ನಂದ ಕುಮಾರ್ ಪಕ್ಷೇತರರಾಗಿ ಸ್ಪರ್ಧಿಸಲು ಅಭಿಮಾನಿಗಳ ಆಗ್ರಹ
Team Udayavani, Apr 10, 2023, 7:47 AM IST
ಸುಳ್ಯ: ನಂದ ಕುಮಾರ್ ಅಭಿಮಾನಿಗಳು ಸಲ್ಲಿಸಿರುವ ಬೇಡಿಕೆಗಳಿಗೆ ಕಾಂಗ್ರೆಸ್ ನಾಯಕರು ಯಾವುದೇ ರೀತಿಯಲ್ಲಿ ಸ್ಪಂದನೆ ನೀಡದೆ ಇದ್ದಲ್ಲಿ ಅಥವಾ ಸುಳ್ಯದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಂದ ಕುಮಾರ್ ಅವರಿಗೆ ಬಿ ಫಾರಂ ನೀಡದೆ ಇದ್ದಲ್ಲಿ ಅವರನ್ನು ಪಕ್ಷೇತರವಾಗಿ ಕಣಕ್ಕಿಳಿಸಲಾಗುವುದು ಎಂದು ಅವರ ಅಭಿಮಾನಿಗಳು ನಿರ್ಧಾರ ಕೈಗೊಂಡಿದ್ದಾರೆ.
ನಿಂತಿಕಲ್ಲಿನಲ್ಲಿ ರವಿವಾರ ನಡೆದ ನಂದ ಕುಮಾರ್ ಅಭಿಮಾನಿ ಬಳಗದ ಸಮಾವೇಶದಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಬಿ ಫಾರಂ ಕೊಡುವ ಮೊದಲು ಅಭ್ಯರ್ಥಿ ಬದಲಾಯಿಸಿ ನಂದ ಕುಮಾರ್ ಅವರಿಗೆ ನೀಡಬೇಕು. ಒಂದೇ ವೇಳೆ ಬೇಡಿಕೆ ಈಡೇರಿಸದಿದ್ದರೆ ನಂದ ಕುಮಾರ್ ಅವರನ್ನು ಪಕ್ಷೇತರವಾಗಿ ಕಣಕ್ಕಿಳಿಸುವಂತೆ ಸಮಾವೇಶದಲ್ಲಿದ್ದ ಕಾರ್ಯಕರ್ತರು ಒಕ್ಕೊರಲಿನಿಂದ ಚಪ್ಪಾಳೆ ತಟ್ಟಿ, ಘೋಷಣೆ ಕೂಗಿ ಆಗ್ರಹಿಸಿದರು.
ಕಾಂಗ್ರೆಸ್ನಿಂದ ಈಗಾಗಲೇ ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಜಿ. ಕೃಷ್ಣಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ.
ಈ ಮಧ್ಯೆ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ಕಡಬದಲ್ಲಿ ಪತ್ರಕರ್ತರ ಜತೆ ಮಾತನಾಡಿ, ಸಮಸ್ಯೆ ಯನ್ನು ಬಗೆಹರಿಸಲಾಗುತ್ತಿದೆ. ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ನಂದ ಕುಮಾರ್ ಜತೆ ಮಾತನಾಡಿದ್ದಾರೆ. ಟಿಕೆಟ್ ಕುರಿತಾಗಿ ಗೊಂದಲ ಇಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.