ಸ್ಥಳೀಯನಾಗಿದ್ದು ನಾನು ಕೂಡಾ ನೇಕಾರ ಶಾಸಕ: BJP ಸಿದ್ದು ಸವದಿ

ಕ್ಷೇತ್ರದಲ್ಲಿ ಮತದಾರರಿಂದ ಯಾವುದೆ ವಿರೋಧವಿಲ್ಲ...

Team Udayavani, Apr 13, 2023, 6:44 PM IST

1-ssdasdsad

ರಬಕವಿ-ಬನಹಟ್ಟಿ: ನಾನು ಸ್ಥಳೀಯನಾಗಿದ್ದು, ಕಳೆದ ಇಪ್ಪತ್ತು ವರ್ಷಗಳಿಂದ ಇಲ್ಲಿಯೇ ಇದ್ದೇನೆ. ನಾನು ನೇಕಾರ ಶಾಸಕ, ನನ್ನನ್ನು ನೇಕಾರರ ಶಾಸಕ ಎಂದೇ ಕ್ಷೇತ್ರದಲ್ಲಿ ಗುರುತಿಸುತ್ತಾರೆ. ನೇಕಾರರ ಸಲುವಾಗಿ ಹೆಚ್ಚು ಕಾರ್ಯ ಮಾಡಿದ್ದೇನೆ. ನೇಕಾರರ ಒಲವು ನನ್ನ ಮೇಲಿದೆ ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.

ಗುರುವಾರ ಇಲ್ಲಿನ ತಹಶೀಲ್ದಾರ್ ಕಾರ್ಯಾಲಯದಲ್ಲಿ ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿದ ಅವರು, ಕಳೆದ ಬಾರಿಗಿಂತ ಹೆಚ್ಚಿನ ಮತಗಳ ಅಂತರದಿಂದ ಜಯ ಸಾಧಿಸುತ್ತೇನೆ. ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ. ಕ್ಷೇತ್ರದಲ್ಲಿ ಮತದಾರರಿಂದ ಯಾವುದೆ ವಿರೋಧವಿಲ್ಲ. ಮತದಾರರು ಅಪಾರ ಪ್ರಮಾಣದಲ್ಲಿ ಬೆಂಬಲ ಸೂಚಿಸಿದ್ದಾರೆ. ಈಗಾಗಲೇ ಒಂದು ಸುತ್ತಿನ ಪ್ರಚಾರ ಮುಗಿಸಿದ್ದು, ಮುಂದಿನ ದಿನಗಳಲ್ಲಿಯೂ ಕ್ಷೇತ್ರದ ಪ್ರತಿಯೊಂದು ನಗರ ಮತ್ತು ಗ್ರಾಮೀಣ ಪ್ರದೇಶಗಳ ಮತದಾರರ ಮನೆ ಮನೆಗೆ ತೆರಳಿ ಮತದಾರರ ಆಶೀರ್ವಾದ ಪಡೆಯಲಿದ್ದೇವೆ. ಕ್ಷೇತ್ರದ ಜನತೆ ಬಿಜೆಪಿ ಪಕ್ಷವನ್ನು ಬೆಂಬಲಿಸಲು ಸಿದ್ಧರಾಗಿದ್ದಾರೆ. ಈ ಬಾರಿ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ ಎಂಬ ವಿಶ್ವಾಸವಿದೆ. ಇದೇ 19 ಇಲ್ಲವೆ 20 ರಂದು ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರ ಜೊತೆಗೂಡಿ ನಾಮಪತ್ರ ಸಲ್ಲಿಸುತ್ತೇನೆ ಎಂದು ಶಾಸಕ ಸವದಿ ತಿಳಿಸಿದರು.

ನಾಲ್ಕನೇ ಬಾರಿ ವಿಧಾನಸೌಧ ಪ್ರವೇಶಿಸಲು ನಾಮಪತ್ರ ಸಲ್ಲಿಸುತ್ತಿದ್ದು ಅತ್ಯಧಿಕ ಬಹುಮತದಿಂದ ಗೆಲ್ಲುವ ವಿಶ್ವಾಸ ನನಗಿದೆ. ತೇರದಾಳ ಕ್ಷೇತ್ರದ ಜನತೆಗೂ ನನಗೂ ಅವಿನಾಭಾವ ಸಂಬಂಧವಿದೆ. ಈ ಸಂಬಂಧವನ್ನು ಕಡೆಗಣಿಸಲು ಯಾವ ಶಕ್ತಿಗೂ ಸಹ ಸಾಧ್ಯವಿಲ್ಲ. ನನಗೆ ಪ್ರತಿಸ್ಪರ್ಧೆ ಕಾಣುತ್ತಿಲ್ಲವೆಂದರು. ಕಳೆದ ೫ ವರ್ಷಗಳ ಅವಧಿಯಲ್ಲಿ ಕ್ಷೇತ್ರಾದ್ಯಂತ ಹೆಚ್ಚಿನ ಕಾರ್ಯಗಳು ನಡೆದಿವೆ. ಇವೇ ನನಗೆ ಶ್ರೀರಕ್ಷೆಯಾಗಲಿದ್ದು, ಜನತೆ ನನಗೆ ಆಶೀರ್ವಾದ ಮಾಡಲಿದ್ದಾರೆಂದು ಸವದಿ ತಿಳಿಸಿದರು.

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಪುಂಡಲೀಕ ಪಾಲಭಾವಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬಸವಪ್ರಭು ಹಟ್ಟಿ, ಪ್ರಾಚಾರ್ಯ ಬಸವರಾಜ ಕೊಣ್ಣೂರ, ಸಿದ್ದನಗೌಡ ಪಾಟೀಲ, ಧರೆಪ್ಪ ಉಳ್ಳಾಗಡ್ಡಿ, ಶ್ರೀಶೈಲ ಯಾದವಾಡ, ಸಿದ್ದು ಅಮ್ಮಣಗಿ, ಗೋವಿಂದ ಡಾಗಾ, ರಮೇಶ ಎಕ್ಸಂಬಿ, ವರ್ಧಮಾನ ಕೋರಿ, ರವಿ ಸಂಪಗಾವಿ, ದಿನೇಶ ಮೂರಾಬಟ್ಟಿ, ಸಂಜು ಸಿದ್ದಾಪೂರ, ಎಸ್. ಎಸ್. ಸಲಬನ್ನವರ, ಮಹಾಂತೇಶ ಪದಮಗೊಂಡ, ಕಿರಣ ಕುಳ್ಳಿ, ನೇಮಣ್ಣ ಮಾಂಗ, ಪಾಂಡುರಂಗ ಸಾಲ್ಗುಡೆ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.