Karnataka election 2023; ಪ್ರಧಾನಿ ಮೋದಿ ಹುಲಿ ಸಫಾರಿ ಬಳಿಕವೇ ಬಿಜೆಪಿ ಪಟ್ಟಿ


Team Udayavani, Apr 6, 2023, 7:15 AM IST

Karnataka election 2023; ಪ್ರಧಾನಿ ಮೋದಿ ಹುಲಿ ಸಫಾರಿ ಬಳಿಕವೇ ಬಿಜೆಪಿ ಪಟ್ಟಿ

ಬೆಂಗಳೂರು:ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆ ಇನ್ನಷ್ಟು ವಿಳಂಬವಾಗುವ ಸಾಧ್ಯತೆ ಇದ್ದು, ಪ್ರಧಾನಿ ನರೇಂದ್ರ ಮೋದಿಯವರ “ಹುಲಿ ಸಫಾರಿ’ಯ ಬಳಿಕವೇ ಸಂಸದೀಯ ಮಂಡಳಿ ಸಭೆ ನಡೆಯಬಹುದು ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಕಳೆದೆರಡು ದಿನಗಳಿಂದ ನಡೆದ ಬಿಜೆಪಿ ಚುನಾವಣಾ ಸಮಿತಿ ಸಭೆ ಬುಧವಾರ ಮುಕ್ತಾಯಗೊಂಡಿದ್ದು, ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೂ ತಲಾ ಮೂವರು ಆಕಾಂಕ್ಷಿಗಳ ಹೆಸರನ್ನು ನಮೂದಿಸಲಾಗಿದೆ. ನಿರೀಕ್ಷೆಯಂತೆ ಕೆಲವು ಕ್ಷೇತ್ರಗಳಲ್ಲಿ ಹಾಲಿ ಶಾಸಕರ ಹೆಸರನ್ನು ಕೈ ಬಿಡಲಾಗಿದೆ ಎಂದು ಬಿಜೆಪಿಯ ಉನ್ನತ ಮೂಲಗಳು ತಿಳಿಸಿದ್ದು, ಚುನಾವಣಾ ಸಮಿತಿ ಅಂತಿಮಗೊಳಿಸಿದ ಪಟ್ಟಿ ಗುರುವಾರ ದೆಹಲಿಗೆ ರವಾನೆಯಾಗಲಿದೆ.ಒಟ್ಟು ಮೂರು ಹಂತದಲ್ಲಿ ಬಿಜೆಪಿ ಪಟ್ಟಿ ಸಂಸ್ಕರಣೆಗೊಂಡಿದೆ.

ಜಿಲ್ಲಾ ಕೋರ್‌ ಕಮಿಟಿಯಿಂದ ಶಿಫಾರಸುಗೊಂಡ ಹೆಸರುಗಳನ್ನು ಜಿಲ್ಲಾವಾರು ಪ್ರಮುಖರ ನೇತೃತ್ವದಲ್ಲಿ ಏ.1 ಹಾಗೂ 2ರಂದು ಎರಡು ದಿನಗಳ ಕಾಲ ಸಂಸ್ಕರಣೆಗೆ ಒಳಪಡಿಸಲಾಗಿತ್ತು. ಇದಾದ ಬಳಿಕ ಕೋರ್‌ ಕಮಿಟಿ ಹಾಗೂ ಚುನಾವಣಾ ಸಮಿತಿ ಸಭೆ ನಡೆಸಿ ಪ್ರತಿ ಕ್ಷೇತ್ರದ ಬಗ್ಗೆಯೂ ಕೂಲಂಕಶ ಚರ್ಚೆ ನಡೆಸಿ ಸಂಭಾವ್ಯರ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಪ್ರತಿ ಕ್ಷೇತ್ರದಲ್ಲೂ ಮೂವರ ಹೆಸರಿದೆ. ಈ ಪೈಕಿ ಪಕ್ಷಕ್ಕಾಗಿ ದುಡಿದ ಹಳೆಯ ಕಾರ್ಯಕರ್ತರು ಹಾಗೂ ಮುಖಂಡರ ಹೆಸರನ್ನು ಸೇರಿಸಲಾಗಿದೆ. ಸಾಮಾನ್ಯ ಕಾರ್ಯಕರ್ತರನ್ನೂ ಪಕ್ಷ ಗುರುತಿಸುತ್ತದೆ ಎಂಬ ಸಂದೇಶ ರವಾನಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಇಂದು ಸಿಎಂ ದೆಹಲಿಗೆ:
ಇದೆಲ್ಲದರ ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ದಿಲ್ಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಹುಬ್ಬಳ್ಳಿಯಿಂದ ದಿಲ್ಲಿ ಪ್ರಯಾಣಕ್ಕೆ ಕಾರ್ಯಕ್ರಮ ಪಟ್ಟಿ ಸಿದ್ಧಗೊಂಡಿದೆಯಾದರೂ, ಏ.7ರ ಕಾರ್ಯಕ್ರಮ ಏನು ಎಂಬುದು ನಮೂದಾಗಿಲ್ಲ. ಹೀಗಾಗಿ ಅಂದು ಸಂಸದೀಯ ಮಂಡಳಿ ಸಭೆ ನಡೆಯುವುದು ಅನುಮಾನ. ಎಲ್ಲಕ್ಕಿಂತ ಹೆಚ್ಚಾಗಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ಶನಿವಾರ ದೆಹಲಿಗೆ ತೆರಳಬಹುದು ಎನ್ನಲಾಗಿದೆ.

ಇದೆಲ್ಲದರ ಮಧ್ಯೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ರಾತ್ರಿ ರಾಜ್ಯಕ್ಕೆ ಆಗಮಿಸಲಿದ್ದು, ಭಾನುವಾರ ಬಂಡಿಪುರದಲ್ಲಿ ಹುಲಿ ಸಫಾರಿ ವೀಕ್ಷಣೆ ಮಾಡಲಿದ್ದಾರೆ. ಹೀಗಾಗಿ ಶನಿವಾರ ಅಥವಾ ಭಾನುವಾರ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ಸಭೆ ನಡೆಯುವುದು ಅನುಮಾನ. ಹೀಗಾಗಿ ಪ್ರಧಾನಿ ಭೇಟಿಯ ಬಳಿಕವೇ ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಯಾಗಬಹುದು ಎಂದು ಹೇಳಲಾಗುತ್ತಿದೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.