![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Apr 9, 2023, 5:10 AM IST
ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರೀ ಅಮ್ಮನವರ ದೇವ ಸ್ಥಾನದ ವಾರ್ಷಿಕ ಜಾತ್ರೆಯು ಒಂದು ತಿಂಗಳ ಕಾಲ ನಡೆಯುತ್ತಿದ್ದು, ಜಾತ್ರೆಯ ಪುರಲ್ದ ಚೆಂಡು ಖ್ಯಾತಿಯ ಮೊದಲ ದಿನ (ಕೊಡಿ ಚೆಂಡು)ದ ಚೆಂಡಿನ ಉತ್ಸವ ಶುಕ್ರವಾರ ಸಂಜೆ ನಡೆಯಿತು. ಒಟ್ಟು 5 ದಿನಗಳ ಕಾಲ ಚೆಂಡಿನ ಉತ್ಸವ ನಡೆದು 6ನೇ ದಿನವಾದ ಎ. 12ರ ಸಂಜೆ ಮಹಾರಥೋತ್ಸವ ನಡೆಯಲಿದೆ.
ಮೊದಲ ದಿನ ದೇವಳದ ತಂತ್ರಿಗಳು, ಅರ್ಚಕರು, ಆಡಳಿತ ಮಂಡಳಿಯ ಮೊಕ್ತೇಸರರು ಉತ್ಸವದಲ್ಲಿ ಪಾಲ್ಗೊಂಡಿದ್ದು, ದೇವಿಯಲ್ಲಿ ಪ್ರಾರ್ಥಿಸಿ ಬಳಿಕ ಚೆಂಡನ್ನು ಗದ್ದೆಗೆ ತಂದು ಸಾಂಪ್ರದಾಯಿಕ ಮಾತುಗಳ ಮೂಲಕ ಚೆಂಡು ಹಿಡಿದಿದ್ದ ಗಾಣಿಗ ಮನೆತನದವರು ಚೆಂಡನ್ನು ಪರ್ದ ಖಂಡದ ಮನೆತನದವರಿಗೆ ಕೊಟ್ಟು, ಚೆಂಡನ್ನು ಹಾರಿಸಲಾಗುತ್ತದೆ.
ಆಗ ಅಮ್ಮುಂಜೆ, ಮಳಲಿ ಕಡೆಯ ಯುವಕರು, ಮಕ್ಕಳು ಚೆಂಡಾಟದಲ್ಲಿ ಭಾಗವಹಿಸುತ್ತಾರೆ. ಚೆಂಡು ಗದ್ದೆಯ ಬದಿಗೆ ಮುಟ್ಟಿಸಿ ಚೆಂಡು ಹಾರಿಸಿದವರಿಗೆ ಎತ್ತಿಕೊಂಡು ಬಂದು ಕೊಟ್ಟರೆ ಗೆಲುವು ಘೋಷಿಸ ಲಾಗುತ್ತದೆ. ಸುಮಾರು 18 ಕೆಜಿ ತೂಕದ ಚೆಂಡನ್ನು ಮೂಡಬಿದಿರೆ ಚೌಟರ ಸೀಮೆಯ ಪದ್ಮನಾಭ ಚಮಗಾರ ತಯಾರಿಸಿದ್ದಾರೆ.
ಮೊದಲ ದಿನದ ಚೆಂಡಿನ ಉತ್ಸವ ನಡೆದು ಕುಮಾರ ತೇರು ನಡೆಯುತ್ತದೆ. ದಿನಕ್ಕೆ ಮೂರು ಬಾರಿ ಚೆಂಡಾಟ ನಡೆದು ಬಳಿಕ ದೇವಸ್ಥಾನಕ್ಕೆ ತಂದು ಪೂಜೆಯ ಬಳಿಕ ಒಂದು ಸುತ್ತು ಮೆರವಣಿಗೆಯ ಮೂಲಕ ಚೆಂಡಿನ ಉತ್ಸವ ಸಂಪನ್ನಗೊಳ್ಳುತ್ತದೆ. ಎರಡನೇ ಚೆಂಡು ಶನಿವಾರ ನಡೆಯಿತು.
ಪೊಳಲಿ ಉತ್ಸವದ ವಿವರ
ಎ. 8ರಂದು 2ನೇ ಚೆಂಡು, ಹೂ ತೇರು, ಎ. 9ರಂದು 3ನೇ ಚೆಂಡು, ಸೂರ್ಯಮಂಡಲ ರಥ, ಎ. 10ರಂದು 4ನೇ ಚೆಂಡು ಚಂದ್ರಮಂಡಲ ರಥ, ಎ. 11ರಂದು ಕಡೇ ಚೆಂಡು, ಆಳು ಪಲ್ಲಕ್ಕಿ ರಥ-ಬೆಳ್ಳಿ ರಥ, ಎ. 12ರಂದು ಸಂಜೆ ಮಹಾರಥೋತ್ಸವ, ಎ. 13ರಂದು ಅವಭೃಥ ಸ್ನಾನ, ಧ್ವಜಾವರೋಹಣ, ಉಳ್ಳಾಕ್ಲು-ಮಗೃಂತಾಯಿ ದೈವಗಳ ನೇಮ, ಬೆಳಗ್ಗೆ ತಲಾಭಾರ ಸೇವೆ, ಎ. 14ರಂದು ಶ್ರೀ ಕೊಡಮಣಿತ್ತಾಯ ನೇಮ, ಎ. 15ರಂದು ಸಂಪ್ರೋಕ್ಷಣೆ, ಮಂತ್ರಾಕ್ಷತೆಯ ಮೂಲಕ ವಾರ್ಷಿಕ ಜಾತ್ರೆ ಸಮಾಪನಗೊಳ್ಳಲಿದೆ.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.