![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 12, 2023, 5:09 AM IST
ಸಾಂದರ್ಭಿಕ ಚಿತ್ರ.
ಬೆಳ್ತಂಗಡಿ: ವಿಧಾನ ಸಭಾ ಚುನಾವಣೆ-2023 ರ ಸಂಬಂಧ ಯಾವುದೇ ಅಬಕಾರಿ ಅಕ್ರಮ ಚಟುವಟಿಕೆಗಳು ನಡೆಯದಂತೆ ಅಧಿಕಾರಿಗಳು ಗಸ್ತು ನಡೆಸುತ್ತಿದ್ದಾಗ ಓಡಿಲ್ಲಾಳದ ರತ್ನಾಕರ ಎಂಬಾತ ಬೆಳ್ತಂಗಡಿ ಕಸಬದ ಕೆಲ್ಲಗುತ್ತು ಎಂಬಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದನ್ನು ವಶಪಡಿಸಿಕೊಂಡ ಘಟನೆ ಎ.10ರಂದು ನಡೆದಿದೆ.
ಅಬಕಾರಿ ಜಂಟಿ ಆಯುಕ್ತರು ಮಂಗಳೂರು ಹಾಗೂ ಜಿಲ್ಲಾ ಅಬಕಾರಿ ಉಪ ಆಯುಕ್ತರ ಮಾರ್ಗದರ್ಶನದಲ್ಲಿ ಮತ್ತು ಅಬಕಾರಿ ಉಪ ಅಧೀಕ್ಷಕರು ಬಂಟ್ವಾಳ ಉಪ ವಿಭಾಗರವರ ಹಾಗೂ ಅಬಕಾರಿ ನಿರೀಕ್ಷಕರು ಬೆಳ್ತಂಗಡಿ ವಲಯರವರ ನಿರ್ದೇಶನದಂತೆ ಕಾರ್ಯಾಚರಣೆ ನಡೆದಿದ್ದು, ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಒಟ್ಟು 17,280ಲೀ. ಮದ್ಯ ವಶಪಡಿಸಿಕೊಳ್ಳಲಾಗಿದೆ. ಪರಾರಿಯಾದ ಆರೋಪಿಯ ವಿರುದ್ಧ ದೂರು ದಾಖಲಿಸಲಾಗಿದೆ. ವಾಹನ ಹಾಗೂ ಮದ್ಯ ವಶಕ್ಕೆ ಪಡೆಯಲಾಗಿದ್ದು ಒಟ್ಟು ಮೌಲ್ಯ 3,31,720 ರೂ. ಬೆಳ್ತಂಗಡಿ ಅಬಕಾರಿ ಉಪ ನಿರೀಕ್ಷಕ ಸಯ್ಯದ್ ಶಬೀರ್ದಾಖಲಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.
ನೀರಚಿಲುಮೆ ಬಳಿ ಮದ್ಯ ವಶ
ತಾಲೂಕಿನ ಉಜಿರೆ ಗ್ರಾಮದ ನೀರಚಿಲುಮೆ ಎಂಬಲ್ಲಿ ಶಶಿಧರ್ಎಂಬಾತ, ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ಎ.10ರಂದು ನಡೆದಿದೆ. ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, 8,640 ಲೀಟರ್ಮದ್ಯ ವಶಪಡಿಸಿಕೊಂಡಿದ್ದಾರೆ. ಪರಾರಿಯಾದ ಆರೋಪಿಯ ವಿರುದ್ಧ ದೂರು ದಾಖಲಿಸಲಾಗಿದೆ. ವಾಹನ ಹಾಗೂ ಮದ್ಯವನ್ನು ಸರಕಾರದ ವಶಕ್ಕೆ ಪಡೆಯಲಾಗಿದ್ದು, ಸೊತ್ತಿನ ಒಟ್ಟು ಮೌಲ್ಯ ಸುಮಾರು 1,53,360 ರೂ. ಆಗಿದೆ. ಅಬಕಾರಿ ಉಪನಿರೀಕ್ಷಕರಾದ ನವೀನ್ ಕುಮಾರ್ಪ್ರಕರಣ ದಾಖಲಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.