Election ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಅಡ್ಡಿ ಪಡಿಸಿದರೆ ಕಠಿಣ ಕ್ರಮ:ADGP ಎಚ್ಚರಿಕೆ


Team Udayavani, Apr 6, 2023, 6:03 PM IST

ALOK-KUMAR

ಕಾರವಾರ: ಚುನಾವಣೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಅಡ್ಡಿ ಮಾಡಿದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸಾಮಾಜಿಕ‌ ಜಾಲತಾಣದ ಮೂಲಕ ಕೋಮು ಸೌಹಾರ್ದತೆಗೆ ಅಡ್ಡಿ ಮಾಡಿದರೂ ಕ್ರಮ ತಪ್ಪಲ್ಲ ಎಂದು ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಅಲೋಕಕುಮಾರ್ ಎಚ್ಚರಿಕೆ ನೀಡಿದರು.

ಕಾರವಾರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಗುರುವಾರ ಅಧಿಕಾರಿಗಳ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋಮು ಸೌಹಾರ್ದತೆಗೆ ಅಡ್ಡಿ ಮಾಡಿದ್ದಲ್ಲಿ ಸರಿಯಾದ ಕ್ರಮ ಕೈಗೊಳ್ಳುತ್ತೇವೆ. ಇಂತಹ ಕೃತ್ಯಗಳಿಗೆ ಯಾವುದೇ ಕಾರಣಕ್ಕೂ ಆಸ್ಪದ ಇಲ್ಲ. ಇಂತಹ ಸಂದರ್ಭದಲ್ಲಿ ಕೋಮುಸೌಹಾರ್ದತೆ ಕೆಡಿಸಲು ಮುಂದಾದರೆ ಪೊಲೀಸ್ ಇಲಾಖೆ ಸರಿಯಾದ ಕ್ರಮ ಕೈಗೊಳ್ಳಲಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಜವಾಬ್ದಾರಿ, ಯಾವ ಕಾರಣಕ್ಕೂ ಮುಲಾಜಿಲ್ಲದೇ ಕ್ರಮ ಜರುಗಿಸುತ್ತೇವೆ‌. ಎಲ್ಲರ ಮೇಲೆ ನಿಗಾ ಇರಿಸಿದ್ದು, ಯಾರೇ ಅತಿರೇಖವಾಗಿ ವರ್ತಿಸಿದಲ್ಲಿ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದರು.

ಈಗಾಗಲೇ ಕೇಂದ್ರದ ಕಾಯ್ದಿಟ್ಟ ಸಶಸ್ತ್ರ ಮೀಸಲು ಪಡೆಯ 4 ತುಕಡಿಗಳು ಜಿಲ್ಲೆಗೆ ಬಂದಿದ್ದು, ಎರಡನೇ ಹಂತದಲ್ಲಿ ಚುನಾವಣೆ ಹತ್ತಿರ ಬಂದಾಗ ಸಿಆರ್‌ಪಿಎಫ್‌ನ ಮತ್ತಷ್ಟು ಕಾಯ್‌ಗಳು ಜಿಲ್ಲೆಗೆ ಬರಲಿವೆ. ಸೂಕ್ಷ್ಮ ಮತಗಟ್ಟೆ ಪ್ರದೇಶಗಳು ಹಾಗೂ ಚೆಕ್‌ಪೋಸ್ಟ್‌ಗಳಲ್ಲಿ ಪೊಲೀಸ್ ಜತೆ ಸಿಆರ್‌ಪಿಎಫ್ ನಿಯೋಜನೆ ಮಾಡಲಾಗುವುದು. ಜಿಲ್ಲೆಯ 280 ಮತಗಟ್ಟೆಗಳಲ್ಲಿ ಸಿಎಪಿಎಫ್ ಹಾಗೂ ಸಿಆರ್‌ಪಿಎಫ್ ನಿಯೋಜನೆ ಮಾಡಲಾಗುವುದು ಎಂದರು.

ರೌಡಿಗಳ ಮೇಲೆ ಮತ್ತು ದಬ್ಬಾಳಿಕೆ ಮಾಡುವವರ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯ ಸುಮಾರು 31 ರೌಡಿ ಶೀಟರ್‌ಗಳನ್ನು ಚುನಾವಣೆ ಸಂದರ್ಭ ಗಡಿಪಾರು ಮಾಡಲು ವ್ಯವಸ್ಥೆ ಮಾಡಲಾಗುತ್ತಿದೆ. ಜಿಲ್ಲಾಧಿಕಾರಿ ವಿಚಾರಣೆ ಬಳಿಕ ಗಡಿಪಾರು ಆದೇಶ ಜಾರಿಯಾಗಲಿದೆ. ಗಡಿಪಾರು ಆದವರು ಯಾವ ಜಿಲ್ಲೆಗೆ ಸೂಚಿಸುತ್ತಾರೋ ಅಲ್ಲಿಗೆ ತೆರಳಬೇಕು ಎಂದರು.

ಜಿಲ್ಲೆಯ ಚೆಕ್‌ಪೋಸ್ಟ್‌ಗಳಲ್ಲಿ ಈಗಾಗಲೇ ಬಿಗಿ ಬಂದೋಬಸ್ತ್ ನಡೆಸಲಾಗಿದ್ದು, ತೀವ್ರ ತಪಾಸಣೆ ನಡೆಯುತ್ತಿದೆ‌. ಎಲೆಕ್ಷನ್ ಕಮಿಷನ್‌ನ‌ ನಿಯಮದಂತೆ ಕ್ಯಾಶ್, ಲಿಕ್ಕರ್, ಫ್ರೀಭೀಸ್‌, ಮೌಲ್ಯಯುತ‌ ವಸ್ತುಗಳ ಮೇಲೆ ನಿಗಾ ಇರಿಸಿದ್ದೇವೆ. ಗಾಂಜಾ ಸಾಗಾಟದ ವಿರುದ್ಧವೂ ನಿಗಾ ಇರಿಸಲಾಗಿದೆ. ಸಾರ್ವಜನಿಕರು ಮಾಹಿತಿ ಇದ್ದಲ್ಲಿ ಪೊಲೀಸರಿಗೆ ತಿಳಿಸಿ ಎಂದು ಕೋರಿದರು.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.