Cricket: ವಾಂಖೇಡೆಯಲ್ಲಿ ಟೆಸ್ಟ್‌ ಆಡುವುದೇ ನನ್ನ ಗುರಿ: ರಹಾನೆ


Team Udayavani, Apr 10, 2023, 8:05 AM IST

rahane

ಮುಂಬೈ: ಮಹಾರಾಷ್ಟ್ರ ರಾಜಧಾನಿ ಮುಂಬೈನ ವಾಂಖೇಡೆ ಅಂಗಳದಲ್ಲಿ ಮುಂಬೈ ಇಂಡಿಯನ್ಸ್‌ ವಿರುದ್ಧವೇ ಸಿಡಿಲಬ್ಬರದ ಬ್ಯಾಟಿಂಗ್‌ ಪ್ರದರ್ಶಿಸಿ ಸುದ್ದಿಯಲ್ಲಿದ್ದಾರೆ ಚೆನ್ನೈ ತಂಡದ ಮುಂಬಯಿ ಆಟಗಾರ ಅಜಿಂಕ್ಯ ರಹಾನೆ!

ಶನಿವಾರ ರಾತ್ರಿ 158 ರನ್‌ ಚೇಸಿಂಗ್‌ ವೇಳೆ ಮುಂಬೈ ದಾಳಿಯನ್ನು ಪುಡಿಗಟ್ಟಿದ ರಹಾನೆ ಕೇವಲ 27 ಎಸೆತಗಳಲ್ಲಿ, 7 ಬೌಂಡರಿ ಹಾಗೂ 3 ಸಿಕ್ಸರ್‌ ನೆರವಿನಿಂದ 61 ರನ್‌ ಬಾರಿಸಿ ಗೆಲುವಿನ ರೂವಾರಿ ಎನಿಸಿದ್ದರು. ಅವರ ಅರ್ಧ ಶತಕ ಕೇವಲ 19 ಎಸೆತಗಳಲ್ಲಿ ದಾಖಲಾಗಿತ್ತು. ಅಂದಹಾಗೆ ಇದು ಚೆನ್ನೈ ಪರ ರಹಾನೆ ಅವರ ಪಾದಾರ್ಪಣೆ ಪಂದ್ಯವಾಗಿತ್ತು!

ಈ ಕುರಿತು ಪ್ರತಿಕ್ರಿಯಿಸಿರುವ ಅಜಿಂಕ್ಯ ರಹಾನೆ, “ವಾಂಖೇಡೆಯಲ್ಲಿ ಆಡುವುದನ್ನು ನಾನು ಯಾವತ್ತೂ ಆನಂದಿಸುತ್ತೇನೆ. ಇದು ನನ್ನ ತವರಿನ ಅಂಗಳ. ಇಲ್ಲಿ ನಾನಿನ್ನೂ ಟೆಸ್ಟ್‌ ಆಡಿಲ್ಲ. ವಾಂಖೇಡೆ ಸ್ಟೇಡಿಯಂನಲ್ಲಿ ಟೆಸ್ಟ್‌ ಆಡುವುದನ್ನು ನಾನು ಬಯಸುತ್ತೇನೆ. ಇದೇ ನನ್ನ ಗುರಿ,’ ಎಂಬುದಾಗಿ ಹೇಳಿದರು.

ರಹಾನೆ ಅನಿರೀಕ್ಷಿತ ಆಯ್ಕೆ:
ಈ ಪಂದ್ಯದ ಆಡುವ ಬಳಗದಲ್ಲಿ ಅಜಿಂಕ್ಯ ರಹಾನೆ ಕಾಣಿಸಿಕೊಳ್ಳುವ ಸಾಧ್ಯತೆ ಇರಲಿಲ್ಲ. ಆದರೆ ಮೊಯಿನ್‌ ಅಲಿ ಗಾಯಾಳಾದ ಕಾರಣ ಅವಕಾಶ ಪಡೆದರು. ಇದು ಟಾಸ್‌ ವೇಳೆಯಷ್ಟೇ ರಹಾನೆಗೆ ತಿಳಿದದ್ದು.

“ನಾನು ಈ ಪಂದ್ಯದಲ್ಲಿ ಆಡುವುದೇ ಖಾತ್ರಿ ಇರಲಿಲ್ಲ. ಈ ಅವಕಾಶವನ್ನು ನಾನು ಸಮರ್ಥವಾಗಿ ಬಳಸಿಕೊಂಡೆ. ಬಹಳ ಖುಷಿಯಿಂದ ಆಡಿದೆ. ಅದು ಯಾವ ಮಾದರಿಯೇ ಆಗಿರಲಿ, ಇದಕ್ಕೆ ಹೊಂದಿಕೊಂಡು ಉತ್ತಮ ಪ್ರದರ್ಶನ ನೀಡಲು ಪ್ರಯತ್ನಿಸುತ್ತೇನೆ. ಇಂಥದೊಂದು ನಿದರ್ಶನ ಇದಾಗಿದೆ,’ ಎಂದು ರಹಾನೆ ಹೇಳಿದರು.

2022ರ ದಕ್ಷಿಣ ಆಫ್ರಿಕಾ ಪ್ರವಾಸದ ಬಳಿಕ ಅಜಿಂಕ್ಯ ರಹಾನೆ ಟೆಸ್ಟ್‌ ತಂಡದಿಂದ ಬೇರ್ಪಟ್ಟಿದ್ದರು. ಚೇತೇಶ್ವರ್‌ ಪೂಜಾರ ಪುನರಾಗಮನ ಸಾಧಿಸಿದರೂ ರಹಾನೆ ಇನ್ನೂ ದೂರವೇ ಇದ್ದಾರೆ.

ಸ್ಪಿನ್‌ ದಾಳಿಯೇ ಕಾರಣ:
ತಂಡದ ಸೋಲಿಗೆ ಅಜಿಂಕ್ಯ ರಹಾನೆ ಬ್ಯಾಟಿಂಗ್‌ಗೂ ಮಿಗಿಲಾಗಿ ರವೀಂದ್ರ ಜಡೇಜ ಮತ್ತು ಮಿಚೆಲ್‌ ಸ್ಯಾಂಟ್ನರ್‌ ಅವರ ಸ್ಪಿನ್‌ ದಾಳಿಯೇ ಮುಖ್ಯ ಕಾರಣ ಎಂದವರು ಮುಂಬೈ ಕೋಚ್‌ ಮಾರ್ಕ್‌ ಬೌಷರ್‌.

“ನಾವು ಗಳಿಸಿದ್ದು 8ಕ್ಕೆ 157 ರನ್‌ ಮಾತ್ರ. ಇದರಿಂದ ನಮ್ಮಲ್ಲಿ 7 ಮಂದಿ ಫ್ರಂಟ್‌ಲೆನ್‌ ಬೌಲರ್‌ಗಳಿದ್ದೂ ಪ್ರಯೋಜನ ಇಲ್ಲದಂತಾಯಿತು. ಒಂದಕ್ಕೆ 61 ರನ್‌ ಗಳಿಸಿ ಉತ್ತಮ ಆರಂಭ ಪಡೆದ ನಾವು 180-190ರ ಗಡಿಯನ್ನಾದರೂ ತಲುಪಬೇಕಿತ್ತು. ಹೀಗಾಗಿ ರಹಾನೆ ಬ್ಯಾಟಿಂಗ್‌ಗೂ ಮಿಗಿಲಾಗಿ ಚೆನ್ನೈ ಬೌಲರ್‌ಗಳಾದ ಜಡೇಜ ಮತ್ತು ಸ್ಯಾಂಟ್ನರ್‌ ಅವರ ಸ್ಪಿನ್‌ ನಮಗೆ ಘಾತಕವಾಗಿ ಕಂಡಿತು’ ಎಂಬುದಾಗಿ ಬೌಷರ್‌ ಹೇಳಿದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.