CM Bommai Vs DK Shivakumar: ಹೊರಗಡೆ ಶೂರತ್ವದ ಮಾತು.. ಒಳಗಡೆ ಬೇರೆಯೇ ಹಕೀಕತ್ತು


Team Udayavani, Apr 7, 2023, 11:25 AM IST

CM Bommai Vs DK Shivakumar: ಹೊರಗಡೆ ಶೂರತ್ವದ ಮಾತು.. ಒಳಗಡೆ ಬೇರೆಯೇ ಹಕೀಕತ್ತು

ಶಿವಮೊಗ್ಗ: ಕಾಂಗ್ರೆಸ್ ಪಕ್ಷದಲ್ಲಿ ನನಗೆ ತಿಳಿದ ಹಾಗೇ 60 ಕ್ಷೇತ್ರಗಳಿಗೆ ಸರಿಯಾದ ಅಭ್ಯರ್ಥಿಗಳಿಲ್ಲ. ಹೀಗಾಗಿ ಬಹಳಷ್ಟು ಜನರನ್ನು ಅಲ್ಲಿಂದ ಇಲ್ಲಿಂದ ತೆಗೆದುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ನಿಮ್ಮ ಸಲುವಾಗಿ ಕಾಯ್ದಿರಿಸಿದ್ದೇವೆ ಬರುತ್ತೀರಾ ಎಂದು ಡಿ.ಕೆ ಶಿವಕುಮಾರ್ ಬಹುತೇಕ ನಮ್ಮೆಲ್ಲಾ ಶಾಸಕರಿಗೂ ಕೇಳಿದ್ದರು. ಆ ಮಟ್ಟಕ್ಕೆ ಕಾಂಗ್ರೆಸ್ ಇದೆ. ಹೊರಗಡೆ ಬಹಳ ದೊಡ್ಡ ಶೂರತ್ವದ ಮಾತನಾಡುತ್ತಾರೆ, ಒಳಗಡೆ ಹಕೀಕತ್ತು ಇರುವುದೇ ಬೇರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದರು.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿಗಿಂತ ಹೀನಾಯವಾಗಿ ಕಾಂಗ್ರೆಸ್ ಸೋಲುತ್ತದೆ. ಅವರಿಗೆ ಕ್ಯಾಂಡಿಡೇಟ್, ಬೇಸ್, ಸ್ಷಷ್ಟವಾದ ನೀತಿಯೂ ಇಲ್ಲ. ಮೀಸಲಾತಿ, ಅಭಿವೃದ್ಧಿ ಯಾವುದು ಇಲ್ಲ. ಕೇವಲ ಉಢಾಫೆ ಮಾತನಾಡಿ, ಚುನಾವಣೆ ಗೆಲ್ಲಬಹುದು ಎಂಬ ಭ್ರಮೆಯಲ್ಲಿದ್ದಾರೆ. ಅದು ಸಾಧ್ಯವಿಲ್ಲ ಎಂದರು.

ಬಿಜೆಪಿಯಲ್ಲಿ ಟಿಕೆಟ್ ಗಾಗಿ ಹೆಚ್ಚು ಪೈಪೋಟಿ ವಿಚಾರ‌ವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಪೈಪೋಟಿ ಜಾಸ್ತಿಯಿದ್ದಾಗ ಆಕಾಂಕ್ಷಿಗಳು ಸಹಜವಾಗಿ ಜಾಸ್ತಿ ಇರ್ತಾರೆ. 8 -9 ರಂದು ಸಭೆ ಸೇರುತ್ತಿದ್ದೇವೆ. ನಂತರ ಪಟ್ಟಿಯನ್ನು ಬಿಡುಗಡೆ ಮಾಡ್ತೇವೆ. ಬಹಳ ವ್ಯವಸ್ಥಿತವಾಗಿ ಪ್ರಜಾಪ್ರಭುತ್ವ ರೀತಿಯಲ್ಲಿ ಆಯ್ಕೆಯಾಗುತ್ತಿದೆ ಎಂದರು‌.

ಕೆಳ ಹಂತದ ಕಾರ್ಯಕರ್ತರು, ಪದಾಧಿಕಾರಿಗಳು, ಜನರ ಭಾವನೆ ಆಧರಿಸಿ ಆಗುತ್ತಿದೆ. ನಾಲ್ಕು ದಿನ ಕುಳಿತು ಸುದೀರ್ಘ ಚರ್ಚೆ ಮಾಡಿ, ಕ್ಷೇತ್ರಕ್ಕೆ 3-4 ಹೆಸರು ಕಳುಹಿಸಲಾಗಿದೆ. ದೆಹಲಿ ಸಭೆಯಲ್ಲಿ ಚರ್ಚಿಸಿ, ಅಂತಿಮ ಪಟ್ಟಿ ಫೈನಲ್ ಅಗಿ ಬಿಡುಗಡೆಯಾಗುತ್ತದೆ ಎಂದು ಸಿಎಂ ಹೇಳಿದರು.

ಇದನ್ನೂ ಓದಿ:Suyash Sharma: ಆರ್ ಸಿಬಿ ಬ್ಯಾಟರ್ ಗಳನ್ನು ಕಾಡಿದ ನೀಲಕೇಶದ ಚೆಲುವ ಯಾರು?

ಹಾಸನ ಜೆಡಿಎಸ್ ಗೊಂದಲ ವಿಚಾರಕ್ಕೆ ಮಾತನಾಡಿ, ಅದು ಅವರ ಆಂತರಿಕ ವಿಚಾರ. ನಾನು ಜಾಸ್ತಿ ವ್ಯಾಖ್ಯಾನ ಮಾಡಲ್ಲ. ಕುಟುಂಬದೊಳಗಿದೆ, ರಾಜಕೀಯವಾಗಿ ಇದ್ದರೆ ಮಾತನಾಡಬಹುದು ಎಂದರು.

ಮಹೇಶ್ ಕುಮಟಳ್ಳಿ ಸೋಲನ್ನು ನನ್ನ ತಲೆ ಮೇಲೆ ಹಾಕಲು ಯತ್ನ ಎಂಬ ಸವದಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿ,  ನಾನು ಅವರ ಜೊತೆ ಮಾತನಾಡಿದ್ದೇನೆ. ಪಕ್ಷದ ಹಿರಿಯ ನಾಯಕರು ಅವರು, ಡಿಸಿಎಂ ಅಗಿದ್ದವರು. ಅವರ ಜವಾಬ್ದಾರಿ ಅರಿವಿದೆ ಎಂದು ನಾನು ತಿಳಿದುಕೊಂಡಿದ್ದೇನೆ. ನಾನು ಮಾತನಾಡಿದ್ದೇನೆ. ಎಲ್ಲವೂ ಸರಿಯಾಗುತ್ತದೆ ಎಂದರು.

ಸುದೀಪ್ ಬೆಂಬಲಕ್ಕೆ ಟೀಕೆ ವಿಚಾರವಾಗಿ ಮಾತನಾಡಿ, ನಾನೇನು ಮಾಡ್ಲಪ್ಪ. ಯಾರು ಬೇಕಾದರೂ ಪ್ರಚಾರಕ್ಕೆ ಕರೆಯಲಿ. ಹೋಗುವುದು, ಬಿಡುವುದು ಅವರ ಇಷ್ಟ ಎಂದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.