![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Apr 20, 2023, 6:37 AM IST
ತುಮಕೂರು: ಐತಿಹಾಸಿಕ ಹಿನ್ನೆಲೆಯ ಪುರಾತನ ವೀರಶೈವ ಮಠವಾದ ಶ್ರೀ ಕ್ಷೇತ್ರ ಸಿದ್ಧಗಂಗಾ ಮಠಕ್ಕೆ ಉತ್ತರಾಧಿಕಾರಿಯಾಗಿ ಮನೋಜ್ ಕುಮಾರ್ ಅವರನ್ನು ಆಯ್ಕೆ ಮಾಡಲಾ ಗಿದೆ ಎಂದು ಸಿದ್ಧಗಂಗಾ ಮಠದ ಕಾರ್ಯದರ್ಶಿ ಟಿ.ಕೆ.ನಂಜುಂಡಪ್ಪ ಪ್ರಕಟಿಸಿದ್ದಾರೆ.
ನೂತನ ನಿರಂಜನ ಪಟ್ಟಾಧಿಕಾರ ಮತ್ತು ಉತ್ತರಾಧಿಕಾರಿ ನೇಮಕ ಕಾರ್ಯಕ್ರಮ ಇದೇ ತಿಂಗಳ 23ರ ಬಸವಜಯಂತಿ ದಿನ ನಡೆಯಲಿದೆ. ಶ್ರೀ ಸಿದ್ಧಲಿಂಗ ಸ್ವಾಮೀಜಿಗಳು ಮಠದ ತಮ್ಮ ಉತ್ತರಾಧಿಕಾರಿಯನ್ನಾಗಿ ಮನೋಜ್ ಕುಮಾರ್ ಅವರನ್ನು ಆಯ್ಕೆ ಮಾಡಿದ್ದಾರೆ.
ಮನೋಜ್ ಕುಮಾರ್ಅವರು 1987ರ ಜೂನ್ 2ರಂದು ಜನಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮೈಲನಹಳ್ಳಿಯ ಎಂ.ಬಿ.ಷಡಕ್ಷರಯ್ಯ ಮತ್ತು ವಿರುಪಾಕ್ಷಮ್ಮ ಅವರ ಪುತ್ರ. ಬಿ.ಎಸ್ಸಿ, ಬಿ.ಎಡ್, ಎಂಎಸ್ಸಿ, ಎಂ.ಎ. ಪದವೀಧರರು. ಪ್ರಸ್ತುತ ಶ್ರೀ ಸಿದ್ಧಗಂಗಾ ಪಾಲಿಟೆಕ್ನಿಕ್ ನಲ್ಲಿ ಉಪ ನ್ಯಾಸಕರಾಗಿದ್ದಾರೆ.
ಇವರೊಂದಿಗೆ ಶ್ರೀ ಮಠದ ವ್ಯಾಪ್ತಿಗೆ ಒಳಪಡುವ ಕಂಚುಗಲ್ ಬಂಡೇಮಠಕ್ಕೆ ಉತ್ತರಾಧಿಕಾ ರಿಯಾಗಿ ಹರ್ಷ ಕೆ.ಎಂ. ಮತ್ತು ಬಸವಕಲ್ಯಾಣ ಮಠಕ್ಕೆ ಗೌರೀಶ್ ಕುಮಾರ್ ಅವರನ್ನು ಉತ್ತರಾಧಿಕಾರಿ ಗಳನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.