Election ಅಕ್ರಮ: 170 ಕೋಟಿ ರೂ. ಜಪ್ತಿ
Team Udayavani, Apr 17, 2023, 7:16 AM IST
ಬೆಂಗಳೂರು: ರಾಜ್ಯದಲ್ಲಿ ಚುನಾವಣ ಅಕ್ರಮ ಸಂಬಂಧಿಸಿ ಒಟ್ಟು 170.26 ಕೋ. ರೂ. ಜಪ್ತಿ ಮಾಡಲಾಗಿದ್ದು, ಕಳೆದ 24 ಗಂಟೆಗಳಲ್ಲಿ ಮಾಡಿರುವ ಜಪ್ತಿ ಪ್ರಮಾಣ ಅಂದಾಜು 10 ಕೋಟಿ ರೂ. ಆಗಿದೆ.
ಚುನಾವಣ ವೇಳಾಪಟ್ಟಿ ಪ್ರಕಟವಾದ ಮಾ.29ರಿಂದ ಎ. 16ರ ವರೆಗೆ ವಿಚಕ್ಷಣ ದಳ, ಸ್ಥಿರ ಕಣ್ಗಾವಲು ತಂಡಗಳು, ಪೊಲೀಸರು ಮತ್ತು ಆದಾಯ ತೆರಿಗೆ ಅಧಿಕಾರಿಗಳು 71.27 ಕೋ. ರೂ. ನಗದು, 18.51 ಕೋ.ರೂ. ಮೌಲ್ಯದ ಉಚಿತ ಉಡುಗೊರೆಗಳು, 26.63 ಕೋ. ರೂ. ಮೌಲ್ಯದ 62.26 ಕೆ.ಜಿ. ಬಂಗಾರ, 2.79 ಕೋ. ರೂ. ಮೌಲ್ಯದ 401.97 ಕೆ.ಜಿ. ಬೆಳ್ಳಿಯನ್ನು ವಶಪಡಿಸಿಕೊಂಡಿವೆ. ಈ ಸಂಬಂಧ ಒಟ್ಟು 1,410 ಎಫ್ಐಆರ್ಗಳನ್ನು ದಾಖಲಿಸಿಕೊಳ್ಳಲಾಗಿದೆ.
ವಿವಿಧ ಇಲಾಖೆಗಳ ಅಧಿಕಾರಿಗಳು 37.59 ಕೋ. ರೂ. ಮೌಲ್ಯದ 8.94 ಲಕ್ಷ ಲೀಟರ್ ಮದ್ಯ ಹಾಗೂ 13.45 ಕೋ. ರೂ. ಮೌಲ್ಯದ 654.22 ಕೆ.ಜಿ. ಮಾದಕ ವಸ್ತುಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.
ಅಬಕಾರಿ ಇಲಾಖೆಯು 1,787 ಗಂಭೀರ, ಪರವಾನಿಗೆ ಉಲ್ಲಂ ಸಿದ 1,337, ಎನ್ಡಿಪಿಎಸ್ 65 ಮತ್ತು ಅಬಕಾರಿ ಕಾಯ್ದೆ ಅನ್ವಯ ಒಟ್ಟು 8,124 ಪ್ರಕರಣಗಳನ್ನು ದಾಖಲಿಸಿಕೊಂಡಿದೆ. 1,202 ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ರಾಜ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು
Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ
Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು
Mangaluru: ಸೈಬರ್ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ
Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.