ಮಾಜಿ CM ಗಳ ವಲಸೆ ಹಿಂದೆ ಫ‌ಲ ನೀಡಿತ್ತೇ?


Team Udayavani, Apr 17, 2023, 7:59 AM IST

politi

ಬೆಂಗಳೂರು: ವರಿಷ್ಠರ ಜತೆಗಿನ ವೈಮನಸ್ಯಕ್ಕಾಗಿ ಪಕ್ಷ ತೊರೆದ ಹಾಗೂ ಹೊಸ ಪಕ್ಷ ಕಟ್ಟುವ ಸಾಹಸಕ್ಕೆ ಕೈ ಹಾಕಿದ ಯಾವುದೇ ಮಾಜಿ ಮುಖ್ಯಮಂತ್ರಿಗಳು ರಾಜಕೀಯವಾಗಿ ಯಶಸ್ವಿಯಾದ ಉದಾಹರಣೆ ಕರ್ನಾಟಕದ ರಾಜಕಾರಣದಲ್ಲಿ ಇದುವರೆಗೆ ಇಲ್ಲ.

ಹಿಂದುಳಿದ ವರ್ಗದ ಹರಿಕಾರ ಎಂದೇ ರಾಜ್ಯ ರಾಜಕಾರಣದಲ್ಲಿ ಖ್ಯಾತರಾಗಿದ್ದ ವರ್ಚಸ್ವಿ ನಾಯಕ ದಿ| ದೇವರಾಜ್‌ ಅರಸು ಅವರಿಂದ ಮೊದಲ್ಗೊಂಡು ಬಿ.ಎಸ್‌.ಯಡಿಯೂರಪ್ಪನವರವರೆಗೂ ಈ ವೈಫ‌ಲ್ಯದ ಸಾಲೇ ನಮ್ಮ ಕಣ್ಣ ಮುಂದಿದೆ. ಹೀಗಾಗಿ ವರಿಷ್ಠರ ವಿರುದ್ಧ ಸೆಡ್ಡು ಹೊಡೆದು ಕಾಂಗ್ರೆಸ್‌ನತ್ತ ಮುಖ ಮಾಡಿರುವ ಜಗದೀಶ್‌ ಶೆಟ್ಟರ್‌ ಯಶಸ್ವಿಯಾಗಬಹುದೇ? ಅಥವಾ ತಮ್ಮನ್ನು ನಿರ್ಲಕ್ಷಿಸಿದ ವರಿಷ್ಠರಿಗೆ ಸೋಲುಣಿಸುವುದಕ್ಕಾದರೂ ಅವರ ಬಂಡಾಯದ ಬಿಸಿ ಸಫ‌ಲವಾಗಬಹುದೇ ಎಂಬ ಚರ್ಚೆ ಈಗ ಪ್ರಾರಂಭವಾಗಿದೆ.

ಡಿ.ದೇವರಾಜ ಅರಸು

ವರಿಷ್ಠರ ವಿರುದ್ಧ ಸೆಟೆದು ನಿಂತು ಪ್ರತ್ಯೇಕ ಪಕ್ಷ ಕಟ್ಟಿಯೂ ಸಫ‌ಲರಾಗದ ನಾಯಕರ ಪೈಕಿ ದಿ| ದೇವರಾಜ್‌ ಅರಸು ಮೊದಲ ಸಾಲಿನಲ್ಲಿ ನಿಲ್ಲುತ್ತಾರೆ. ರಾಜ್ಯದಲ್ಲಿ ಸತತ ಎರಡು ಬಾರಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತಂದರೂ, ಹಿಂದುಳಿದ ವರ್ಗದ ರಾಜಕಾರಣಕ್ಕೆ ಹೊಸ ಆಯಾಮವನ್ನೇ ಕೊಟ್ಟು ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದ್ದರೂ ಇಂದಿರಾ ಗಾಂಧಿ ಹಾಗೂ ಕಾಂಗ್ರೆಸ್‌ ಅಲೆಯ ವಿರುದ್ಧ ಈಜಿ ರಾಜಕೀಯವಾಗಿ ಸಫ‌ಲತೆ ಕಾಣುವುದಕ್ಕೆ ಅರಸು ಅವರಿಗೆ ಸಾಧ್ಯವಾಗಲೇ ಇಲ್ಲ.

ಎಸ್‌.ಬಂಗಾರಪ್ಪ

ಅದಾದ ಬಳಿಕ ಹಿಂದುಳಿದ ವರ್ಗಕ್ಕೆ ಸೇರಿದ ಇನ್ನೊಬ್ಬ ಜನಪ್ರಿಯ ನಾಯಕ ಎಸ್‌.ಬಂಗಾರಪ್ಪ ಕೂಡಾ ಕಾಂಗ್ರೆಸ್‌ ವಿರುದ್ಧ ಬಂಡಾಯವೆದ್ದು ಪ್ರತ್ಯೇಕ ಪಕ್ಷ ಸ್ಥಾಪಿಸಿದರು. ತಮಗಿದ್ದ ಜನಪ್ರಿಯತೆಯ ಬಲದಿಂದ ಕಾಂಗ್ರೆಸ್‌ನ್ನು ಅಧಿಕಾರದಿಂದ ದೂರ ಇಡುವಲ್ಲಿ ಬಂಗಾರಪ್ಪ ಸ್ಥಾಪಿಸಿದ ಹೊಸ ಪಕ್ಷ ಯಶ ಕಂಡಿತ್ತಾದರೂ ಆ ಬಳಿಕ ಅಧಿಕಾರದ ಮೊಗಸಾಲೆಗೆ ಬರುವುದಕ್ಕೆ ಬಂಗಾರಪ್ಪ ಸಫ‌ಲರಾಗಲಿಲ್ಲ. ಸಾಲು ಸಾಲು ಪಕ್ಷಾಂತರದ ಮೂಲಕ ಅವರು ತಮ್ಮ ಅಸ್ಥಿತ್ವ ಉಳಿಸಿಕೊಂಡರೇ ಹೊರತು ಕಾಂಗ್ರೆಸ್‌ ಶ್ರೀರಕ್ಷೆಯಿಂದ ಆಚೆ ಬಂದು ಬಲಾಡ್ಯ ರಾಜಕೀಯ ಶಕ್ತಿಯಾಗುವ ಬಂಗಾರಪ್ಪ ನವರ ಕನಸು ಕೊನೆಯವರೆಗೂ ಈಡೇರಲಿಲ್ಲ.

ಬಿ.ಎಸ್‌.ಯಡಿಯೂರಪ್ಪ

ಇದೇ ಹಾದಿಯಲ್ಲಿ ಸಾಗಿದ ಮತ್ತೂಬ್ಬ ನಾಯಕ ಬಿ.ಎಸ್‌.ಯಡಿಯೂರಪ್ಪ. ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರದಲ್ಲಿದ್ದಾಗಲೇ ತಮ್ಮ ಅಪಾರ ಬೆಂಬಲಿಗರ ಜತೆಗೆ ಪಕ್ಷ ತೊರೆದು ಕೆಜೆಪಿ ಕಟ್ಟಿದ ಯಡಿಯೂರಪ್ಪ ಕೂಡಾ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವಲ್ಲಿ ಸಫ‌ಲರಾದರೂ ವೈಯಕ್ತಿಕವಾಗಿ ಯಾವುದೇ ಲಾಭ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ. ಯಡಿಯೂರಪ್ಪ ಇಲ್ಲದ ಬಿಜೆಪಿ, ಬಿಜೆಪಿ ಇಲ್ಲದ ಯಡಿಯೂರಪ್ಪ ಶೂನ್ಯ ಎಂಬ ಚರ್ಚೆ ಆಗಲೇ ಹುಟ್ಟಿಕೊಂಡಿತು. ಹೀಗಾಗಿ ಮರಳಿ ಪಕ್ಷ ಸೇರಿದ ಯಡಿಯೂರಪ್ಪ ಮತ್ತೂಮ್ಮೆ ಪಕ್ಷವನ್ನು ಅಧಿಕಾರಕ್ಕೆ ತಂದು ಮತ್ತೂಮ್ಮೆ ಮುಖ್ಯಮಂತ್ರಿಯಾದರು.

ಎಸ್‌.ಎಂ.ಕೃಷ್ಣ

ಇನ್ನು ಕಾಂಗ್ರೆಸ್‌ನ ಇನ್ನೊಬ್ಬ ಹಿರಿಯ ನಾಯಕ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಕೂಡ ವರಿಷ್ಠರ ವಿರುದ್ಧ ಬೇಸರ ಗೊಂಡು ಬಿಜೆಪಿ ಸೇರ್ಪಡೆ ಯಾದರೂ ರಾಜಕೀಯವಾಗಿ ನೇಪಥ್ಯಕ್ಕೆ ಸರಿದು ಹೋದರು. ಈ ಪಟ್ಟಿಯಲ್ಲಿ ಈಗ ಜಗದೀಶ್‌ ಶೆಟ್ಟರ್‌ ಸೇರ್ಪಡೆಗೊಡಿದ್ದಾರೆ.

ಟಾಪ್ ನ್ಯೂಸ್

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.