಮಹಿಳೆ ಚೆಂಗನ್ನೂರು ನರ್ಸಿಂಗ್ ಹೋಂಗೆ ಆಗಮಿಸಿದ್ದರು. ಆಕೆಯನ್ನು ಪರೀಕ್ಷಿಸಿದಾಗ, ಆಕೆಗೆ ಸ್ವಲ್ಪ ಹೊತ್ತಿಗೆ ಮುಂಚೆಯಷ್ಟೇ ಹೆರಿಗೆಯಾಗಿದ್ದು ವೈದ್ಯರಿಗೆ ಗೊತ್ತಾಯಿತು.
ಕೂಡಲೇ, ಮಗು ಎಲ್ಲಿದೆ ಎಂದು ಆಕೆಯನ್ನು ಪ್ರಶ್ನಿಸಲಾಯಿತು. ಮಹಿಳೆಯೊಂದಿಗೆ ಆಸ್ಪತ್ರೆಗೆ ಬಂದಿದ್ದ ಆಕೆಯ 9 ವರ್ಷದ ಮಗ, “ಮಗುವನ್ನು ಅಮ್ಮ ಮನೆಯ ಬಾತ್ರೂಂನಲ್ಲಿ ಬಕೆಟ್ಗೆ ಹಾಕಿಟ್ಟಿದ್ದಾರೆ’ ಎಂದು ಮಾಹಿತಿ ನೀಡಿದ.
ಇದನ್ನು ಕೇಳಿ ಗಾಬರಿಗೊಂಡ ಆಸ್ಪತ್ರೆಯ ಸಿಬ್ಬಂದಿ, ಸ್ವಲ್ಪವೂ ತಡಮಾಡದೇ ಆಕೆಯ ಮನೆಗೆ ಧಾವಿಸಿ, ಮಗುವನ್ನು ಎತ್ತಿಕೊಂಡು ನರ್ಸಿಂಗ್ ಹೋಂಗೆ ಶಿಫ್ಟ್ ಮಾಡಿದರು.
ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಶಿಶುವನ್ನು ಕೊಟ್ಟಾಯಂ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸಾಗಿಸಲಾಯಿತು. ಈ ಮೂಲಕ ಮಗುವಿನ ಜೀವವನ್ನು ಉಳಿಸಲಾಯಿತು. ಪೊಲೀಸರು ಬಾತ್ರೂಂನಿಂದ ಶಿಶುವನ್ನು ಎತ್ತಿಕೊಂಡು ರಸ್ತೆಗೆ ಧಾವಿಸುತ್ತಿರುವ, ಅಲ್ಲಿಂದ ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Kerala | Police in Chengannur of Alappuzha district rescued a newborn abandoned by its mother in a bucket at her home. The woman reached the hospital after delivery at home and informed the hospital authorities that she left her newborn alive in a bucket in the bathroom of her… pic.twitter.com/ffGsQFFh4s
— ANI (@ANI) April 4, 2023
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BJP Congress;ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರಿಗೆ ಪ್ರತಿದೂರು

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.