Corruption Case: ಕೇಂದ್ರ ಸಚಿವ ಶೆಖಾವತ್ ಬಂಧನಕ್ಕೆ ರಾಜಸ್ಥಾನ ಉಚ್ಚ ನ್ಯಾಯಪೀಠ ತಡೆ
Team Udayavani, Apr 14, 2023, 7:30 AM IST
ನವದೆಹಲಿ: ಸಂಜೀವಿನಿ ಸಾಲ ಸಹಕಾರ ಸಂಘದ ಹಗರಣ ಸಂಬಂಧಿಸಿದಂತೆ ಬಂಧನ ಭೀತಿ ಎದುರುಸಿತ್ತಿದ್ದ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರಿಗೆ ರಾಜಸ್ಥಾನ ಉಚ್ಚ ನ್ಯಾಯಪೀಠ ಕೊಂಚ ನಿರಾಳತೆ ನೀಡಿದ್ದು, ಶೆಖಾವತ್ ಬಂಧನಕ್ಕೆ ತಡೆ ನೀಡಿದೆ.
ರಾಜಸ್ಥಾನ ವಿಶೇಷ ತನಿಖಾ ತಂಡ ವಿಚಾರಣೆ ನಡೆಸುತ್ತಿರುವ 900 ಕೋಟಿ ರೂ.ಗಳ ಪತ್ತಿನ ಸಹಕಾರ ಸಂಘದ ಹಗರಣದಲ್ಲಿ ಶೆಖಾವತ್ ಹಾಗೂ ಅವರ ಕುಟುಂಬದ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಬಂಧನಕ್ಕೆ ತಡೆ ಕೋರಿದ್ದಲ್ಲದೇ, ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಕೋರಿ ಮಾ.24ರಂದು ಶೆಖಾವತ್ ಹೈಕೋರ್ಟ್ ಮೆಟ್ಟಿಲೇರಿದ್ದರು. ನ್ಯಾಯಮೂರ್ತಿ ಕುಲದೀಪ್ ಮಾಥುರ್ ಅವರ ನ್ಯಾಯಪೀಠ ಅರ್ಜಿ ಆಲಿಸಿ, ಬಂಧನಕ್ಕೆ ತಡೆ ನೀಡಿದೆ. ಅಲ್ಲದೇ 3 ವಾರಗಳ ಬಳಿಕ ಮುಂದಿನ ವಿಚಾರಣೆಯನ್ನು ನಿಗದಿಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.