IPL 2023: ಹೈದರಾಬಾದ್‌-ಲಕ್ನೋ ನಡುವೆ ಇಂದು ಪಂದ್ಯ-ಗೆಲುವಿನ ಸ್ಫೂರ್ತಿಗೆ ಮಾರ್ಕ್‌ರಮ್‌ ಬಲ


Team Udayavani, Apr 7, 2023, 7:57 AM IST

LUCK HYD

ಲಕ್ನೋ: ಈ ಬಾರಿಯ ಐಪಿಎಲ್‌ನ ಆರಂಭಿಕ ಪಂದ್ಯದಲ್ಲಿ ಹೀನಾಯ ಸೋಲಿನಿಂದ ಕಂಗೆಟ್ಟಿರುವ ಸನ್‌ರೈಸರ್ ಹೈದರಾಬಾದ್‌ ತಂಡವು ಶುಕ್ರವಾರ ನಡೆಯುವ ಪಂದ್ಯದಲ್ಲಿ ಹೊಸ ನಾಯಕ ಐಡೆನ್‌ ಮಾರ್ಕ್‌ರಮ್‌ ಅವರ ಬಲದಿಂದ ಲಕ್ನೋ ಸೂಪರ್‌ ಜೈಂಟ್ಸ್‌ ವಿರುದ್ಧ ಗೆಲುವಿನ ವಿಶ್ವಾಸದಲ್ಲಿದೆ. ಮಾರ್ಕ್‌ರಮ್‌ ಅವರಲ್ಲದೇ ದಕ್ಷಿಣ ಆಫ್ರಿಕಾದ ಇನ್ನಿಬ್ಬರು ಆಟಗಾರರು ತಂಡಕ್ಕೆ ಸೇರ್ಪಡೆಯಾಗಿದ್ದರಿಂದ ಹೈದರಾಬಾದ್‌ ಬಲಿಷ್ಠಗೊಂಡಿದ್ದು, ಉತ್ತಮ ನಿರ್ವಹಣೆಯ ನೀಡುವ ಉತ್ಸಾಹದಲ್ಲಿದೆ.

ಮಾರ್ಕ್‌ರಮ್‌ ಅವರ ಅನುಪಸ್ಥಿತಿಯಲ್ಲಿ ಮೊದಲ ಪಂದ್ಯದಲ್ಲಿ ಭುವನೇಶ್ವರ್‌ ಕುಮಾರ್‌ ಅವರು ತಂಡವನ್ನು ಮುನ್ನಡೆಸಿದ್ದರು. ಆದರೆ ಈ ಪಂದ್ಯದಲ್ಲಿ ಹೈದರಾಬಾದ್‌ ತಂಡವು ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ 72 ರನ್ನುಗಳ ಬೃಹತ್‌ ಸೋಲು ಅನುಭವಿಸಿತ್ತು. ಇದೀಗ ಮಾರ್ಕ್‌ರಮ್‌ ಅವರಲ್ಲದೇ ದಕ್ಷಿಣ ಆಫ್ರಿಕಾದ ಇನ್ನಿಬ್ಬರು ಆಟಗಾರರಾದ ಮಾರ್ಕೊ ಜಾನ್ಸೆನ್‌ ಮತ್ತು ಹೆನ್ರಿಚ್‌ ಕ್ಲಾಸೆನ್‌ ಅವರು ತಂಡವನ್ನು ಸೇರಿಕೊಂಡಿದ್ದರಿಂದ ತಂಡ ಇನ್ನಷ್ಟು ಬಲಗೊಂಡಿದೆ.

ಹೈದರಾಬಾದ್‌ ತಂಡವು 2021ರಲ್ಲಿ ಕೊನೆಯ ಸ್ಥಾನ ಪಡೆದಿದ್ದರೆ, ಕಳೆದ ವರ್ಷ ಕಣದಲ್ಲಿದ್ದ 10 ತಂಡಗಳಲ್ಲಿ ಎಂಟನೇ ಸ್ಥಾನ ಪಡೆದಿತ್ತು. ಈ ಋತುವಿನಲ್ಲಿ ಮಾರ್ಕ್‌ರಮ್‌ ಅವರ ಮಾರ್ಗದರ್ಶನದಲ್ಲಿ ತಂಡವು ಉತ್ತಮ ಸಾಧನೆ ನೀಡುವ ಆತ್ಮವಿಶ್ವಾಸದಲ್ಲಿದೆ.

ಪವರ್‌ಪ್ಲೇಯಲ್ಲಿ ಒದ್ದಾಟ:
ರಾಜಸ್ಥಾನ ವಿರುದ್ಧ ನಡೆದ ಆರಂಭಿಕ ಪಂದ್ಯದಲ್ಲಿ ಹೈದರಾಬಾದ್‌ ಪವರ್‌ ಪ್ಲೇ ವೇಳೆ ಬಹಳಷ್ಟು ಒದ್ದಾಡಿತ್ತು. ಈ ವೇಳೆ ರಾಜಸ್ಥಾನ್‌ ಒಂದು ವಿಕೆಟಿಗೆ 85 ರನ್‌ ಗಳಿಸಿದ್ದರೆ, ಹೈದರಾಬಾದ್‌ ಮೊದಲ ಆರು ಓವರ್‌ಗಳಲ್ಲಿ 2 ವಿಕೆಟಿಗೆ 30 ರನ್‌ ಗಳಿಸಲಷ್ಟೇ ಶಕ್ತವಾಗಿತ್ತು. ಬ್ರ್ಯಾನ್‌ ಲಾರಾ ಅವರಿಂದ ತರಬೇತಿ ಪಡೆದ ಹೈದರಾಬಾದ್‌ ತಂಡವು ಶುಕ್ರವಾರದ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆ ಮಾಡಲಾಗಿದೆ. ದಕ್ಷಿಣ ಆಫ್ರಿಕಾದ ಆಟಗಾರರು ತಂಡಕ್ಕೆ ಸೇರ್ಪಡೆಯಾಗಿರುವುದು ತಂಡಕ್ಕೆ ಸಮಾಧಾನ ತಂದಿದೆ. ಅವರ ಬಲದಿಂದ ತಂಡದ ಬ್ಯಾಟಿಂಗ್‌ ಬಲ ವೃದ್ಧಿಯಾಗಲಿದೆ. ಮೊದಲ ಪಂದ್ಯದಲ್ಲಿ ರನ್‌ ಗಳಿಸಲು ವಿಫ‌ಲರಾದ ಅಭಿಷೇಕ್‌ ಶರ್ಮ, ರಾಹುಲ್‌ ತ್ರಿಪಾಠಿ ಅವರಲ್ಲದೇ ಮಾಯಾಂಕ್‌ ಅಗರ್ವಾಲ್‌ ಅವರು ಬ್ಯಾಟಿಂಗಿನಲ್ಲಿ ಮಿಂಚುವ ನಿರೀಕ್ಷೆಯಿದೆ. ಅವರಲ್ಲದೇ ಗ್ಲೆನ್‌ ಫಿಲಿಪ್ಸ್‌, ಹ್ಯಾರಿ ಬ್ರೂಕ್ಸ್‌ ಉತ್ತಮವಾಗಿ ಆಡಿದರೆ ಹೈದರಾಬಾದ್‌ ಗೆಲುವಿನ ಟ್ರ್ಯಾಕ್‌ಗೆ ಮರಳಲಿದೆ.

ತಂಡದ ಬೌಲಿಂಗ್‌ ಪಡೆ ಅಷ್ಟೊಂದು ಉತ್ತಮವಾಗಿಲ್ಲ. ಉಮ್ರಾನ್‌ ಮಲಿಕ್‌ ಒಂದು ವಿಕೆಟ್‌ ಪಡೆದಿದ್ದರೂ ದುಬಾರಿಯಾಗಿದ್ದರು. ಟಿ. ನಟರಾಜನ್‌ ಮಾತ್ರ ನಿಖರ ದಾಳಿ ಸಂಘಟಿಸಿ, 23 ರನ್ನಿಗೆ 2 ವಿಕೆಟ್‌ ಉರುಳಿಸಿದ್ದರು. ಅಘಾ^ನಿಸ್ತಾನದ ಬೌಲರ್‌ ಫ‌ಜಲ್ಲಾಕ್‌ ಫಾರೂಕಿ 2 ವಿಕೆಟ್‌ ಕೆಡಹಿದ್ದರೂ 41 ರನ್‌ ಬಿಟ್ಟುಕೊಟ್ಟಿದ್ದರು. ಅನುಭವಿ ಭುವನೇಶ್ವರ್‌ ಕೂಡ ನಿರೀಕ್ಷಿತ ಬೌಲಿಂಗ್‌ ದಾಳಿ ಸಂಘಟಿಸಿಲ್ಲ. ವಾಷಿಂಗ್ಟನ್‌ ಸುಂದರ್‌ ಮತ್ತು ಅದಿಲ್‌ ರಶೀದ್‌ ಸ್ಪಿನ್‌ ದಾಳಿಯಲ್ಲಿ ಮಿಂಚು ಹರಿಸಿಲ್ಲ.

ರಾಹುಲ್‌ ಫಾರ್ಮ್ ಕಳವಳ:
ಲಕ್ನೋ ಪರ ನಾಯಕ ಕೆ.ಎಲ್‌.ರಾಹುಲ್‌ ಅವರ ಫಾರ್ಮ್ ಕಳವಳದ ವಿಷಯವಾಗಿದೆ. ಅವರು ಆಡಿದ ಎರಡು ಪಂದ್ಯಗಳಲ್ಲಿ ಉತ್ತಮ ನಿರ್ವಹಣೆ ನೀಡಲು ವಿಫ‌ಲರಾಗಿದ್ದಾರೆ. ಆದರೆ ಕೈಲ್‌ ಮೇಯರ್ ಅಸಾಧಾರಣ ಬ್ಯಾಟಿಂಗ್‌ ಪ್ರದರ್ಶನ ನೀಡಿರುವುದು ಲಕ್ನೋಗೆ ಪ್ಲಸ್‌ ಪಾಯಿಂಟ್‌. ಅವರು ಎರಡೂ ಪಂದ್ಯಗಳಲ್ಲಿ ಅರ್ಧಶತಕ ಸಿಡಿಸಿ ಗಮನ ಸೆಳೆದಿದ್ದಾರೆ. ಅವರಲ್ಲದೇ ದೀಪಕ್‌ ಹೂಡ, ಕೃಣಾಲ್‌ ಪಾಂಡ್ಯ, ನಿಕೋಲಾಸ್‌ ಪೂರಣ್‌ ಬ್ಯಾಟಿಂಗ್‌ನಲ್ಲಿ ಸದ್ದು ಮಾಡಬಲ್ಲರು.

ಲಕ್ನೋದ ಬೌಲಿಂಗ್‌ ಬಲಷ್ಠವಾಗಿದೆ. ರವಿ ಬಿಷ್ಣೋಯಿ ಈಗಾಗಲೇ 5 ವಿಕೆಟ್‌ ಕಿತ್ತ ಸಾಧನೆ ಮಾಡಿದ್ದರೆ ಇಂಗ್ಲೆಂಡಿನ ಮಾರ್ಕ್‌ ವುಡ್‌ ಡೆಲ್ಲಿ ವಿರುದ್ಧ 5 ವಿಕೆಟ್‌ ಕಿತ್ತು ಪ್ರಬಲ ಹೊಡೆತ ನೀಡಿದ್ದರಲ್ಲದೇ ಕಳೆದ ಪಂದ್ಯದಲ್ಲೂ ಮೂರು ವಿಕೆಟ್‌ ಹಾರಿಸಿದ್ದರು. ಜೈದೇವ್‌ ಉನಾದ್ಕತ್‌, ಕೆ.ಗೌತಮ್‌ ಮಿಂಚುವ ನಿರೀಕ್ಷೆಯಿದೆ.

 

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

Team India: ‘We are not actors..’: Ashwin criticizes Team India’s superstar culture

Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್‌ ಸಂಸ್ಕೃತಿ ಟೀಕಿಸಿದ ಅಶ್ವಿನ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.