![Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ](https://www.udayavani.com/wp-content/uploads/2024/07/raga-2-415x247.jpg)
NRAI:ಕಾಲಿಕೇಶ್ ರಾಷ್ಟ್ರೀಯ ರೈಫಲ್ ಅಸೋಸಿಯೇಶನ್ ಆಫ್ ಇಂಡಿಯಾ(ಎನ್ಆರ್ಎಐ)ದ ಅಧ್ಯಕ್ಷ
Team Udayavani, Apr 7, 2023, 6:48 AM IST
![KALIKESH](https://www.udayavani.com/wp-content/uploads/2023/04/KALIKESH-620x372.jpg)
ನವದೆಹಲಿ: “ಪ್ರಭಾರ” ರಣೀಂದರ್ಸಿಂಗ್ ಅವರು ದೀರ್ಘಕಾಲದವರೆಗೆ ರಜೆ ಮೇಲೆ ತೆರಳಿರುವ ಹಿನ್ನೆಲೆಯಲ್ಲಿ ಹಿರಿಯ ಉಪಾಧ್ಯಕ್ಷ ಕಾಲಿಕೇಶ್ ನಾರಾಯಣ್ ಸಿಂಗ್ ದಿಯೊ ಅವರು ರಾಷ್ಟ್ರೀಯ ರೈಫಲ್ ಅಸೋಸಿಯೇಶನ್ ಆಫ್ ಇಂಡಿಯಾ(ಎನ್ಆರ್ಎಐ)ದ ಅಧ್ಯಕ್ಷರಾಗಿ ಗುರುವಾರ ಅಧಿಕಾರ ವಹಿಸಿಕೊಂಡರು.
ರಾಷ್ಟ್ರೀಯ ಕ್ರೀಡಾ ಸಂಹಿತೆಯ ಪ್ರಕಾರ, ರಾಷ್ಟ್ರೀಯ ಕ್ರೀಡಾ ಒಕ್ಕೂಟಗಳ (ಎನ್ಎಸ್ಎಫ್) ಮುಖ್ಯಸ್ಥರು 12 ವರ್ಷಗಳಿಗಿಂತ ಹೆಚ್ಚು ಕಾಲ ಅಧಿಕಾರದಲ್ಲಿ ಇರುವಂತಿಲ್ಲ ಎಂದು ಕ್ರೀಡಾ ಸಚಿವಾಲಯವು ನೀಡಿದ ನಿರ್ದೇಶನದಂತೆ 2021ರ ಸೆಪ್ಟಂಬರ್ನಲ್ಲಿ ಎನ್ಆರ್ಎಐ ಅಧ್ಯಕ್ಷರಾಗಿ ಮರು ಆಯ್ಕೆಯಾದ 55 ವರ್ಷದ ರಣೀಂದರ್ ಸಿಂಗ್ ಅವರು ರಜೆಯಲ್ಲಿ ತೆರಳಿದರು.
ರಣೀಂದರ್ ಸಿಂಗ್ ಅವರು ಅಧ್ಯಕ್ಷರಾಗಿ 2022ರ ಡಿಸೆಂಬರ್ಗೆ 12 ವರ್ಷಗಳನ್ನು ಪೂರ್ಣಗೊಳಿಸಿದ್ದಾರೆ ಎಂದು ಸಚಿವಾಲಯವು ಕಳೆದ ತಿಂಗಳು ಗಮನ ಸೆಳೆದಿತ್ತು ಮತ್ತು ಕ್ರೀಡಾ ಸಂಹಿತೆಯ ಪ್ರಕಾರ, ಅವರು ಎನ್ಆರ್ಎಐ ಮುಖ್ಯಸ್ಥರಾಗಿ ಮುಂದುವರಿಯಲು ಸಾಧ್ಯವಿರಲಿಲ್ಲ.
ಗುರುವಾರ ನಡೆದ ಎನ್ಆರ್ಎಐಯ ಆಡಳಿತ ಮಂಡಳಿ ವರ್ಚುವಲ್ ಸಭೆಯಲ್ಲಿ ಅವಿರೋಧವಾಗಿ ಸಿಂಗ್ ದಿಯೊ ಅವರನ್ನು ಅಧ್ಯಕ್ಷರನ್ನಾಗಿ ಅನುಮೋದಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
![Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ](https://www.udayavani.com/wp-content/uploads/2024/07/raga-2-415x247.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ](https://www.udayavani.com/wp-content/uploads/2024/07/raga-2-150x89.jpg)
Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ
![Police-Head](https://www.udayavani.com/wp-content/uploads/2024/07/Police-Head-150x86.jpg)
Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ
![Prahalad-Joshi](https://www.udayavani.com/wp-content/uploads/2024/07/Prahalad-Joshi-150x90.jpg)
MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
![Masoud Pezeshkian: ಇರಾನ್ನಲ್ಲಿ ಸುಧಾರಣ ಆಡಳಿತದ ಜಮಾನ ಶುರು](https://www.udayavani.com/wp-content/uploads/2024/07/masood-150x84.jpg)
Masoud Pezeshkian: ಇರಾನ್ನಲ್ಲಿ ಸುಧಾರಣ ಆಡಳಿತದ ಜಮಾನ ಶುರು
![23](https://www.udayavani.com/wp-content/uploads/2024/07/23-150x90.jpg)
“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್. ಶ್ರೀವತ್ಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.