Election 2023: ಪ್ರಬಲ ಪೈಪೋಟಿಯೇ ಪ್ರತೀ ಬಾರಿಯ ಉತ್ತರ


Team Udayavani, Apr 10, 2023, 7:49 AM IST

bjp cong

ಮಂಗಳೂರು: ಜಿಲ್ಲಾ ಕೇಂದ್ರವನ್ನು ಒಳಗೊಂಡ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಪ್ರತಿಷ್ಠಿತ ಚುನಾವಣ ಕಣಗಳಲ್ಲೊಂದು. ಇಲ್ಲಿ ಮಹಿಳಾ ಮತದಾರರೇ ಅಧಿಕ.

ಬ್ರಿಟಿಷರ ಆಡಳಿತಾವಧಿಯಲ್ಲಿ ಮದ್ರಾಸ್‌ ಪ್ರಾಂತ್ಯದಲ್ಲಿದ್ದ “ಮಂಗಳೂರು’ ಬಳಿಕ 1956 ರಲ್ಲಿ ಮೈಸೂರು ರಾಜ್ಯದ ಅಧೀನಕ್ಕೆ ಬಂತು. 1957ರಲ್ಲಿ “ಮಂಗಳೂರು-1′, ಅನಂತರ “ಮಂಗಳೂರು’ ಕ್ಷೇತ್ರವಾಗಿ ಚುನಾವಣೆ ಎದುರಿಸುತ್ತಾ ಬಂದಿದ್ದು, 2008ರಲ್ಲಿ ಕ್ಷೇತ್ರ ಪುನರ್‌ವಿಂಗಡಣೆಯ ಬಳಿಕ “ಮಂಗಳೂರು ನಗರ ದಕ್ಷಿಣ’ ವಿಧಾನಸಭಾ ಕ್ಷೇತ್ರವಾಯಿತು. ಆರಂಭದಲ್ಲಿ ಇದು ಕಾಂಗ್ರೆಸ್‌ ಭದ್ರಕೋಟೆಯಾಗಿದ್ದರೂ ಬಳಿಕ ಈ ಕ್ಷೇತ್ರದಲ್ಲಿ ಬಿಜೆಪಿ ಪ್ರಾಬಲ್ಯ ಸ್ಥಾಪಿಸಿತು.
1994ರಿಂದ ನಾಲ್ಕು ಅವಧಿ ಗಳಲ್ಲಿ ಸತತವಾಗಿ ಬಿಜೆಪಿ ವಶದಲ್ಲಿದ್ದ ಕ್ಷೇತ್ರವನ್ನು 2013ರ ಚುನಾ ವಣೆಯಲ್ಲಿ ಕಾಂಗ್ರೆಸ್‌ ಮರಳಿ ತನ್ನ ತೆಕ್ಕೆಗೆ ಸೆಳೆದುಕೊಂಡಿತು. 2018ರಲ್ಲಿ ಇದು ಮತ್ತೆ ಬಿಜೆಪಿ ಪಾಲಾಯಿತು. 1957ರಿಂದ 2018 ರವರೆಗೆ ನಡೆದಿರುವ ಒಟ್ಟು 14 ಚುನಾವಣೆಗಳಲ್ಲಿ ಈ ಕ್ಷೇತ್ರದಲ್ಲಿ 8 ಬಾರಿ ಕಾಂಗ್ರೆಸ್‌ ಹಾಗೂ 6 ಬಾರಿ ಬಿಜೆಪಿ ಜಯಗಳಿಸಿವೆ.

ಈ ಕ್ಷೇತ್ರದಲ್ಲಿ 13 ಬಾರಿ ಕೊಂಕಣಿ ಭಾಷಿಕರು ಶಾಸಕರಾಗಿದ್ದರೆ, ಒಂದು ಬಾರಿ ಮಾತ್ರ ಜೈನ ಸಮುದಾಯದವರು ಆಯ್ಕೆಯಾಗಿದ್ದರು. ಈ ಕ್ಷೇತ್ರದಲ್ಲಿ ಬಿಲ್ಲವ ಮತದಾರರು ಅಧಿಕ ಸಂಖ್ಯೆಯಲ್ಲಿದ್ದರೆ, ಅನಂತರದ ಸ್ಥಾನದಲ್ಲಿ ಕ್ರೈಸ್ತರು ಹಾಗೂ ಮುಸ್ಲಿಂ ಮತದಾರರಿದ್ದಾರೆ.

ರಾಜಕೀಯ ಉನ್ನತ ಸ್ಥಾನಮಾನ
ಈ ಕ್ಷೇತ್ರದಲ್ಲಿ ಆಯ್ಕೆಯಾದ ಶಾಸಕರಲ್ಲಿ ಹಲವರಿಗೆ ಉನ್ನತ ರಾಜಕೀಯ ಸ್ಥಾನಮಾನಗಳು ಸಂದಿವೆ. ಎಂ. ವೈಕುಂಠ ಬಾಳಿಗ ವಿಧಾನಸಭೆಯ ಸ್ಪೀಕರ್‌, ಸಚಿವರಾಗಿದ್ದರು. ಪಿ.ಎಫ್‌. ರೊಡ್ರಿ ಗಸ್‌, ಬ್ಲೇಸಿಯಸ್‌ ಎಂ. ಡಿ’ಸೋಜಾ ಸಚಿವ ರಾಗಿದ್ದರು. ಎನ್‌. ಯೋಗೀಶ್‌ ಭಟ್‌ ಅವರು ವಿಧಾನಸಭೆಯ ಉಪ ಸ್ಪೀಕರ್‌ ಆಗಿ ಕಾರ್ಯ ನಿರ್ವಹಿಸಿದ್ದರು. 1983ರಲ್ಲಿ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದ ವಿ. ಧನಂಜಯ ಕುಮಾರ್‌ ಬಳಿಕ ಸಂಸದರಾಗಿ ಕೇಂದ್ರ ಸಚಿವರಾಗಿದ್ದರು.

ಇನ್ನೂ ಫೈನಲ್‌ ಆಗದ ಟಿಕೆಟ್‌!
ಈ ಬಾರಿ ಇದುವರೆಗೂ ಕಾಂಗ್ರೆಸ್‌, ಬಿಜೆಪಿಯ ಅಭ್ಯರ್ಥಿಗಳು ನಿಗದಿ ಯಾಗಿಲ್ಲ. ಆದರೂ ಕಾಂಗ್ರೆಸ್‌ನಿಂದ ಮಾಜಿ ಶಾಸಕ ಜೆ.ಆರ್‌. ಲೋಬೋ ಮುಂಚೂಣಿಯಲ್ಲಿದ್ದರೆ, ಬಿಜೆಪಿಯಿಂದ ಹಾಲಿ ಶಾಸಕ ವೇದವ್ಯಾಸ ಕಾಮತ್‌ ಹೆಸರು ಮುನ್ನೆಲೆಯಲ್ಲಿದೆ. ಇತರ ಪಕ್ಷಗಳು, ಪಕ್ಷೇತರರು ಕಣದಲ್ಲಿರುವ ಸಂಭವವಿದೆ.

~ ದಿನೇಶ್‌ ಇರಾ

ಟಾಪ್ ನ್ಯೂಸ್

1-ree

Karnataka;ಕನ್ನಡಕ್ಕೆ ಪ್ರಥಮ ಆದ್ಯತೆ, ಕನ್ನಡವೇ ಆಡಳಿತ ಭಾಷೆ ಆಗಬೇಕು: ಸಿದ್ದರಾಮಯ್ಯ

DK SHI NEW

CM ಬದಲಾವಣೆ ಚರ್ಚೆಯೇ ಇಲ್ಲ,ದಿಲ್ಲಿಗೆ ಭೇಟಿ ನೀಡುವ ಪ್ರಸಂಗವೂ ಉದ್ಭವಿಸಿಲ್ಲ:ಡಿಕೆಶಿ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-ree

Karnataka;ಕನ್ನಡಕ್ಕೆ ಪ್ರಥಮ ಆದ್ಯತೆ, ಕನ್ನಡವೇ ಆಡಳಿತ ಭಾಷೆ ಆಗಬೇಕು: ಸಿದ್ದರಾಮಯ್ಯ

DK SHI NEW

CM ಬದಲಾವಣೆ ಚರ್ಚೆಯೇ ಇಲ್ಲ,ದಿಲ್ಲಿಗೆ ಭೇಟಿ ನೀಡುವ ಪ್ರಸಂಗವೂ ಉದ್ಭವಿಸಿಲ್ಲ:ಡಿಕೆಶಿ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.