bengaluru karaga: ಹತ್ಯೆಗಾಗಿ ಹರಕೆ ರೂಪದಲ್ಲಿ ರಾಸಾಯನಿಕ ದಾಳಿ; ಓರ್ವ ಆರೋಪಿಯ ಬಂಧನ


Team Udayavani, Apr 14, 2023, 11:21 AM IST

bengaluru karaga: ಹತ್ಯೆಗಾಗಿ ಹರಕೆ ರೂಪದಲ್ಲಿ ರಾಸಾಯನಿಕ ದಾಳಿ; ಓರ್ವ ಆರೋಪಿಯ ಬಂಧನ

ಬೆಂಗಳೂರು: ಕರಗ ಹೊರುವ ವಿಚಾರಕ್ಕೆ ಈ ಬಾರಿ ಇತಿಹಾಸ ಪ್ರಸಿದ್ಧ ಬೆಂಗಳೂರು ಕರಗ ಹೊತ್ತಿದ್ದ ಜ್ಞಾನೇಂದ್ರ ಅವರ ಮೇಲೆ ರಾಸಾಯನಿಕ ಪದಾರ್ಥ ಎರಚಿ ಕೊಲೆಗೆ ಯತ್ನಿಸಿದ ಆರೋಪದ ಮೇಲೆ ಜೆ.ಪಿ.ನಗರ ನಿವಾಸಿ ಆದಿ ನಾರಾಯಣ ಎಂಬಾತನನ್ನು ಹಲಸೂರು ಗೇಟ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ, ಆರೋಪಿಯ ಪ್ರಾಥಮಿಕ ವಿಚಾರಣೆಯಲ್ಲಿ ಹತ್ಯೆಗೈಯಲೆಂದೇ, ರಾಸಾಯನಿಕ ಪದಾರ್ಥ ಬಳಸಿ, ಕರಗ ಹೊತ್ತಿದ್ದಾಗ ಜ್ಞಾನೇಂದ್ರ ಅವರ ಮೇಲೆ ಎಸೆದಿರುವುದು ಬೆಳಕಿಗೆ ಬಂದಿದೆ. ಮತ್ತೂಬ್ಬ ಆರೋಪಿಗಾಗಿ ಶೋಧ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

ಜ್ಞಾನೇಂದ್ರ ಮತ್ತು ಆರೋಪಿ ಆದಿನಾರಾಯಣ ಕುಟುಂಬದವರದ್ದು ಈ ಹಿಂದಿನಿಂದಲೂ ಕರಗ ಹೊರುವ ವಿಚಾರದಲ್ಲಿ ಪೈಪೋಟಿ ಇದೆ. ಕೋರ್ಟ್‌ ಮೆಟ್ಟಿಲು ಕೂಡ ಹತ್ತಿದ್ದಾರೆ. ಕರಗ ಹೊರಲು ಅರ್ಚಕರ ನಡುವೆ ಪೈಪೋಟಿ ನಡೆಯುತ್ತಲೇ ಇದೆ. ಕಾರಣ ಕರಗ ಹೊರುವ ಅರ್ಚಕರಿಗೆ ನೀಡುವ ದುಬಾರಿ ಗೌರವಧನ. ಹೀಗಾಗಿ ಕರಗ ಹೊರುವ ಅರ್ಚಕರ ನಡುವೆ ವಾದ-ಪ್ರತಿವಾದಗಳು ಇದ್ದೇ ಇರುತ್ತದೆ. ಅದೇ ರೀತಿ ಈ ವರ್ಷ ಕೂಡ ಚರ್ಚೆಯಲ್ಲಿತ್ತು. ಆಗ ದೇವಸ್ಥಾನ ಮಂಡಳಿಯ ಹಿರಿಯರು ಕೋರ್ಟ್‌ ಸೂಚನೆ ಮೇರೆಗೆ ಜ್ಞಾನೇಂದ್ರ ಅವರಿಗೆ ಈ ಬಾರಿಯ ಕರಗ ಹೊರುವ ಅವಕಾಶ ನೀಡಿದ್ದರು.

ಕರಗ ಉತ್ಸವ ವೇಳೆ ಸಂಪ್ರದಾಯಿಕವಾಗಿ ಹೂ, ಮೆಣಸಿನಕಾಳು, ಕಲ್ಲುಪ್ಪು ಸೇರಿ ಕೆಲ ಪದಾರ್ಥ ಗಳನ್ನು ಹರಕೆಯ ಹೆಸರಿಲ್ಲಿ ಭಕ್ತರು ಕರಗದ ಮೇಲೆ ಎಸೆಯುತ್ತಾರೆ. ಅದನ್ನು ದುರುಪಯೋಗ ಪಡಿಸಿಕೊಂಡು ಆದಿನಾರಾಯಣ ಏ.6ರಂದು ನಡೆದ ಕರಗ ಮಹೋತ್ಸವ ಸಂದರ್ಭದಲ್ಲಿ ಜ್ಞಾನೇಂದ್ರ ಅವರ ಮೇಲೆ ರಾಸಾಯನಿಕ ವಸ್ತು ಮತ್ತು ಖಾರದ ಪುಡಿ ಮಿಶ್ರಣದ ವಸ್ತು ಎಸೆದಿದ್ದಾರೆ. ಅದರಿಂದ ಜ್ಞಾನೇಂದ್ರ ಅವರಿಗೆ ಉರಿ ಹೆಚ್ಚಾಗಿದ್ದು, ಪಕ್ಕದಲ್ಲಿದ್ದ ವೀರಕುಮಾರರಿಗೆ ತಿಳಿಸಿದ್ದಾರೆ.

ಆರೋಪಿ ಆದಿನಾರಾಯಣ ತಪ್ಪಿಸಿಕೊಳ್ಳುವುದನ್ನು ಗಮನಿಸಿದ ವೀರಕುಮಾರರು ಆತನನ್ನು ಹಿಡಿದು ಥಳಿಸಿ ಮಂಡಳಿ ಸದಸ್ಯರ ವಶಕ್ಕೆ ನೀಡಿದ್ದರು. ಈ ಸಂಬಂಧ ಕೆಲ ದಿನಗಳ ಹಿಂದೆ ದೇವಾಲಯದ ಮಂಡಳಿ ಸದಸ್ಯರು ನೀಡಿದ ದೂರಿನ ಮೇರೆಗೆ ಆದಿನಾರಾಯಣನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

 

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.