Karnataka Election 2023; ಕೋಲಾರದಿಂದಲೇ ಸ್ಪರ್ಧೆಗೆ ಸಿದ್ದು ಒಲವು


Team Udayavani, Apr 11, 2023, 6:20 AM IST

Karnataka Election 2023; ಕೋಲಾರದಿಂದಲೇ ಸ್ಪರ್ಧೆಗೆ ಸಿದ್ದು ಒಲವು

ಕೋಲಾರ: ಅಳೆದೂ ತೂಗಿ ಅಂತಿಮವಾಗಿ ಕೋಲಾರ ಕ್ಷೇತ್ರದಿಂದಲೇ ಚುನಾವಣೆ ಎದುರಿಸಲು ಸಿದ್ದರಾಮಯ್ಯ ನಿರ್ಧರಿಸಿದ್ದಾರೆಂದು ಹೇಳಲಾಗುತ್ತಿದ್ದು, ಅಧಿಕೃತ ಪ್ರಕಟಣೆ ಹೊರಬೀಳಬೇಕಿದೆ.

ಕಾಂಗ್ರೆಸ್‌ ಹೈಕಮಾಂಡ್‌ ಪ್ರಕಟಿಸಿರುವ ಮೊದಲ ಪಟ್ಟಿಯಲ್ಲಿಯೇ ಸಿದ್ದರಾಮಯ್ಯರಿಗೆ ವರುಣಾ ಕ್ಷೇತ್ರವನ್ನು ನಿಗದಿಪಡಿಸಿದೆ. ವರುಣಾ ಕ್ಷೇತ್ರವನ್ನು ತಂದೆಗಾಗಿ ಬಿಟ್ಟು ಕೊಡಲು ಸಿದ್ಧ ಎಂದು ಸಿದ್ದರಾಮಯ್ಯರ ಪುತ್ರ ಯತೀಂದ್ರ ಸಿದ್ದರಾಮಯ್ಯ ಘೋಷಿಸಿದ್ದಾರೆ. ಖುದ್ದು ಸಿದ್ದರಾಮಯ್ಯ ಹೈಕಮಾಂಡ್‌ ಸೂಚನೆ ಮೇರೆಗೆ ವರುಣಾದಿಂದ ಸ್ಪರ್ಧಿಸಲು ಒಪ್ಪಿಗೆ ನೀಡಿದ್ದಾರೆ. ಒಂದು ಸುತ್ತಿನ ಪ್ರಚಾರವನ್ನು ವರುಣಾ ಕ್ಷೇತ್ರದಲ್ಲಿ ಪೂರ್ಣಗೊಳಿಸಿದ್ದಾರೆ.

ಕಾಂಗ್ರೆಸ್‌ ಎರಡನೇ ಪಟ್ಟಿಯಲ್ಲಿ ಸಿದ್ದರಾಮಯ್ಯ ಹಿಂದೆ ಸ್ಪರ್ಧಿಸುತ್ತಿದ್ದ ಬಾದಾಮಿ ಕ್ಷೇತ್ರಕ್ಕೂ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗಿದೆ. ಇಷ್ಟೆಲ್ಲಾ ಮುಗಿದ ಮೇಲೆ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಚುನಾವಣೆ ಸ್ಪರ್ಧಿಸುತ್ತಾರೆಂಬ ವಿಚಾರದ ಚರ್ಚೆ ಅಂತ್ಯಗೊಳ್ಳಬೇಕಿತ್ತು. ಆದರೆ, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲು ಕೇವಲ 48 ಗಂಟೆ ಬಾಕಿ ಇರುವ ಈ ಹೊತ್ತಿನಲ್ಲಿಯೂ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುತ್ತಾರೆಂಬ ವಿಚಾರ ಇತ್ಯರ್ಥವಾಗಿಲ್ಲ. ಕೋಲಾರದಿಂದ ಕಾಂಗ್ರೆಸ್‌ ಹುರಿಯಾಳು ಯಾರು ಎಂಬುದು ನಿರ್ಧಾರವಾಗಿಲ್ಲ.

ಕೋಲಾರ ಸುರಕ್ಷಿತ
ಐದಾರು ತಿಂಗಳುಗಳಿಂದಲೂ ಕೋಲಾರ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದ ಸಿದ್ದರಾಮಯ್ಯ ಹಲವಾರು ಸಮೀಕ್ಷೆಗಳನ್ನು ಮಾಡಿಸಿದ್ದರು. ಅಹಿಂದ ಮತದಾರರೇ ನಿರ್ಣಾಯಕವಾಗಿರುವ ಕೋಲಾರ ತಮಗೆ ಅತ್ಯಂತ ಸುರಕ್ಷಿತ ಕ್ಷೇತ್ರ ಎನ್ನುವುದನ್ನು ಹಲವು ಮೂಲಗಳಿಂದ ದೃಢಪಡಿಸಿಕೊಂಡಿದ್ದರು. ಆದರೆ, ಖುದ್ದು ರಾಹುಲ್‌ ಗಾಂಧಿಯೇ ಕೋಲಾರದಲ್ಲಿನ ಕಾಂಗ್ರೆಸ್‌ ಗುಂಪುಗಾರಿಕೆ ಮುಳುವಾಗಬಹುದು ಎಂಬ ಸಲಹೆ ಸೂಚನೆ ಮೇರೆಗೆ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲು ಒಪ್ಪಿಗೆಯನ್ನು ಸೂಚಿಸಿದ್ದರು. ಆದರೂ, ಕೋಲಾರದಿಂದಲೂ ಸ್ಪರ್ಧಿಸಲು ಮನಸ್ಸು ಮಾಡಿದ್ದೇನೆ ಎಂದು ಮತ್ತೇ ಕೋಲಾರದಲ್ಲಿ ಪುನರುತ್ಛರಿಸಿದ್ದರು.

ಕಾಂಗ್ರೆಸ್‌ನಲ್ಲಿ ವಿರೋಧ:
ವರುಣಾ ಕ್ಷೇತ್ರ ನಿಗದಿಯಾದ ಮೇಲೂ ಕೋಲಾರದಿಂದ ಸ್ಪರ್ಧಿಸಲು ಮನಸ್ಸು ಮಾಡಿದ್ದೇನೆ ಎಂಬ ಸಿದ್ದರಾಮಯ್ಯರ ಮಾತು ಕಾಂಗ್ರೆಸ್‌ ಪಕ್ಷದ ಹಲವು ಹಿರಿಯ ಮುಖಂಡರ ಅಸಮಾಧಾನಕ್ಕೆ ಕಾರಣವಾಗಿತ್ತು. ಬಹಿರಂಗವಾಗಿ ಈ ಕುರಿತು ಹೇಳಿಕೆ ನೀಡಲಿಲ್ಲವಾದರೂ, ಸಿದ್ದರಾಮಯ್ಯರಿಗೆ ಮಾತ್ರ ಎರಡು ಕ್ಷೇತ್ರ ಏಕೆ, ತಮಗೂ ಬೇಕೆಂಬ ಬೇಡಿಕೆ ಕೇಳಿ ಬರುವಂತಾಗಿತ್ತು.

ಸಿದ್ದರಾಮಯ್ಯ ಕೋಲಾರದಿಂದಲೂ ಸ್ಪರ್ಧಿಸಲಿ ಎಂಬ ವಿಚಾರ ಕಾಂಗ್ರೆಸ್‌ ಪಕ್ಷದ ವೇದಿಕೆಗಳಲ್ಲಿ ಬಹಿರಂಗವಾಗಿ ಚರ್ಚೆಗೊಳಪಡಲಿಲ್ಲ. ರಾಹುಲ್‌ಗಾಂಧಿಯೇ ಈ ವಿಚಾರವನ್ನು ಇತ್ಯರ್ಥಪಡಿಸಲಿ ಎಂಬ ಇರಾದೆ ಬಹುತೇಕ ಮುಖಂಡರಲ್ಲಿದೆ. ರಾಹುಲ್‌ ಗಾಂಧಿ ಕೋಲಾರದಿಂದ ಸ್ಪರ್ಧಿಸುವ ಕುರಿತು ಸಿದ್ದರಾಮಯ್ಯರ ಅಂಗಳಕ್ಕೆ ಚೆಂಡು ತಳ್ಳಿ ಸುಮ್ಮನಾಗಿದ್ದರು.

ರಾಹುಲ್‌ಗಾಂಧಿಗೆ ಮನವರಿಕೆ
ತಮ್ಮ ಮುಂದಿರುವ ಮೂರು ಹಾದಿಗಳ ಸಾಧ್ಯತೆಗಳ ಕುರಿತಂತೆ ಸಿದ್ದರಾಮಯ್ಯ ಪಕ್ಷದ ವರಿಷ್ಠ ರಾಹುಲ್‌ಗಾಂಧಿಯೊಂದಿಗೆ ಮನವರಿಕೆಮಾಡಿಕೊಟ್ಟಿದ್ದಾರೆನ್ನಲಾಗಿದೆ. ವರುಣಾ ಕ್ಷೇತ್ರವನ್ನು ತಾವೇನು ಬಯಸಿ ಪಡೆದುಕೊಂಡಿದ್ದಲ್ಲ. ಕೋಲಾರ ಸುರಕ್ಷಿತವಲ್ಲ ಎಂಬ ಕಾರಣಕ್ಕೆ ರಾಹುಲ್‌ಗಾಂಧಿ ನೀಡಿದ ಸಲಹೆಯನು °ಪಾಲಿಸಿ ವರುಣಾ ಒಪ್ಪಿಕೊಂಡಿದ್ದೇನೆ. ವರುಣಾ ಜೊತೆಗೆ ತಾವೇ ಘೋಷಿಸಿಕೊಂಡಂತೆ ಕೋಲಾರದಿಂದಲೂ ಸ್ಪರ್ಧಿಸಲು ಒಪ್ಪಿಗೆ ನೀಡಿದರೆ ವರುಣಾ ಕ್ಷೇತ್ರವನ್ನು ಪುತ್ರ ಯತೀಂದ್ರರಿಗೆ ಮೀಸಲಿಟ್ಟುಕೊಳ್ಳಲು ಸಾಧ್ಯವಾಗುತ್ತದೆ. ಇದು ಅಸಾಧ್ಯ ಎನಿಸಿದರೆ ತಾವು ಹಿಂದೆ ಬಯಸಿದಂತೆ ಕೋಲಾರದಿಂದ ಮಾತ್ರವೇ ಸ್ಪರ್ಧಿಸುತ್ತೇನೆ, ವರುಣಾದಿಂದ ಯಥಾಪ್ರಕಾರ ಯತೀಂದ್ರ ಸ್ಪರ್ಧಿಸುತ್ತಾರೆಂಬುದನ್ನು ರಾಹುಲ್‌ಗಾಂಧಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆನ್ನಲಾಗಿದೆ.

ಕೋಲಾರ ಸ್ಪರ್ಧೆ ಖಚಿತ
ಕೋಲಾರ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಆದರೆ, ಅದು ಕೇವಲ ಕೋಲಾರ ಮಾತ್ರವೇ ಅಥವಾ ಕೋಲಾರ ಜೊತೆಗೆ ವರುಣಾ ಸೇರಿಯೇ ಎಂಬುದು ಇತ್ಯರ್ಥವಾಗಬೇಕಷ್ಟೆ.
ಸಿದ್ದರಾಮಯ್ಯರನ್ನು ಕಟ್ಟಿ ಹಾಕಲು ಹವಣಿಸುತ್ತಿರುವ ಬಿಜೆಪಿ ಇನ್ನು ಮೊದಲ ಪಟ್ಟಿಯನ್ನೇ ಘೋಷಿಸಿಲ್ಲ. ಆದ್ದರಿಂದ ಬಿಜೆಪಿ ಮೊದಲ ಪಟ್ಟಿಯನ್ನು ಗಮನಿಸಿ ಕೋಲಾರದಿಂದ ಬಿಜೆಪಿ ಯಾರಿಗೆ ಅವಕಾಶ ನೀಡುತ್ತದೆ ಎಂಬುದರ ಆಧಾರದ ಮೇಲೆ ಸಿದ್ದರಾಮಯ್ಯ ಕೋಲಾರ ಸ್ಪರ್ಧೆ ವಿಚಾರ ನಿರ್ಧಾರವಾಗಲಿದೆ. ಬಿಜೆಪಿ ಕೋಲಾರ ಅಭ್ಯರ್ಥಿ ಆಯ್ಕೆಯನ್ನು ಮೊದಲ ಪಟ್ಟಿಯಲ್ಲಿ ಘೋಷಿಸದಿದ್ದರೆ ಸಿದ್ದು ಕೋಲಾರ ಸ್ಪರ್ಧೆ ವಿಚಾರ ನಾಮಪತ್ರ ಸಲ್ಲಿಕೆಯ ಕೊನೆಯ ದಿನದವರೆವಿಗೂ ಮುಂದುವರೆಯುವ ಸಾಧ್ಯತೆ ಇದೆ.

ಅಹಿಂದ ಮತದಾರರೇ ಶೇ.75 ರಷ್ಟಿರುವ ಕೋಲಾರದಿಂದ ಗೆಲ್ಲಲು ಸಾಧ್ಯವಾಗಿದ್ದರೆ ರಾಜ್ಯದ ಯಾವುದೇ ಕ್ಷೇತ್ರದಲ್ಲೂ ತಮಗೆ ಗೆಲುವು ಸುಲಭವಲ್ಲ ಎನ್ನುವುದನ್ನು ಖಚಿತಪಡಿಸಿಕೊಂಡಿರುವ ಸಿದ್ದರಾಮಯ್ಯ, ಬಿಜೆಪಿಯ ಮೊದಲ ಪಟ್ಟಿಗೆ ಕಾಯುತ್ತಿದ್ದಾರೆ. ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಪಕ್ಷದಿಂದ ಅವಕಾಶ ಸಿಗದಿದ್ದರೆ ಕೋಲಾರವನ್ನಷ್ಟೇ ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲು ತೀರ್ಮಾನಿಸಿದ್ದಾರೆಂಬುದು ಅವರ ಆಪ್ತವಲಯದಿಂದ ಖಚಿತವಾಗಿದೆ.

ಸಿದ್ದುಗೆ ಮೂರು ಆಯ್ಕೆ
ಚುನಾವಣೆ ಎದುರಿಸುವ ಕುರಿತು ಸಿದ್ದರಾಮಯ್ಯರ ಮುಂದೆ ಈಗ ಮೂರು ಪ್ರಮುಖ ದಾರಿಗಳಿವೆ.
1. ಹೈಕಮಾಂಡ್‌ ಹಿಂದೆ ಸೂಚಿಸಿದಂತೆ ಕೇವಲ ವರುಣಾ ಕ್ಷೇತ್ರದಿಂದ ಮಾತ್ರವೇ ಸ್ಪರ್ಧಿಸುವುದು.
2. ಕೋಲಾರ ಮತ್ತು ವರುಣಾ ಕ್ಷೇತ್ರಗಳಿಂದಲೂ ಚುನಾವಣೆ ಎದುರಿಸುವುದು.
3. ವರುಣಾವನ್ನು ಯಥಾಪ್ರಕಾರ ಪುತ್ರ ಯತೀಂದ್ರರಿಗೆ ಬಿಟ್ಟುಕೊಟ್ಟು ಕೋಲಾರದಿಂದ ಮಾತ್ರ ಚುನಾವಣೆಗೆ ಸ್ಪರ್ಧಿಸುವುದು.

ಕೆ.ಎಸ್‌.ಗಣೇಶ್‌

ಟಾಪ್ ನ್ಯೂಸ್

1-lll

UK ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ ರಾಜ್ಯದ ಅದಿಶ್ ರಜಿನಿಶ್ ವಾಲಿ

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

1-PT

PT Usha ತಿರುಗೇಟು; ಸ್ವಾರ್ಥ ಮತ್ತು ವಿತ್ತೀಯ ಲಾಭದ ಮೇಲೆ ಹೆಚ್ಚು ಗಮನ

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

Electric

Belagavi: ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ, ಮಗ ಸೇರಿ ಮೂವರು ದುರ್ಮರಣ

BBK-11: ಬಿಗ್ ಬಾಸ್‌ ಮನೆಗೆ ಬಂದ್ರು ಖಡಕ್ ‘ವಕೀಲ್ ಸಾಬ್’

BBK-11: ಬಿಗ್ ಬಾಸ್‌ ಮನೆಗೆ ಬಂದ್ರು ಖಡಕ್ ‘ವಕೀಲ್ ಸಾಬ್’

1-bahga

K.S.Bhagawan ವಿವಾದ;ಮಾನ ಮರ್ಯಾದೆ ಇದ್ದರೆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಬೇಕು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-lll

UK ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ ರಾಜ್ಯದ ಅದಿಶ್ ರಜಿನಿಶ್ ವಾಲಿ

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

1-PT

PT Usha ತಿರುಗೇಟು; ಸ್ವಾರ್ಥ ಮತ್ತು ವಿತ್ತೀಯ ಲಾಭದ ಮೇಲೆ ಹೆಚ್ಚು ಗಮನ

arest

Puttur: ವಂಚನೆ ಪ್ರಕರಣದ ಆರೋಪಿ ತೆಲಂಗಾಣದಲ್ಲಿ ಬಂಧನ

accident

Kundapura: ಬೈಕ್‌ಗಳ ಮುಖಾಮುಖೀ ಢಿಕ್ಕಿ ಒಬ್ಬ ಸಾವು, ಇಬ್ಬರು ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.