![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 14, 2023, 4:51 PM IST
ಬಿರ್ಭುಮ್ : ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ 42 ಸ್ಥಾನಗಳ ಪೈಕಿ 35 ಸ್ಥಾನಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದರೆ 2025 ರ ನಂತರ ಟಿಎಂಸಿ ಸರಕಾರ ಉಳಿಯುವುದಿಲ್ಲ ಎಂದು ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿದ್ದಾರೆ.
ರ್ಯಾಲಿಯಲ್ಲಿ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಶಾ ”ಹಿಟ್ಲರ್ ಮಾದರಿಯ ಆಡಳಿತ ನಡೆಸುತ್ತಿದ್ದಾರೆ. 2024ರಲ್ಲಿ ರಾಜ್ಯದಲ್ಲಿ 35ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಬಿಜೆಪಿ ಅಧಿಕಾರಕ್ಕೆ ಬಂದರೆ, ರಾಮನವಮಿ ರ್ಯಾಲಿಗಳ ಮೇಲೆ ದಾಳಿ ಮಾಡಲು ಯಾರೂ ಧೈರ್ಯ ಮಾಡುವುದಿಲ್ಲ” ಎಂದರು.
“ನರೇಂದ್ರ ಮೋದಿ ಅವರು ಮತ್ತೊಮ್ಮೆ ದೇಶದ ಪ್ರಧಾನಿಯಾಗುತ್ತಾರೆ ಎಂದು ಸ್ಪಷ್ಟವಾಗಿ ಹೇಳುತ್ತೇನೆ. 2024 ರ ಲೋಕಸಭಾ ಚುನಾವಣೆಯಲ್ಲಿ ನಮಗೆ ಪಶ್ಚಿಮ ಬಂಗಾಳದಿಂದ 35 ಕ್ಕೂ ಹೆಚ್ಚು ಸ್ಥಾನಗಳನ್ನು ನೀಡಿ ಮತ್ತು 2025 ರ ನಂತರ ಮಮತಾ ಬ್ಯಾನರ್ಜಿ ಸರ್ಕಾರವು ಉಳಿಯುವುದಿಲ್ಲ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ ಎಂದರು.
”ಮಮತಾ ಬ್ಯಾನರ್ಜಿ ಅವರು ತಮ್ಮ ಸೋದರಳಿಯ ಮುಂದಿನ ಸಿಎಂ ಆಗುವ ಕನಸು ಕಾಣುತ್ತಿರಬಹುದು, ಆದರೆ ಪಶ್ಚಿಮ ಬಂಗಾಳದ ಮುಂದಿನ ಮುಖ್ಯಮಂತ್ರಿ ಬಿಜೆಪಿಯವರೇ ಆಗಿರುತ್ತಾರೆ. ಭ್ರಷ್ಟ ಟಿಎಂಸಿ ವಿರುದ್ಧ ಹೋರಾಡಿ ಸೋಲಿಸಲು ಬಿಜೆಪಿ ಮಾತ್ರ ಸಾಧ್ಯ” ಎಂದರು.
ಶಾ ಅವರ ಹೇಳಿಕೆಗಳ ಕುರಿತು ಟಿಎಂಸಿಯಿಂದ ತೀಕ್ಷ್ಣವಾದ ಪ್ರತಿಕ್ರಿಯೆ ಬಂದಿದ್ದು “ಪ್ರಜಾಪ್ರಭುತ್ವ ವಿರೋಧಿ ಮತ್ತು ಅಸಂವಿಧಾನಿಕ” ಎಂದು ಹೇಳಿದೆ.
ಮಮತಾ ಬ್ಯಾನರ್ಜಿ ಸರಕಾರವು 2026 ರಲ್ಲಿ ತನ್ನ ಮೂರನೇ ಅವಧಿಯನ್ನು ಪೂರ್ಣಗೊಳಿಸಲಿದೆ. ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಟಿಎಂಸಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಸಂಸದರಾಗಿದ್ದಾರೆ. 2019ರ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 18 ಲೋಕಸಭಾ ಸ್ಥಾನಗಳನ್ನು ಗೆದ್ದಿತ್ತು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.