Lakshmi Hebbalkar ; ಕೋಟಿ ಒಡತಿ ಲಕ್ಷ್ಮೀ ಹೆಬ್ಬಾಳಕರಗೂ ಸಾಲದ ಹೊರೆ

ಐದೇ ವರ್ಷದಲ್ಲಿ 6.70 ಕೋಟಿ ರೂ. ಆದಾಯ ಏರಿಕೆ

Team Udayavani, Apr 19, 2023, 10:16 AM IST

Lakshmi Hebbalkar ; ಕೋಟಿ ಒಡತಿ ಲಕ್ಷ್ಮೀ ಹೆಬ್ಬಾಳಕರಗೂ ಸಾಲದ ಹೊರೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳಕರ ಕೋಟಿ ರೂ. ಮೌಲ್ಯದ ಆಸ್ತಿಗಳ ಒಡತಿ. ಜತೆಗೆ ಕೋಟ್ಯಾಂತರ ರೂ. ಸಾಲದ ಭಾರ. ಸ್ವಂತ ಹೆಸರಿನಲ್ಲಿ ಐಷಾರಾಮಿ ಕಾರು, ಬಂಗಾರದ ಆಭರಣಗಳಿವೆ. ಆದರೂ ಸಾಲದ ಹೊರೆ ಬಿಟ್ಟಿಲ್ಲ.

ಐದು ವರ್ಷಗಳಲ್ಲಿ 6.70 ಕೋಟಿ ರೂ. ಆದಾಯ ಏರಿಕೆ ಕಂಡಿದೆ. 2018ರಲ್ಲಿ 36.58 ಲಕ್ಷ ರೂ. ಆದಾಯ ಹೊಂದಿದ್ದ ಹೆಬ್ಬಾಳಕರ, 2019ರಲ್ಲಿ 41.67 ಲಕ್ಷ ರೂ., 2020ರಲ್ಲಿ 43.71 ಲಕ್ಷ ರೂ., 2021ರಲ್ಲಿ 42.14 ಲಕ್ಷ ರೂ. ಆದಾಯ ಹೊಂದಿದ್ದಾಗಿ ಅವರು ಸಲ್ಲಿಸಿದ ಅಫಿಡವಿಟ್‌ನಲ್ಲಿದೆ. 2022ರಲ್ಲಿ ಆದಾಯ ಅಪಾರ ಪ್ರಮಾಣದಲ್ಲಿ ಹೆಚ್ಚಾಗಿದೆ.

ಮಂಗಳವಾರ ನಾಮಪತ್ರ ಸಲ್ಲಿಸಿದ ನಂತರ ತಮ್ಮ ಪ್ರಮಾಣ ಪತ್ರದಲ್ಲಿ ಆಸ್ತಿ ವಿವರ ನೀಡಿರುವ ಲಕ್ಷ್ಮೀ ಹೆಬ್ಬಾಳಕರ ತಮ್ಮ ಹೆಸರಿನಲ್ಲಿ 10,85,81,167 ರೂ. ಮೌಲ್ಯದ ಚರಾಸ್ತಿ ಹೊಂದಿದ್ದಾರೆ. ಅವರ ಪತಿ ರವೀಂದ್ರ ಅವರ ಹೆಸರಿನಲ್ಲಿ 26.80 ಲಕ್ಷ ರೂ. ಬೆಲೆಯ ಚರಾಸ್ತಿ ಇದೆ ಎಂದು ತಿಳಿಸಿದ್ದಾರೆ.

ಅಲ್ಲದೆ 1.90 ಕೋಟಿ ರೂ. ಬೆಲೆಯ ಸ್ಥಿರಾಸ್ತಿ ಹೊಂದಿರುವ ಹೆಬ್ಬಾಳಕರ ಅವರ ಮೈಮೇಲೆ 8 ಕೋಟಿ ಸಾಲ ಸಹ ಇದೆ. ಅವರ ಪತಿಯ ಹೆಸರಿನಲ್ಲಿ ಸಹ 5.25 ಲಕ್ಷ ರೂ. ಸಾಲ ಇದೆ. ಹೆಬ್ಬಾಳಕರ ಅವರ ಕೈಯಲ್ಲಿ 11.51 ಲಕ್ಷ ರೂ. ನಗದು ಹಣವಿದೆ. ಪತಿ ರವೀಂದ್ರ ಅವರ ಕೈಯಲ್ಲಿ 29,658 ರೂ. ನಗದು ಹಣ ಹೊಂದಿದ್ದಾರೆ.

27.55 ಲಕ್ಷ ರೂ. ಬೆಲೆಬಾಳುವ ಕೃಷಿ ಭೂಮಿ, 18 ಲಕ್ಷದಷ್ಟು ಕೃಷಿಯೇತರ ಜಮೀನು ಹೊಂದಿದ್ದಾರೆ. 10.86 ಕೋಟಿ ರೂ. ಮೌಲ್ಯದ ಚರಾಸ್ತಿ ಹಾಗೂ 1.90 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ.

ಹೆಬ್ಬಾಳಕರ ಅವರ ಹೆಸರಿನಲ್ಲಿ 30 ಲಕ್ಷ ರೂ. ಬೆಲೆಯ ಐಷಾರಾಮಿ ಕಾರಿದ್ದರೆ, ಪತಿಯ ಹೆಸರಿನಲ್ಲಿ 14 ಲಕ್ಷ ರೂ ಬೆಲೆಯ ಕಾರಿದೆ. ಲಕ್ಷ್ಮೀ ಹೆಬ್ಬಾಳಕರ ತಮ್ಮ ಹೆಸರಿನಲ್ಲಿ 28 ಲಕ್ಷ ರೂ. ಬೆಲೆಯ ಬಂಗಾರದ ಆಭರಣ ಮತ್ತು 1.10 ಲಕ್ಷ ರೂ ಬೆಲೆಯ ಎರಡು ಕೆಜಿ ಬೆಳ್ಳಿ ಹೊಂದಿದ್ದಾರೆ. ಅವರ ಪತಿಯ ಬಳಿ ಐದು ಲಕ್ಷ ರೂ. ಬೆಲೆಯ ಬಂಗಾರದ ಆಭರಣಗಳಿವೆ.

ಹೆಬ್ಬಾಳಕರ ಅವರಿಗೆ ಸ್ನೇಹಿತರು ಮತ್ತು ಕುಟುಂಬದ ಸದಸ್ಯರು 5.63 ಕೋಟಿ ರೂ. ಸಾಲ ನೀಡಿದ್ದಾರೆ. ಅಲ್ಲದೆ ಸರ್ಕಾರದ 1.19 ಕೋಟಿ ರೂ ಬಾಕಿ ಇದೆ. ಬ್ಯಾಂಕ್ ಮತ್ತು ವಿವಿಧ ಹಣಕಾಸು ಸಂಸ್ಥೆಗಳಿAದ 2.80 ಕೋಟಿ ರೂ. ಸಾಲ ಇದೆ. ಇದರಲ್ಲಿ ಸಹೋದರ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಹೆಬ್ಬಾಳಕರ ಅವರಿಗೆ 1.73 ಕೋಟಿ ರೂ. ಸಾಲ ನೀಡಿದ್ದಾರೆ. ಒಟ್ಟಾರೆ ಸುಮಾರು ಎಂಟು ಕೋಟಿ ರೂ. ಗಳಿಗೂ ಹೆಚ್ಚು ಸಾಲದ ಹೊರೆ ಹೆಬ್ಬಾಳಕರ ಅವರ ಮೇಲಿದೆ.

ಮುಖ್ಯವಾಗಿ ಲಕ್ಷ್ಮೀ ಹೆಬ್ಬಾಳಕರ ಅವರು ಹರ್ಷ ಶುರ‍್ಸ್ದಲ್ಲಿ 6.43 ಕೋಟಿ ರೂ. ಬೆಲೆಯ ಷೇರುಗಳನ್ನು ಹೊಂದಿದ್ದಾರೆ. ಇದಲ್ಲದೆ ಎನ್‌ಎಸ್‌ಎಸ್ ಸೇರಿದಂತೆ ವಿವಿಧ ಉಳಿತಾಯ ಯೋಜನೆಯಲ್ಲಿ ಆರು ಲಕ್ಷ ರೂ. ವಿನಿಯೋಗಿಸಿದ್ದಾರೆ.

ಟಾಪ್ ನ್ಯೂಸ್

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಉದ್ಯಮಿ ಹ*ತ್ಯೆ ಪ್ರಕರಣ: ಪತ್ನಿ ಸೇರಿ ಮೂವರ ಬಂಧನ

Belagavi: ಉದ್ಯಮಿ ಹ*ತ್ಯೆ ಪ್ರಕರಣ: ಪತ್ನಿ ಸೇರಿ ಮೂವರ ಬಂಧನ

Belagavi: ಕಿತ್ತರೂ ಉತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲೂ ರಸಮಂಜರಿ ಕಾರ್ಯಕ್ರಮ

Belagavi: ಕಿತ್ತರೂ ಉತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲೂ ರಸಮಂಜರಿ ಕಾರ್ಯಕ್ರಮ

Flight: ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ

Flight: ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ

11-

Bailhongal: ಕರೆಂಟ್ ಶಾಕ್ ತಗುಲಿ ಮಹಿಳೆ ಸಾವು

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.