ಯಮಸ್ವರೂಪಿ ಟಿಪ್ಪರ್‌ ಲಾರಿಗಳ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ


Team Udayavani, Apr 18, 2023, 4:54 PM IST

tdy-19

ಬೇಲೂರು: ಮಲ್ಲನಹಳ್ಳಿ ಗ್ರಾಮದಲ್ಲಿ ಹಾದು ಹೋಗುವ ಟಿಪ್ಪರ್‌ ಲಾರಿಗಳ ಅತಿವೇಗದಿಂದ ಅಪಘಾತ ಉಂಟಾಗುತ್ತಿದೆ. ದೂಳಿಯಿಂದ ಜನರು ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಗ್ರಾಮಸ್ಥರಾದ ಪ್ರಮೋದ್‌, ಮಲ್ಲನಹಳ್ಳಿಯಿಂದ 6 ಕಿ.ಮೀ. ದೂರದ ಸಂಶೆಟ್ಟಿಹಳ್ಳಿ ಕಾವಲಿನಲ್ಲಿ ನಾಲ್ವರು ಕಲ್ಲುಗಣಿಗಾರಿಕೆ ನಡೆಸುತ್ತಾರೆ. ಈ ಮಾರ್ಗದಲ್ಲಿ 100ಕ್ಕೂ ಹೆಚ್ಚಿನ ಟಿಪ್ಪರ್‌ ಲಾರಿಗಳು ಹಗಲು ರಾತ್ರಿ ಸಂಚರಿಸುತ್ತವೆ. ಅತಿವೇಗವಾಗಿ ಸಂಚರಿಸುವುದರಿಂದ ಸಣ್ಣ ಪುಟ್ಟ ವಾಹನಗಳಿಗೆ ರಸ್ತೆಯಲ್ಲಿ ಜಾಗ ನೀಡುವುದಿಲ್ಲ. ಇರುವ ಕಿರಿದಾದ ರಸ್ತೆಯ ತುಂಬ ಅಡ್ಡಾದಿಡ್ಡಿ ಟಿಪ್ಪರ್‌ ಲಾರಿಗಳು ಓಡಾಡುವುದರಿಂದ ಅಪಘಾತಗಳು ಸಂಭವಿಸುತ್ತಿವೆ ಎಂದು ಆರೋಪಿಸಿದರು.

ಗ್ರಾಮದಲ್ಲಿ ದೂಳು: ಗ್ರಾಮದ ನಡುವೆ ಹಾದು ಹೋಗುವ ಕಾರಣದಿಂದ ಇಡೀ ಗ್ರಾಮವೇ ದೂಳು ಮಯವಾಗಿ ಜನರು ಅನಾರೋಗ್ಯದಿಂದ ಆಸ್ಪತ್ರೆಗೆ ಅಲೆಯುವ ಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಟಿಪ್ಪರ್‌ ಲಾರಿ ಚಾಲಕರನ್ನು ಕೇಳಿದರೆ, ಉಡಾಫೆ ಯಿಂದ ವರ್ತಿಸುತ್ತಾರೆ ಎಂದು ದೂರಿದರು.

ನಮಗೆ ನ್ಯಾಯ ಬೇಕು: ನಿಮ್ಮ ಅಪ್ಪನದ ರಸ್ತೆ ಎಂದು ವೇಗದಿಂದ ಹೋಗುತ್ತಾರೆ. ಇದ್ದರಿಂದಲೇ ಅಪಘಾತಗಳು ಸಂಭವಿಸುತ್ತಿವೆ. ಬೈಕ್‌, ಕಾರುಗಳು ಓಡಾಡುವುದೇ ಕಷ್ಟವಾಗಿದೆ. ಬೈಕ್‌ ಸವಾರನಿಗೆ ಟಿಪ್ಪರ್‌ ಲಾರಿ ದಾರಿ ಬಿಡದೆ ಕಾರಣಕ್ಕೆ ಸೈಡಿಗೆ ಹೋಗಬೇಕಾಯಿತು. ಈ ವೇಳೆ ಮಗುವಿಗೆ ಬೈಕ್‌ ತಗುಲಿ ತೀವ್ರ ಗಾಯವಾಗಿದೆ. ಮಗು ಚಂದನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ನಮಗೆ ನ್ಯಾಯ ಬೇಕು ಎಂದು ಜನರು ಆಕ್ರೋಶ ವ್ಯಕ್ತಪಡಿಸಿದರು.

ನಿಧಾನವಾಗಿ ಚಲಿಸಲಿ: ರಸ್ತೆಯಲ್ಲಿ ಟಿಪ್ಪರ್‌ ಲಾರಿಗಳು ಸಂಚರಿಸಲು ನಾವುಗಳು ಬೇಡ ಎನ್ನುವುದಿಲ್ಲ. ದಿನ ನಿತ್ಯ ದೂಳು ಹೇಳದಂತೆ ನೀರು ಹಾಕಬೇಕು, ರಸ್ತೆಯನ್ನು ವಿಸ್ತರಿಸಬೇಕು. ಹಾಗೆಯೇ ಟಿಪ್ಪರ್‌ ಲಾರಿ ಚಾಲಕರು ಗ್ರಾಮದ ಸಮೀಪದಲ್ಲಿ ಮಿತಿಯಲ್ಲಿ ಸಂಚರಿಸಬೇಕು. ರಸ್ತೆಯ ಇಕ್ಕಲೆಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆ, ಅಂಗನವಾಡಿ ಕೇಂದ್ರವಿದೆ. ಇದನ್ನು ಮನಗೊಂಡು ಸಂಚರಿಸಲಿ. ಅದನ್ನು ಬಿಟ್ಟು ಉಡಾಫೆಯಿಂದ ಅತಿವೇಗದಿಂದ ಚಲಿಸಿದರೆ, ಇಲ್ಲಿ ಯಾವ ಕಾರಣಕ್ಕೂ ದಾರಿ ಬಿಡುವ ಪ್ರಶ್ನೆ ಇಲ್ಲ ಎಂದು ತಿಳಿಸಿದರು.

ಗ್ರಾಮಸ್ಥರಾದ ಕಾಂತರಾಜ್‌, ಮಂಜಣ್ಣ, ಮಂಜುನಾಥ, ಜಗದೀಶ್‌, ನಾಗರಾಜ್‌, ತೇಜಮೂರ್ತಿ, ರವೀಶ್‌, ರಾಜೇಶ್‌, ಪಾಪು ತೀರ್ಥಕುಮಾರ್‌, ರಘು ಮುಂತಾದವರು ಇದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.