Population India ಜನಸಂಖ್ಯೆಯಲ್ಲಿ ಚೀನಾವನ್ನು ಹಿಂದಿಕ್ಕಿ ನಂ.1

165 ಕೋಟಿಗೆ ತಲುಪಲಿದೆ....ನಂತರ... ; ವರದಿ ಹೇಳಿದ್ದೇನು?

Team Udayavani, Apr 19, 2023, 4:06 PM IST

1-sadsdsad

ನವದೆಹಲಿ : ವಿಶ್ವಸಂಸ್ಥೆಯ ಇತ್ತೀಚಿನ ಅಂಕಿಅಂಶಗಳ ಪ್ರಕಾರ ಭಾರತವು 142.86 ಕೋಟಿ ಜನರೊಂದಿಗೆ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಷ್ಟ್ರವಾಗಿ ಚೀನಾವನ್ನು ಹಿಂದಿಕ್ಕಿದೆ. ಇತ್ತೀಚಿನ ಅಂಕಿಅಂಶಗಳೊಂದಿಗೆ, ಚೀನಾ ಈಗ 142.57 ಕೋಟಿ ಜನಸಂಖ್ಯೆಯನ್ನು ಹೊಂದಿದ್ದು, ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿದೆ.

ವಿಶ್ವಸಂಸ್ಥೆಯ ಜನಸಂಖ್ಯಾ ನಿಧಿಯ ವರದಿಯ ಪ್ರಕಾರ ಭಾರತದ ಜನಸಂಖ್ಯೆಯ ಶೇಕಡಾ 68 ರಷ್ಟು ಜನರು 15-64 ವಯಸ್ಸಿನವರು ಎಂದು ವರದಿ ಹೇಳುತ್ತದೆ.

ಭಾರತದ ಜನಸಂಖ್ಯೆಯ ಶೇಕಡಾ 25 ರಷ್ಟು 0-14 ವರ್ಷ ವಯಸ್ಸಿನ ನಡುವೆ, 18 ಪ್ರತಿಶತ 10-19 ವರ್ಷ ವಯಸ್ಸಿನ, 26 ರಷ್ಟು 10-24 ವರ್ಷ ವಯಸ್ಸಿನ ವ್ಯಾಪ್ತಿಯಲ್ಲಿದೆ ಎಂದು ಯುಎನ್‌ಎಫ್‌ಪಿ ತೋರಿಸಿದೆ.

ತಜ್ಞರ ಪ್ರಕಾರ, ಕೇರಳ ಮತ್ತು ಪಂಜಾಬ್‌ಗಳು ವಯಸ್ಸಾದ ಜನಸಂಖ್ಯೆಯನ್ನು ಹೊಂದಿದ್ದರೆ, ಉತ್ತರ ಪ್ರದೇಶ ಮತ್ತು ಬಿಹಾರ ಅತೀ ಹೆಚ್ಚು ಯುವ ಜನಾಂಗವನ್ನು ಹೊಂದಿವೆ.

ವಿವಿಧ ಏಜೆನ್ಸಿಗಳು ನಡೆಸಿದ ಹಲವಾರು ಅಧ್ಯಯನಗಳು, ಭಾರತದ ಜನಸಂಖ್ಯೆಯು ಸುಮಾರು ಮೂರು ದಶಕಗಳಲ್ಲಿ ಹೆಚ್ಚಾಗುವ ನಿರೀಕ್ಷೆಯಿದ್ದು 165 ಕೋಟಿಗೆ ತಲುಪಲಿದೆ , ನಂತರ ಅದು ಕುಸಿಯಲು ಪ್ರಾರಂಭವಾಗುತ್ತದೆ ಎಂದು ವರದಿಗಳ ಪ್ರಕಾರ ಹೇಳಲಾಗಿದೆ.

ವಿಶ್ವಸಂಸ್ಥೆಯ ಜನಸಂಖ್ಯಾ ನಿಧಿ (UNFPA), ಭಾರತದ ಪ್ರತಿನಿಧಿ ಆಂಡ್ರಿಯಾ ವೊಜ್ನರ್, “ಭಾರತದ 1.4 ಶತಕೋಟಿ ಜನರನ್ನು 1.4 ಶತಕೋಟಿ ಅವಕಾಶಗಳಾಗಿ ನೋಡಬೇಕು. ಅತಿದೊಡ್ಡ ಯುವ ಸಮೂಹವನ್ನು ಹೊಂದಿರುವ ದೇಶವಾಗಿ, 254 ಮಿಲಿಯನ್ ಯುವಕರು (15-24 ವರ್ಷಗಳು)ನಾವೀನ್ಯತೆ, ಹೊಸ ಚಿಂತನೆ ಮತ್ತು ಶಾಶ್ವತ ಪರಿಹಾರಗಳ ಮೂಲವಾಗಿರಬಹುದು” ಎಂದು ಹೇಳಿದ್ದಾರೆ.

“ಮಹಿಳೆಯರು ಮತ್ತು ಹುಡುಗಿಯರು, ನಿರ್ದಿಷ್ಟವಾಗಿ, ಸಮಾನ ಶೈಕ್ಷಣಿಕ, ಕೌಶಲ್ಯ ನಿರ್ಮಾಣ ಅವಕಾಶಗಳು, ತಂತ್ರಜ್ಞಾನ, ಡಿಜಿಟಲ್ ಆವಿಷ್ಕಾರಗಳಿಗೆ ಪ್ರವೇಶ, ಮುಖ್ಯವಾಗಿ ತಮ್ಮ ಸಂತಾನೋತ್ಪತ್ತಿ ಹಕ್ಕುಗಳು ಮತ್ತು ಆಯ್ಕೆಗಳನ್ನು ಸಂಪೂರ್ಣವಾಗಿ ಚಲಾಯಿಸುವ ಮಾಹಿತಿ ಮತ್ತು ಶಕ್ತಿಯನ್ನು ಹೊಂದಿದ್ದರೆ ಈ ಪಥವು ಮುಂದೆ ಸಾಗಬಹುದು” ಎಂದು ಯುಎನ್ ಅಧಿಕಾರಿ ಹೇಳಿದ್ದಾರೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.