Raghupati Bhat: ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲುವ ಬಗ್ಗೆ ರಘುಪತಿ ಭಟ್ ಹೇಳಿದ್ದೇನು?
ನಾನು ಬೆಳೆಸಿದ ಹುಡುಗ ಇಂದು ಅಭ್ಯರ್ಥಿ
Team Udayavani, Apr 12, 2023, 10:29 AM IST
ಉಡುಪಿ: ಬೇರೆ ಪಕ್ಷ ಸೇರುವ ಪ್ರಶ್ನೆಯೇ ಇಲ್ಲ, ಆದರೆ ಪಕ್ಷ ನಡೆಸಿಕೊಂಡ ರೀತಿ ಬೇಸರ ತಂದಿದೆ ಎಂದು ಉಡುಪಿ ಕ್ಷೇತ್ರದ ಟಿಕೆಟ್ ತಪ್ಪಿದ ಶಾಸಕ ಕೆ. ರಘುಪತಿ ಭಟ್ ಹೇಳಿದರು.
ಪೆರಂಪಳ್ಳಿಯ ತಮ್ಮ ಮನೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ. ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲುವ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ. ಪಕ್ಷ ಸೀಟ್ ನೀಡದೇ ಇರುವುದಕ್ಕೆ ಬೇಸರವಿಲ್ಲ. ಆದರೆ, ಪಕ್ಷ ನಡೆಸಿಕೊಂಡ ರೀತಿ ಸಾಕಷ್ಟು ಬೇಸರ ತಂದಿದೆ ಮತ್ತು ಶಾಕ್ ಕೂಡ ಆಗಿದೆ.
ಕಾರ್ಯಕರ್ತರನ್ನು ನಡು ನೀರಿನಲ್ಲಿ ಬಿಡುವ ಪ್ರಶ್ನೆಯೇ ಇಲ್ಲ. ಯಾಕೆ ಹೀಗಾಯಿತು ಎಂಬುದು ತುಂಬ ಬೇಸರ ತಂದಿದೆ. ನಾನು ಬೆಳೆಸಿದ ಹುಡುಗ ಇಂದು ಅಭ್ಯರ್ಥಿಯಾಗಿದ್ದು, ಅವರಿಗೆ ಶುಭಾಶಯ ಕೋರುತ್ತೇನೆ. ಅಭ್ಯರ್ಥಿ ಬಗ್ಗೆ ಯಾವುದೇ ಆಕ್ಷೇಪವಿಲ್ಲ. ಉಡುಪಿಯಲ್ಲಿ ಪಾರ್ಟಿ ಕಟ್ಟಿದ್ದೇನೆ ಮತ್ತು ಬಿಜೆಪಿಯಿಂದ ಇಲ್ಲಿ ಯಾರು ನಿಂತರೂ ಗೆಲ್ಲಲಿದ್ದಾರೆ ಅಂತಹ ಸ್ಥಿತಿ ನಿರ್ಮಾಣ ಮಾಡಿದ್ದೇನೆ. ಪಕ್ಷಕ್ಕೆ ಈಗ ನನ್ನ ಅವಶ್ಯಕತೆ ಇಲ್ಲ ಎಂಬುದು ತೋರಿಸುತ್ತಿದ್ದಾರೆ. ಅಮಿತ್ ಶಾ ಬೇಡ, ರಾಜ್ಯ ನಾಯಕರು ಅಥವಾ ಜಿಲ್ಲಾಧ್ಯಕ್ಷರು ಕರೆ ಮಾಡದೇ ಇರುವುದು ಬೇಸರ ತಂದಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.