Covid: ನಿತ್ಯ 50 -60 ಸಾವಿರ ಕೋವಿಡ್ ಸೋಂಕುಗಳು ಪತ್ತೆಯಾಗಬಹುದು ಆದರೆ…
Team Udayavani, Apr 15, 2023, 10:51 AM IST
ಲಕ್ನೋ: ತಜ್ಞರ ಪ್ರಕಾರ ಭಾರತದಲ್ಲಿ ಕೋವಿಡ್ ಸೋಂಕು ಕೊನೆಯ ಹಂತದಲ್ಲಿದೆ. ಕೊನೆಯ ಹಂತದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚಾಗಿ ಆ ಬಳಿಕ ಸೋಂಕು ಕಡಿಮೆ ಆಗುತ್ತದೆ ಎನ್ನುವುದು ತಜ್ಞರ ಅಭಿಪ್ರಾಯ. ಶುಕ್ರವಾರ ದೇಶದಲ್ಲಿ 11,109 ಮಂದಿಗೆ ಪಾಸಿಟಿವ್ ಕಾಣಿಸಿಕೊಂಡಿತ್ತು. ಶನಿವಾರ ( ಏ.15 ರಂದು) 10,753 ಮಂದಿಗೆ ಸೋಂಕು ಕಾಣಿಸಿಕೊಂಡು, 27 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.
ಐಐಟಿ ಕಾನ್ಪುರದ ಪ್ರಾಧ್ಯಾಪಕ ಡಾ. ಮನೀಂದ್ರ ಅಗರ್ವಾಲ್ ಮುಂದಿನ ಎರಡು ತಿಂಗಳಿನಲ್ಲಿ ದೇಶದಲ್ಲಿ ಕೋವಿಡ್ ಹೆಚ್ಚಾಗುತ್ತದೆ ಎಂದು ಹೇಳಿದ್ದಾರೆ.
ವರ್ಷದ ಮಧ್ಯಭಾಗದಲ್ಲಿ ಅಂದರೆ ಮೇ ತಿಂಗಳಿನ ಮಧ್ಯದಲ್ಲಿ ದೇಶದಲ್ಲಿ ಕೋವಿಡ್ 50 -60 ಸಾವಿರದವರೆಗೆ ಕಾಣಿಸಿಕೊಳ್ಳಬಹುದು ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಮೂರನೇ ಮಹಡಿಯಿಂದ ಕುಸಿದ ಲಿಫ್ಟ್: 9 ಮಂದಿಗೆ ಗಾಯ, ಮೂವರ ಮೂಳೆ ಮುರಿತ
ಈ ಸೋಂಕು ಹೆಚ್ಚಾಗಲು ಅವರು ಎರಡು ಕಾರಣಗಳನ್ನು ಕೊಟ್ಟಿದ್ದಾರೆ. ಮೊದಲ ಕಾರಣವೆಂದರೆ ವೈರಸ್ ವಿರುದ್ಧ ಹೋರಾಡುವ ನೈಸರ್ಗಿಕ ರೋಗನಿರೋಧಕ ಶಕ್ತಿ ಈಗ ಶೇಕಡಾ 5 ರಷ್ಟು ಜನರಲ್ಲಿ ಕಡಿಮೆಯಾಗಿದೆ. ಎರಡನೆಯ ಕಾರಣವೆಂದರೆ ಕೋವಿಡ್ನ ಹೊಸ ರೂಪಾಂತರವು ವೇಗವಾಗಿ ಹರಡುತ್ತಿದೆ ಎಂದಿದ್ದಾರೆ.
ಭಾರತದಲ್ಲಿ, 90% ಕ್ಕಿಂತ ಹೆಚ್ಚು ಮತ್ತು ಉತ್ತರ ಪ್ರದೇಶದಲ್ಲಿ, ಸುಮಾರು 95% ಜನರು ನೈಸರ್ಗಿಕ ರೋಗನಿರೋಧಕ ಶಕ್ತಿಯನ್ನು ಹೊಂದಿದ್ದಾರೆ.
50 ಸಾವಿರ ಪ್ರಕರಣಗಳು ಭಾರತದಂಥ ದೊಡ್ಡ ದೇಶಕ್ಕೆ ಅಷ್ಟಾಗಿ ಪರಿಣಾಮ ಬೀರದು. ಹೆಚ್ಚಿನ ಸಂದರ್ಭಗಳಲ್ಲಿ, ರೋಗಲಕ್ಷಣಗಳು ಕೆಮ್ಮು ಮತ್ತು ಶೀತದಲ್ಲಿ ಇರುತ್ತದೆ. ಇಂಥವರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ನ್ನು ಸಾಮಾನ್ಯ ಜ್ವರದಂತೆ ಪರಿಗಣಿಸಬೇಕು. ಈ ಸೋಂಕುಗಳು ಎರಡನೇ ಅಲೆಯಲ್ಲಿ ಇದ್ದಷ್ಟು ಅಪಾಯಕಾರಿಯಾಗಿ ಇರುವುದಿಲ್ಲ ಎಂದವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!
Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ
J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ
ಗಂಟಲಲ್ಲಿ ಇಡ್ಲಿ ಸಿಲುಕಿ ವ್ಯಕ್ತಿ ಮೃತ್ಯು… ಜೀವಕ್ಕೆ ಮುಳುವಾದ ಇಡ್ಲಿ ತಿನ್ನುವ ಸ್ಪರ್ಧೆ
Fake Visa: ನಕಲಿ ವೀಸಾ ಉತ್ಪಾದನೆಯ ಫ್ಯಾಕ್ಟರಿ ಪತ್ತೆ-ಮೂವರು ಆರೋಪಿಗಳ ಬಂಧನ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.