ಶ್ರೀನಾಥ್ ಗೆ Congress ಟಿಕೆಟ್ ಮಿಸ್ ; ರಾಮುಲು ನಿವಾಸಕ್ಕೆ ಗಾಲಿ ರೆಡ್ಡಿ
ಕುತೂಹಲ ಕೆರಳಿಸಿದ ನಾಯಕರ ರಹಸ್ಯ ಮಾತುಕತೆ
Team Udayavani, Apr 9, 2023, 4:15 PM IST
ಗಂಗಾವತಿ: ಈ ಬಾರಿ ಗಂಗಾವತಿ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ವಿಧಾನ ಪರಿಷತ್ ಮಾಜಿ ಸದಸ್ಯ ಹೆಚ್. ಆರ್ .ಶ್ರೀನಾಥ ಅವರಿಗೆ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರಿಗೆ ಬಿ ಫಾರಂ ನಿಗಿಯಾಗಿದ್ದು ಹೆಚ್. ಆರ್. ಶ್ರೀನಾಥ್ ಅವರು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದು ಒಂದೆರಡು ದಿನಗಳಲ್ಲಿ ನಿರ್ಣಯ ತಿಳಿಸುವುದಾಗಿ ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಾರ್ಟಿಯ ಸಂಸ್ಥಾಪಕ ಅಧ್ಯಕ್ಷ ಗಾಲಿ ಜನಾರ್ದನ ರೆಡ್ಡಿ ಅವರು ಶನಿವಾರ ರಾತ್ರಿ ಮಾಜಿ ಸಂಸದ ಹಿರಿಯ ಕಾಂಗ್ರೆಸ್ ಮುಖಂಡ ಎಚ್.ಜಿ ರಾಮುಲು ನಿವಾಸಕ್ಕೆ ಭೇಟಿ ನೀಡಿ ರಹಸ್ಯವಾಗಿ ಹೆಚ್.ಜಿ.ರಾಮುಲು ಹಾಗೂ ಎಚ್. ಆರ್ .ಶ್ರೀನಾಥ್ ಅವರೊಂದಿಗೆ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಈ ಹಿಂದೆ ಜೆಡಿಎಸ್ ಪಕ್ಷದಲ್ಲಿದ್ದ ಶ್ರೀ ನಾಥ ಅವರನ್ನು ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ ಮಧ್ಯಸ್ಥಿಕೆಯಲ್ಲಿ ಪುನಃ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಳ್ಳಲಾಗಿತ್ತು ಅಂದಿನಿಂದ ಮಾಜಿ ಸಚಿವ ಎಂ.ಮಲ್ಲಿಕಾರ್ಜುನ್ ನಾಗಪ್ಪ ಸೇರಿ ಗಂಗಾವತಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಪಡೆಯಲು ಹೆ ಚ್ಆರ್ ಶ್ರೀನಾಥ್ ಶತಾಯಗತಾಯ ಪ್ರಯತ್ನ ನಡೆಸಿದ್ದರು. ಎರಡನೆಯ ಕಾಂಗ್ರೆಸ್ ಪಟ್ಟಿಯಲ್ಲಿ ಇಕ್ಬಾಲ್ ಅನ್ಸಾರಿ ಅವರ ಹೆಸರು ಘೋಷಣೆಯಾಗಿದ್ದು ಇದರಿಂದ ಹೆಚ್.ಆರ್. ಶ್ರೀನಾಥ್ ಆಕ್ರೋಶಗೊಂಡಿದ್ದಾರೆ.
ತಮಗೆ ಟಿಕೆಟ್ ಸಿಗದಿದ್ದರೆ ಸಿದ್ದರಾಮಯ್ಯ ಕಾಂಗ್ರೆಸ್ ಗೆ ಸೋಲು ಖಚಿತ. ತಾವು ನಿಷ್ಠಾವಂತ ಕಾಂಗ್ರೆಸ್ಸಿಗರಾಗಿದ್ದು ನಮ್ಮ ತಂದೆ ರಾಮುಲು ಅವರು ಇಂದಿರಾಗಾಂಧಿಯವರ ಒಡನಾಡಿಯಾಗಿದ್ದಾರೆ. ನಮಗೆ ಟಿಕೆಟ್ ನೀಡುವಂತೆ ಎಲ್ಲಾ ಸಮಾಜದವರು ಕಾಂಗ್ರೆಸ್ ಮುಖಂಡರನ್ನು ಮತ್ತು ಸಿದ್ದರಾಮಯ್ಯನವರನ್ನು ಮನವಿ ಮಾಡಿದ್ದಾರೆ.
ಇಕ್ಬಾಲ್ ಅನ್ಸಾರಿ ಅವರಿಗೆ ಟಿಕೆಟ್ ನೀಡಿದ್ದು ಪ್ತಸ್ತುತ ಇಂದಿರಾ ಕಾಂಗ್ರೆಸ್ ಇಲ್ಲಾ ಸಿದ್ದರಾಮಯ್ಯ ಕಾಂಗ್ರೆಸ್ . ಒಂದು ವೇಳೆ ನನಗೆ ಟಿಕೆಟ್ ಸಿಗದಿದ್ದರೆ ಕೊಪ್ಪಳ ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋಲು ಖಚಿತ. ಆದ್ದರಿಂದ ರಾಯಚೂರಿನಲ್ಲಿ ಅಲ್ಪಸಂಖ್ಯಾತರಿಗೆ ನೀಡಿ ಗಂಗಾವತಿಯಲ್ಲಿ ನನಗೆ ಟಿಕೆಟ್ ನೀಡುವಂತೆ ಎಚ್. ಆರ್ .ಶ್ರೀನಾಥ್ ಕಾಂಗ್ರೆಸ್ ಮುಖಂಡರು ಮತ್ತು ಸಿದ್ದರಾಮಯ್ಯನವರನ್ನು ಒತ್ತಾಯಿಸಿದ್ದರು.
ಸೌಜನ್ಯದ ಭೇಟಿ
ಹೆಚ್.ಜಿ.ರಾಮುಲು ಹಾಗೂ ಹೆಚ್.ಆರ್.ಶ್ರೀನಾಥ್ ಅವರನ್ನು ಭೇಟಿ ಮಾಡಿದ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಮುಲು ಹಾಗೂ ಹೆಚ್.ಆರ್.ಶ್ರೀನಾಥ್ ಅವರು ತಮ್ಮ ಕುಟುಂಬದ ಆತ್ಮೀಯರಾಗಿದ್ದು ಅವರನ್ನು ರಾಜಕೀಯ ವಿಚಾರವಾಗಿ ಭೇಟಿಯಾಗಿಲ್ಲ.ರಾಮುಲು ಹಿರಿಯ ರಾಜಕಾರಣಿ ಸಲಹೆ ಸೂಚನೆ ನೀಡುತ್ತಾರೆ ಅವರನ್ನು ನನ್ನನ್ನು ಸೇರಿ ಎಲ್ಲಾ ವಿರೋಧ ಪಕ್ಷದ ನಾಯಕರು ಭೇಟಿ ಮಾಡಿ ಸಲಹೆ ಸೂಚನೆ ಕೇಳುವುದು ವಾಡಿಕೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi: ಕಂದಾಯ ಉಪ ವಿಭಾಗ ಗಂಗಾವತಿ ಬದಲಿಗೆ ಕುಷ್ಟಗಿ ಸೂಕ್ತ: ದೊಡ್ಡನಗೌಡ ಪಾಟೀಲ
Tragedy: ಗಣೇಶನ ಮೂರ್ತಿ ವಿಸರ್ಜಿಸಿ ಬರುವಾಗ ರಸ್ತೆ ಅಪಘಾತ… ಯುವಕ ಮೃತ್ಯು
Gangavathi: ಒಂದೇ ಕೋಮಿನ ಎರಡು ಗುಂಪುಗಳ ಮಧ್ಯೆ ಮಾರಾಮಾರಿ… ಓರ್ವನಿಗೆ ಚಾಕು ಇರಿತ
“ಸ್ಮಾರ್ಟ್’ ಆದ ಲಿಂಗದಹಳ್ಳಿ ಸರ್ಕಾರಿ ಶಾಲೆ”- ವಿದ್ಯಾರ್ಥಿಗಳ ಸಂಖ್ಯೆ 400ಕ್ಕೆ ಏರಿಕೆ
D. K. Shivakumar: ನೀರು ಕಡಿಮೆಯಾದಾಗ ತುಂಗಭದ್ರಾ ಅಣೆಕಟ್ಟೆಗೆ ಹೊಸ ಕ್ರೆಸ್ಟ್ಗೇಟ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’
Israel: ಹಮಾಸ್,ಹೆಜ್ಬುಲ್ಲಾ, ಸಿರಿಯಾ ಜೊತೆಗೆ ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ದಾಳಿ
Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ
Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!
Social Networks Use: ಸಾಮಾಜಿಕ ಜಾಲತಾಣ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕಡಿವಾಣ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.