ಕದ್ದ ಚಿನ್ನ ಗುಜರಿಗೆ ಹಾಕಿದ್ದ ಆರೋಪಿ!
Team Udayavani, Apr 6, 2023, 1:36 PM IST
ಬೆಂಗಳೂರು: ಕದ್ದ ಚಿನ್ನಾಭರಣಗಳನ್ನು ಗುಜರಿಗೆ ಹಾಕಿದ್ದ ಪಶ್ಚಿಮ ಬಂಗಾಳ ಮೂಲದ ಆರೋಪಿಯನ್ನು ಯಶವಂತಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪಶ್ಚಿಮ ಬಂಗಾಳ ಮೂಲದ ಸುಬ್ರತೋ ಮಂಡಲ್(23) ಬಂಧಿತ. ಆರೋಪಿಯಿಂದ 7 ಲಕ್ಷ ರೂ. ಮೌಲ್ಯದ 130 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿ ಪಶ್ಚಿಮ ಬಂಗಾಳದಿಂದ 6 ತಿಂಗಳ ಹಿಂದೆ ಉದ್ಯೋಗ ಅರಸಿ ನಗರಕ್ಕೆ ಬಂದಿದ್ದ. ನೌಕರಿ ಸಿಗದಿದ್ದರಿಂದ ಜೀವನ ನಿರ್ವಹಣೆಗಾಗಿ ಮನೆಗಳ ಮುಂದೆ ಮತ್ತು ಬೀದಿಗಳಲ್ಲಿ ಅಳವಡಿಸಿದ್ದ ಕಬ್ಬಿಣದ ನಲ್ಲಿಗಳನ್ನು ಕಳ್ಳತನ ಮಾಡಿ, ಅವುಗಳನ್ನು ಗುಜರಿಗೆ ಹಾಕಿ, ಬಂದ ಹಣದಲ್ಲಿ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದ. ಹೀಗೆ 25ಕ್ಕೂ ಹೆಚ್ಚು ನಲ್ಲಿಗಳನ್ನು ಕಳವು ಮಾಡಿ ಮಾರಾಟ ಮಾಡಿದ್ದಾನೆ. ಮಾ.13ರಂದು ಯಶವಂತಪುರದ ಮತ್ತಿಕೆರೆಯ ಎಚ್ಎಂಟಿ ಲೇಔಟ್ನ ಮನೆ ಬಳಿ ಕಬ್ಬಿಣದ ನಲ್ಲಿ ಕಳ್ಳತನ ಮಾಡಲು ಹೋಗಿದ್ದಾನೆ. ಆಗ ಸಮೀಪದ ಮನೆ ಬಾಗಿಲು ತೆರೆದಿರುವುದನ್ನು ಗಮನಿಸಿ ಒಳಗೆ ನುಗ್ಗಿ ಬೀರು ಮತ್ತು ವಾಲ್ಡ್ರೂಬ್ ನಲ್ಲಿಟ್ಟಿದ ಆಭರಣಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ ಎಂದು ಪೊಲೀಸರು ಹೇಳಿದರು.
30 ಸಾವಿರ ರೂ.ಗೆ ಮಾರಾಟ: ಕದ್ದ ಚಿನ್ನಾಭರಣಗಳನ್ನು ಯಾವ ಅಂಗಡಿಯಲ್ಲಿ ಅಡಮಾನ ಇಡಬೇಕೆಂದು ಗೊತ್ತಾಗದೆ, ಕಬ್ಬಿಣದ ನಲ್ಲಿಗಳನ್ನು ಮಾರಾಟ ಮಾಡುತ್ತಿದ್ದ ಗುಜರಿ ಅಂಗಡಿಗೆ ಹೋಗಿ, ಚಿನ್ನಾಭರಣ ಕೊಟ್ಟಿದ್ದಾನೆ. ಗುಜರಿ ಮಾಲೀಕ 130 ಗ್ರಾಂ ಚಿನ್ನಾಭರಣ ಪಡೆದು ಕೇವಲ 30 ಸಾವಿರ ರೂ. ಕೊಟ್ಟು ಕಳುಹಿಸಿದ್ದಾನೆ. ಮನೆ ಕಳ್ಳತನವಾಗಿರುವ ಬಗ್ಗೆ ನಿಜೇಶ್ ಎಂಬುವರು ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪೊಲೀಸರು ಸ್ಥಳೀಯ ಸಿಸಿ ಕ್ಯಾಮೆರಾ ದೃಶ್ಯಗಳನ್ನು ವಶಕ್ಕೆ ಪಡೆದು ಪರಿಶೀಲಿಸಿದಾಗ ಆರೋಪಿಯ ಕೃತ್ಯ ಬೆಳಕಿಗೆ ಬಂದಿದೆ.
ಬಳಿಕ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾಗ ಕದ್ದ ಚಿನ್ನಾಭರಣಗಳನ್ನು ಜಾಲಹಳ್ಳಿ ಕ್ರಾಸ್ ಬಳಿಯ ಗುಜರಿ ಅಂಗಡಿಗೆ ಹಾಕಿರುವುದಾಗಿ ತಿಳಿಸಿದ್ದಾನೆ. ಈತನ ಮಾಹಿತಿಯ ಮೇರೆಗೆ ಗುಜರಿ ಮಾಲೀಕನಿಂದ ಚಿನ್ನಾಭರಣಗಳನ್ನು ಜಪ್ತಿ ಮಾಡಿ, ಸುಬ್ರತೊ ಮಂಡಲ್ನನ್ನು ಜೈಲಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.