karnataka polls 2023; ನಾಯಕರ ಮತಬೇಟೆ ಆಡಬಲ್ಲರೇ ಸುದೀಪ್‌?


Team Udayavani, Apr 10, 2023, 6:10 AM IST

karnataka polls 2023; ನಾಯಕರ ಮತಬೇಟೆ ಆಡಬಲ್ಲರೇ ಸುದೀಪ್‌?

ರಾಯಚೂರು: ಚುನಾವಣೆಯಲ್ಲಿ ಜಾತಿಗಳ ಪ್ರಾಬಲ್ಯ ಅಲ್ಲಗಳೆಯುವಂತಿಲ್ಲ. ಈ ಬಾರಿ ಬಿಜೆಪಿ ನಾಯಕ ಸಮುದಾಯದ ಮತಗಳ ಮೇಲೆ ತುಸು ಹೆಚ್ಚೇ ನಿಗಾ ವಹಿಸಿದ್ದು, ಈಚೆಗೆ ನಟ ಸುದೀಪ್‌ ಕೂಡ ಸಿಎಂ ಪರ ಬ್ಯಾಟಿಂಗ್‌ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.

ರಾಜ್ಯದಲ್ಲಿ ಪರಿಶಿಷ್ಟ ಪಂಗಡ ಸಮುದಾಯ ಸಾಕಷ್ಟು ಕ್ಷೇತ್ರಗಳಲ್ಲಿ ನಿರ್ಣಾಯಕವಾಗಿದ್ದರೆ, 12 ಕ್ಷೇತ್ರ ಗಳು ಎಸ್‌ಟಿಗೆ ಮೀಸಲಾಗಿವೆ. ಪರಿಶಿಷ್ಟ ಪಂಗಡ ಸಮುದಾಯದ ಮೀಸಲಾತಿಯನ್ನು ಶೇ.3ರಿಂದ ಶೇ.7.5ಕ್ಕೆ ಹೆಚ್ಚಿಸಬೇಕು ಎಂದು ಸುದೀರ್ಘ‌ ಹೋರಾಟ ನಡೆಸಲಾಗಿತ್ತು. ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲಿ ಬಿಜೆಪಿ ಸರ್ಕಾರ ಶೇ.7ರಷ್ಟು ಮೀಸಲಾತಿ ಹೆಚ್ಚಿಸುವ ಮೂಲಕ ಆ ಸಮುದಾಯದ ವಿಶ್ವಾಸ ಪಡೆಯಲೆತ್ನಿಸಿತು.

ಈಗ ನಟ ಕಿಚ್ಚ ಸುದೀಪ್‌ ಕೂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೇಲಿನ ಪ್ರೀತಿಗಾಗಿ ಪ್ರಚಾರ ಮಾಡುವುದಾಗಿ ಹೇಳಿರುವುದು ಕೂಡ ನಾಯಕ ಸಮುದಾಯದ ಮತ ಬೇಟೆಗಾಗಿಯೇ ಎನ್ನಲಾಗುತ್ತಿದೆ. ಆದರೆ, ಈ ಸಮುದಾಯ ಕೇವಲ ಒಂದೇ ಪಕ್ಷಕ್ಕೆ ಸೀಮಿತವಾಗಿಲ್ಲ. ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ನಲ್ಲಿಯೂ ಪ್ರಭಾವಿ ಕಾರ್ಯಕರ್ತರು, ಮುಖಂಡರಿದ್ದಾರೆ.

ರಾಜ್ಯದಲ್ಲಿ ನಾಯಕ ಸಮುದಾಯದ ಜನಸಂಖ್ಯೆ 60 ಲಕ್ಷಕ್ಕೂ ಅಧಿ ಕ ಎಂದು ಅಂದಾಜಿಸಲಾಗಿದೆ. ರಾಯಚೂರು ಜಿಲ್ಲೆಯಲ್ಲೇ ಏಳರಲ್ಲಿ ನಾಲ್ಕು ವಿಧಾನಸಭೆ ಕ್ಷೇತ್ರಗಳು ಎಸ್‌ಟಿ ಮೀಸಲಾಗಿದ್ದು, ಜಿಲ್ಲೆಯಲ್ಲಿಯೂ 1.5 ಲಕ್ಷ ಜನಸಂಖ್ಯೆಯಿದೆ. ಸಿನಿಮಾ ನಟರನ್ನು ಆರಾ ಧಿಸುವ ಜನ ಈ ಭಾಗದಲ್ಲಿದ್ದಾರೆ. ಸಿರವಾರ ಸಮೀಪದ ಕುರಕುಂದ ಗ್ರಾಮದಲ್ಲಿ ಕಳೆದ ವರ್ಷ ನಟ ಸುದೀಪ್‌ ಪ್ರತಿಮೆ ನಿರ್ಮಿಸಿ ದೇವಸ್ಥಾನವನ್ನೇ ಕಟ್ಟಲು ಅಭಿಮಾನಿಗಳು ಮುಂದಾಗಿದ್ದರು. ಕೊನೆಗೆ ಸುದೀಪ್‌ ಅವರೇ ಅದಕ್ಕೆ ವಿರೋಧ ವ್ಯಕ್ತಪಡಿಸಿದರು. ಇಂಥ ಅಭಿಮಾನ ಮತವಾಗಿ ಮಾರ್ಪಡಲಿದೆಯೇ ಎಂಬ ಲೆಕ್ಕಾಚಾರ ಶುರುವಾಗಿದೆ.

ವಾಸ್ತವ ಚಿತ್ರಣವೇ ಬೇರೆ
ನೆಚ್ಚಿನ ನಾಯಕ ಎಂಬ ವಿಷಯ ಬಂದಾಗ ಇರುವ ಅಭಿಮಾನ ರಾಜಕೀಯ ವಿಚಾರಕ್ಕೆ ಬಂದಾಗ ಗೌಣವಾಗುತ್ತದೆ. ಹಿಂದೆ ತೆಲುಗಿನ ಖ್ಯಾತ ನಟ ಪವನ್‌ ಕಲ್ಯಾಣ ಕೂಡ ರಾಯಚೂರು ಜಿಲ್ಲೆಯಲ್ಲಿ ಬಿಜೆಪಿ ಪರ ಪ್ರಚಾರ ನಡೆಸಿದ್ದರು. ಆದರೆ, ಆಗ ಬಿಜೆಪಿಗೆ ಸೋಲಾಗಿತ್ತು. ಅಷ್ಟೇ ಯಾಕೆ ಮಳೆ ಹುಡುಗಿ ಪೂಜಾ ಗಾಂಧಿ  ಬಿಎಸ್ಸಾರ್‌ ಪಕ್ಷದಿಂದ ರಾಯಚೂರು ನಗರ ಕ್ಷೇತ್ರದಿಂದ ಸ್ಪಧಿ ìಸಿ ಠೇವಣಿ ಕಳೆದುಕೊಂಡಿದ್ದರು. ಈಚೆಗೆ ನಡೆದ ಮಸ್ಕಿ ಉಪಚುನಾವಣೆಯಲ್ಲಿ ಲಂಬಾಣಿ ಸಮಾಜದ ಗಾಯಕಿ ಮಂಗ್ಲಿ ಬಂದು ಪ್ರಚಾರ ಮಾಡಿದ್ದರೂ ಬಿಜೆಪಿಗೆ ಸೋಲಾಗಿತ್ತು. ಚುನಾವಣೆಗಳು ಸ್ಥಳೀಯ ವಿಷಯ, ವ್ಯಕ್ತಿಯಾಧಾರಿತವಾಗಿಯೇ ಇರುವುದರಿಂದ ಸುಲಭಕ್ಕೆ ಮತದಾರ ಬದಲಾಗುವುದು ಕಷ್ಟದ ವಿಚಾರ. ಹಾಗಂತ ನೆಚ್ಚಿನ ನಾಯಕರು ಬಂದು ಪ್ರಚಾರ ಮಾಡಿದಾಗ ಅಲ್ಪಸ್ವಲ್ಪವಾದರೂ ಬದಲಾವಣೆ ಆದರೂ ಆಗಬಹುದು. ಈಗ ಸುದೀಪ್‌ ಕೂಡ ಪ್ರಚಾರಕ್ಕೆ ಬರುವ ಮಾತನ್ನಾಡಿದ್ದಾರೆ. ಅವರು ಯಾವ ಕ್ಷೇತ್ರಗಳಲ್ಲಿ ಪ್ರಚಾರ ಮಾಡುತ್ತಾರೆ; ಫಲಿತಾಂಶ ಏನಾಗಲಿದೆ ಕಾದು ನೋಡಬೇಕಿದೆ.

ನಾಯಕ ಸಮುದಾಯದ ಮತದಾರರು ಬಹಳ ಪ್ರಜ್ಞಾವಂತರಿದ್ದಾರೆ. ಕಿಚ್ಚ ಸುದೀಪ್‌ರನ್ನು ಒಬ್ಬ ನಟನಾಗಿ ಎಲ್ಲರೂ ಪ್ರೀತಿಸಿ ಗೌರವಿಸುವಂತೆ ನಾಯಕ ಸಮಾಜವು ಗೌರವಿಸುತ್ತದೆ. ಹಾಗಂತ ಚುನಾವಣೆಯಲ್ಲಿ ಇಡೀ ಸಮುದಾಯ ಅವರ ಕರೆಗೆ ಓಗೊಡಲಿದೆ ಎಂಬುದೆಲ್ಲ ಅಸಂಭವ. ಚುನಾವಣೆಯಲ್ಲಿ ಸ್ಥಳೀಯ ಅಭ್ಯರ್ಥಿ, ಪಕ್ಷಗಳ ಕೊಡುಗೆ, ಅಭಿವೃದ್ಧಿಗಳೇ ಮುಖ್ಯವಾಗುತ್ತದೆ.
-ರಘುವೀರ ನಾಯಕ, ವಾಲ್ಮೀಕಿ ಸಮಾಜದ ಮುಖಂಡ

-ಸಿದ್ಧಯ್ಯಸ್ವಾಮಿ ಕುಕನೂರು

ಟಾಪ್ ನ್ಯೂಸ್

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.