ಧಾರವಾಡ ಗ್ರಾಮೀಣ ಬಿಜೆಪಿ ಟಿಕೆಟ್ ಮಿಸ್: ತವನಪ್ಪ ಅಷ್ಟಗಿ ರಾಜೀನಾಮೆ


Team Udayavani, Apr 12, 2023, 8:13 PM IST

ಧಾರವಾಡ ಗ್ರಾಮೀಣ ಬಿಜೆಪಿ ಟಿಕೆಟ್ ಮಿಸ್: ತವನಪ್ಪ ಅಷ್ಟಗಿ ರಾಜೀನಾಮೆ

ಧಾರವಾಡ: ಬಿಜೆಪಿ ಪಕ್ಷದ ವರ್ಚಸ್ಸನ್ನೇ ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಹಾಳು ಮಾಡಿರುವ ಹಾಲಿ ಶಾಸಕ ಅಮೃತ ದೇಸಾಯಿ ಅವರಿಗೆ ಟಿಕೇಟ್ ನೀಡಲಾಗಿದೆ. ಹೀಗಾಗಿ ಕ್ಷೇತ್ರದಲ್ಲಿ ಬಿಜೆಪಿ ಸೋಲಿನ ಹೊಣೆ ಹೊರವುದು ಬೇಡವೆಂದು ನಾನು ಬಿಜೆಪಿ ಪ್ರಾಥಮಿಕ ಸದಸ್ಯತ್ವ ಹಾಗೂ ನಿಗಮಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಬಿಜೆಪಿ ಟಿಕೆಟ್ ಆಕಾಂಕ್ಷಿ ತವನಪ್ಪ ಅಷ್ಟಗಿ ಆಕ್ರೋಶ ಹೊರಹಾಕಿದ್ದಾರೆ.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷ ಆಂತರಿಕವಾಗಿ ಸಮೀಕ್ಷೆ ನಡೆಸಿದಾಗ ಶೇ. ೭೫ರಷ್ಟು ನನ್ನ ಪರ ವರದಿ ಬಂದಿದೆ. ಈ ವಿಚಾರವನ್ನು ಆರ್‌ಎಸ್‌ಎಸ್, ಬಿಜೆಪಿ ಮುಖಂಡರುಗಳೇ ನನಗೆ ಹೇಳಿದ್ದಾರೆ. ಮಂಗಳವಾರ ಸಂಜೆ ವರೆಗೆ ಅಷ್ಟಗಿ ಅವರಿಗೆ ಟಿಕೆಟ್ ಎಂದ ವರಿಷ್ಠರು ಕೊನೆ ಕ್ಷಣದಲ್ಲಿ ಜನರ ಮನಸ್ಸಿನಲ್ಲಿ ಇಲ್ಲದಿರುವ ಅಮೃತ ಅಭ್ಯರ್ಥಿ ಎಂದು ಘೋಷಿಸಿದ್ದಾರೆ. ಇದು ನನಗೆ ಹಾಗೂ ರಾಜ್ಯದ ಜೈನ ಸಮುದಾಯಕ್ಕೆ ಬಿಜೆಪಿ ಹೈಕಮಾಂಡ ಮಾಡಿದ ದೊಡ್ಡ ಅನ್ಯಾಯ ಎಂದು ನೋವು ತೋಡಿಕೊಂಡರು.

ಸಿಎಂ ಮಾಡಿದ್ರು, ಇಟ್ಟ ಹೆಜ್ಜೆ ಹಿಂದಿಡಲ್ಲ: ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಅಮೃತ ದೇಸಾಯಿ ಅವರ ಅವನತಿಗೆ ಸ್ವತಃ ಅವರೇ ಕಾರಣ. ಅವರು ಗೆದ್ದಲು ತಿಂದ ಮರದಂತಾಗಿದ್ದಾರೆ. ಅಧಿಕಾರ ಸಿಕ್ಕಾಗ ಅವರು ಸರಿಯಾಗಿ ಆಡಳಿತ ನಡೆಸಲಿಲ್ಲ. ಪ್ರಾಮಾಣಿಕವಾಗಿದ್ದ ನಾನು ಹಣಕ್ಕೆ ಡೀಲ್ ಆಗುವೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಈ ವಿಚಾರದಲ್ಲಿ ಅವರು ಮಾಡಿದ್ದೇ ತುಂಬ ಇದೆ ಎಂದು ಭ್ರಷ್ಟಾಚಾರ ನಡೆದಿರುವ ಸುಳಿವು ಕೊಟ್ಟರು. ಜನರು ಈಗ ಅಮೃತ ದೇಸಾಯಿ ವಿರುದ್ಧವಿದ್ದಾರೆ. ಅಂಥವರ ಪರವಾಗಿ ನಾನು ಕೆಲಸ ಮಾಡಲಾರೆ. ನಾನು ಬಿಜೆಪಿಗೆ ರಾಜೀನಾಮೆ ಕೊಟ್ಟಾಗಿದೆ. ಮುಂದೆ ನನ್ನನ್ನು ಸಿಎಂ ಮಾಡುವುದಾಗಿ ಹೇಳಿದರೂ ನಿಲುವು ಬದಲಾಯಿಸಲಾರೆ.

ನನ್ನ ಅಭಿಮಾನಿಗಳ ಸಭೆ ಕರೆದು ಅವರ ಅಣತಿಯಂತೆ ಇದೇ ಚುನಾವಣೆಯಲ್ಲಿ ಸ್ಪಧಿಸಬೇಕೋ ? ಬೇರೆಯವರಿಗೆ ಬೆಂಬಲಿಸಬೇಕೊ ಎಂಬುದನ್ನು ಶೀಘ್ರವೇ ತಿಳಿಸುವುದಾಗಿ ಹೇಳಿದರು.

ಬಿಜೆಪಿಗೆ ಇದು ಶೋಭೆ ತರಲ್ಲ : ಬಿಜೆಪಿ ಪ್ರಕಟಿಸಿದ ೧೮೯ ಕ್ಷೇತ್ರಗಳಲ್ಲಿ ಅಭಯ ಪಾಟೀಲ ಒಬ್ಬರೇ ಜೈನ ಸಮುದಾಯದವರು. ಇಲ್ಲಿ ಸಂಜಯ ಪಾಟೀಲ್ ಸೇರಿದಂತೆ ನನ್ನಂತ ಹಲವರಿಗೆ ಟಿಕೆಟ್ ತಪ್ಪಿಸಲಾಗಿದೆ. ಎಲ್ಲದಕ್ಕೂ ಜಾತಿ, ಹಣದ ಲೆಕ್ಕ ಹಾಕಿ ಅವಮಾನ ಮಾಡಲಾಗಿದೆ ಎಂದು ಕಿಡಿ ಕಾರಿದರು.

ದತ್ತಾ ಡೋರ್ಲೆ, ಶಂಕ್ರಯ್ಯ ಮಠಪತಿ, ಕಸ್ತೂರಿ ಅಷ್ಟಗಿ, ಚಂದ್ರಗೌಡ ಬೊಮ್ಮನಗೌಡ್ರ, ನಿಂಗಪ್ಪ ಸಪೂರಿ, ಬಸಲಿಂಗಪ್ಪ ಮಂಗಳಗಟ್ಟಿ, ಮಲ್ಲನಗೌಡ ಗೌಡ್ರ, ಹನುಮಂತ ಮಾದರ, ಲಕ್ಷ್ಮಿ ಹೊಸಮನಿ, ಮಲ್ಲೇಶ ಲಂಗೋಟಿ, ಉಮೇಶ ಅಂಗಡಿ, ಸಚಿನ ಕದಂ ಸೇರಿದಂತೆ ಮತ್ತಿತರರು ಸುದ್ದಿಗೋಷ್ಟಿಯಲ್ಲಿದ್ದರು.

ಮಡಿವಾಳಜ್ಜ ನೋಡಿಕೊಳ್ಳಲಿ :ಅಷ್ಟಗಿ ಶಾಪ
ಕ್ಷೇತ್ರದಲ್ಲಿ ಎ.ಬಿ ದೇಸಾಯಿ ೪ಬಾರಿ, ಅಮೃತ ದೇಸಾಯಿ ೨ ಬಾರಿ ಸೋತಿದ್ದರು. ಹೀಗಾಗಿ ೨೦೧೮ರಲ್ಲಿ ಅಮೃತ ದೇಸಾಯಿ ಗೆಲುವಿಗೆ ನಾವು ತನು, ಮನ, ಧನದಿಂದ ದುಡಿದಿದ್ದೇನೆ. ಆಗ ಎಂಎಲ್‌ಸಿ ಮಾಡುವುದಾಗಿ ಭರವಸೆ ಕೊಟ್ಟಿದ್ದ ಬಸವರಾಜ ಬೊಮ್ಮಾಯಿ ಮಾತು ತಪ್ಪಿದರು. ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲೂ ಪೀಡಿಸಿದರು. ಟಿಕೆಟ್ ಹಂಚಿಕೆ ವಿಚಾರದಲ್ಲಿ ಹೈ ಕಮಾಂಡ ಹಾಗೂ ಶಾಸಕ ಅಮೃತ ಕೊಟ್ಟ ಮಾತಿನಂತೆ ನಡೆದುಕೊಳ್ಳಲಿಲ್ಲ. ಶಾಸಕರು ನನಗೆ ತುಂಬ ಅನ್ಯಾಯ ಮಾಡಿದ್ದಾರೆ. ಅವರನ್ನು ಗರಗದ ಮಡಿವಾಳ ಅಜ್ಜನೇ ನೋಡಿಕೊಳ್ಳಲಿ. ನಾನು ತಪ್ಪು ಮಾಡಿದ್ದರೆ ನನ್ನನ್ನು ನೋಡಿಕೊಳ್ಳಲಿ ಎಂದು ಅಷ್ಟಗಿ ಮಾರ್ಮಿಕವಾಗಿ ನುಡಿದು, ಬಹಿರಂಗವಾಗಿ ಶಪಿಸಿದರು.

ಶೆಟ್ಟರ್‌ಗೆ ಅಪಮಾನ : ಬಿಜೆಪಿ ಸೋಲು
ಉತ್ತರ ಕರ್ನಾಟಕ ಭಾಗದ ಹೆಮ್ಮೆಯ ನಾಯಕ ಮಾಜಿ ಸಿಎಂ ಜಗದೀಶ ಶೆಟ್ಟರ್‌ಅವರಂತವರಿಗೆ ಟಿಕೆಟ್ ಘೋಷಣೆ ಮಾಡದಿರುವುದು ಒಳ್ಳೆಯ ಬೆಳವಣಿಗೆ ಅಲ್ಲ.ಇನ್ನು ಅಮೃತ ದೇಸಾಯಿ ಅವರ ಸೋಲು ಪಕ್ಕಾ ಆಗಿದೆ.ಅವರ ಸೋಲನ್ನು ನನ್ನ ಮೇಲೆ ಹಾಕಬಾರದು ಎಂದು ಬಿಜೆಪಿ ರಾಜೀನಾಮೆ ಕೊಟ್ಟಿದ್ದೇನೆ.
-ತವನಪ್ಪ ಅಷ್ಟಗಿ,ಜೈನ್ ಸಮುದಾಯದ ಮುಖಂಡ

ಇದನ್ನೂ ಓದಿ: ನಾನು ಯಾವುದೇ ಲಾಭಿಯ ಹಿಂದಿಲ್ಲ, ಇದು ನನ್ನ ಕೊನೆಯ ಚುನಾವಣೆ: ಸಿ.ಹೆಚ್.ವಿಜಯಶಂಕರ್

ಟಾಪ್ ನ್ಯೂಸ್

9

Kerala Kannadigas: ಕೇರಳಿಗರಿಗೆ ಕನ್ನಡ ಕಲಿಸಲು ವಿಶೇಷ ತರಗತಿ

Pakistanಕ್ಕೆ ದೊಡ್ಡ‌ ಮೊತ್ತದ ಆರ್ಥಿಕ ನೆರವು … ರಾಜನಾಥ್‌ ಸಿಂಗ್‌ ಭರ್ಜರಿ ಆಫರ್‌, ಆದರೆ…

Pakistanಕ್ಕೆ ದೊಡ್ಡ‌ ಮೊತ್ತದ ಆರ್ಥಿಕ ನೆರವು …ರಾಜನಾಥ್‌ ಸಿಂಗ್‌ ಭರ್ಜರಿ ಆಫರ್‌, ಆದರೆ…

Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್‌ ಖೇರ್‌ ಫೋಟೊ!

Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್‌ ಖೇರ್‌ ಫೋಟೊ!

Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ‌ ನಾಯ್ಕ

Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ‌ ನಾಯ್ಕ

Gadag: ನೀರಿನಲ್ಲಿ ಕೊಚ್ಚಿಹೋದ ಯುವಕರು; ಓರ್ವನ ಶವ ಪತ್ತೆ, ಮತ್ತೋರ್ವನಿಗೆ ಶೋಧ

Gadag: ನೀರಿನಲ್ಲಿ ಕೊಚ್ಚಿಹೋದ ಯುವಕರು; ಓರ್ವನ ಶವ ಪತ್ತೆ, ಮತ್ತೋರ್ವನಿಗೆ ಶೋಧ

Mudhol: ಸಭೆಗೆ ತಡವಾಗಿ ಬಂದ ಉಸ್ತುವಾರಿ ಸಚಿವರು… ಸಭೆ ಬಹಿಷ್ಕರಿಸಿದ ಬಿಜೆಪಿ ಸದಸ್ಯರು

Mudhol: ಸಭೆಗೆ ತಡವಾಗಿ ಬಂದ ಉಸ್ತುವಾರಿ ಸಚಿವರು… ಸಭೆ ಬಹಿಷ್ಕರಿಸಿದ ಬಿಜೆಪಿ ಸದಸ್ಯರು

Udupi: ಸರಕಾರಿ ವಸತಿ ಗ್ರಹಕ್ಕೆ ನುಗ್ಗಿದ ಕಳ್ಳರು… ಲಕ್ಷಾಂತರ ಮೌಲ್ಯದ ನಗನಗದು ದೋಚಿ ಪರಾರಿ

Udupi: ಸರಕಾರಿ ವಸತಿ ಗೃಹಕ್ಕೆ ನುಗ್ಗಿದ ಕಳ್ಳರು… ಲಕ್ಷಾಂತರ ಮೌಲ್ಯದ ನಗನಗದು ದೋಚಿ ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ‌ ನಾಯ್ಕ

Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ‌ ನಾಯ್ಕ

Mudhol: ಸಭೆಗೆ ತಡವಾಗಿ ಬಂದ ಉಸ್ತುವಾರಿ ಸಚಿವರು… ಸಭೆ ಬಹಿಷ್ಕರಿಸಿದ ಬಿಜೆಪಿ ಸದಸ್ಯರು

Mudhol: ಸಭೆಗೆ ತಡವಾಗಿ ಬಂದ ಉಸ್ತುವಾರಿ ಸಚಿವರು… ಸಭೆ ಬಹಿಷ್ಕರಿಸಿದ ಬಿಜೆಪಿ ಸದಸ್ಯರು

Bellary; ಜನಾರ್ದನ ರೆಡ್ಡಿ ಬಳ್ಳಾರಿ ವನವಾಸ ಅಂತ್ಯ

Bellary; ಜನಾರ್ದನ ರೆಡ್ಡಿ ಬಳ್ಳಾರಿ ವನವಾಸ ಅಂತ್ಯ

Mandya: ಕೆಎಸ್‌ಆರ್ ಟಿಸಿ ಬಸ್-‌ ಟೆಂಪೋ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Mandya: ಕೆಎಸ್‌ಆರ್ ಟಿಸಿ ಬಸ್-‌ ಟೆಂಪೋ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Chitradurga: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ… ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ

Chitradurga: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ… ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

9

Kerala Kannadigas: ಕೇರಳಿಗರಿಗೆ ಕನ್ನಡ ಕಲಿಸಲು ವಿಶೇಷ ತರಗತಿ

Pakistanಕ್ಕೆ ದೊಡ್ಡ‌ ಮೊತ್ತದ ಆರ್ಥಿಕ ನೆರವು … ರಾಜನಾಥ್‌ ಸಿಂಗ್‌ ಭರ್ಜರಿ ಆಫರ್‌, ಆದರೆ…

Pakistanಕ್ಕೆ ದೊಡ್ಡ‌ ಮೊತ್ತದ ಆರ್ಥಿಕ ನೆರವು …ರಾಜನಾಥ್‌ ಸಿಂಗ್‌ ಭರ್ಜರಿ ಆಫರ್‌, ಆದರೆ…

Clown Festival: ಮಂಗಳೂರಿನಲ್ಲಿ ಅಕ್ಟೋಬರ್ 4 ರಿಂದ ಅಂತರಾಷ್ಟ್ರೀಯ ವಿದೂಷಕ ಉತ್ಸವ

Clown Festival: ಮಂಗಳೂರಿನಲ್ಲಿ ಅಕ್ಟೋಬರ್ 4ರಿಂದ ಅಂತರಾಷ್ಟ್ರೀಯ ವಿದೂಷಕ ಉತ್ಸವ

8

Arrested: ಜಲಮಂಡಳಿಯ ಸೆಂಟ್ರಿಂಗ್‌ ಸಾಮಗ್ರಿ ಕಳವು ಮಾಡುತ್ತಿದ್ದ ಇಬ್ಬರ ಬಂಧನ 

Fraud: ಸರ್ಕಾರಿ ಕೆಲಸದ ಆಸೆ ತೋರಿಸಿ 28 ಲಕ್ಷ ವಂಚನೆ 

Fraud: ಸರ್ಕಾರಿ ಕೆಲಸದ ಆಸೆ ತೋರಿಸಿ 28 ಲಕ್ಷ ವಂಚನೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.