ವೃತ್ತಿಪರ ಕ್ರಿಕೆಟ್ ಗೆ ವಿದಾಯ ಹೇಳಿದ ಇಂಗ್ಲೆಂಡ್- ಜಿಂಬಾಬ್ವೆ ಆಟಗಾರ ಗ್ಯಾರಿ ಬ್ಯಾಲೆನ್ಸ್
Team Udayavani, Apr 20, 2023, 1:19 PM IST
ಹರಾರೆ: ಇಂಗ್ಲೆಂಡ್ ಮತ್ತು ಜಿಂಬಾಬ್ವೆ ಪರ ಆಡಿದ ಗ್ಯಾರಿ ಬ್ಯಾಲೆನ್ಸ್ ಅವರು ವೃತ್ತಿಪರ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ.
ಈ ಹಿಂದೆ ಒಮ್ಮೆ ನಿವೃತ್ತಿ ಘೋಷಣೆ ಮಾಡಿದ್ದ ಗ್ಯಾರಿ ಬ್ಯಾಲೆನ್ಸ್ ಅವರು ಕೇವಲ ನಾಲ್ಕು ತಿಂಗಳ ಹಿಂದೆ ನಿವೃತ್ತಿ ಹಿಂಪಡೆದು ಜಿಂಬಾಬ್ವರ ಆಡಲು ಬಂದಿದ್ದರು. 2022 ರ ಡಿಸೆಂಬರ್ ನಲ್ಲಿ ಜಿಂಬಾಬ್ವೆ ಕ್ರಿಕೆಟ್ ನೊಂದಿಗೆ ಎರಡು ವರ್ಷಗಳ ಒಪ್ಪಂದಕ್ಕೆ ಸಹಿ ಹಾಕಿದ್ದರು ಆದರೆ ಇದೀಗ ಎಲ್ಲಾ ಪ್ರಕಾರದ ಕ್ರಿಕೆಟ್ನಿಂದ ನಿವೃತ್ತಿಯ ನಿರ್ಧಾರದಿಂದ ಅಭಿಮಾನಿಗಳಿಗೆ ಆಘಾತ ನೀಡಿದ್ದಾರೆ.
ಕಳೆದ ಫೆಬ್ರವರಿ ಯಲ್ಲಿ ಜಿಂಬಾಬ್ವೆ ಪರವಾಡಿದ ತನ್ನ ಚೊಚ್ಚಲ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಬ್ಯಾಲೆನ್ಸ್ ಶತಕವನ್ನು ಗಳಿಸಿದರು. 33 ವರ್ಷದ ಮಾಜಿ ಯಾರ್ಕ್ಷೈರ್ ಆಟಗಾರ ಜಿಂಬಾಬ್ವೆ ಕ್ರಿಕೆಟ್ ಗೆ ಹೊಸ ಸಂತೋಷವನ್ನು ನೀಡಿದ್ದಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದರು.
“ದೀರ್ಘ ಆಲೋಚನೆಯ ನಂತರ, ನಾನು ತಕ್ಷಣದ ಪರಿಣಾಮದೊಂದಿಗೆ ಎಲ್ಲಾ ಪ್ರಕಾರದ ವೃತ್ತಿಪರ ಕ್ರಿಕೆಟ್ನಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದೇನೆ. ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಮರಳಲು ನನಗೆ ಅವಕಾಶವನ್ನು ಒದಗಿಸಿದ ಜಿಂಬಾಬ್ವೆ ಕ್ರಿಕೆಟ್ ಗೆ ನಾನು ಯಾವಾಗಲೂ ಕೃತಜ್ಞರಾಗಿರುತ್ತೇನೆ” ಎಂದು ಗ್ಯಾರಿ ಬ್ಯಾಲೆನ್ಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:ಖ್ಯಾತ ನಿರ್ಮಾಪಕ ಯಶ್ ಚೋಪ್ರಾ ಪತ್ನಿ ಪಮೇಲಾ ಚೋಪ್ರಾ ನಿಧನ
ಜಿಂಬಾಬ್ವೆ ಮೂಲದ ಕ್ರಿಕೆಟಿಗ ಬ್ಯಾಲೆನ್ಸ್ 2013ರಲ್ಲಿ ಇಂಗ್ಲೆಂಡ್ ಪರವಾಗಿ ಪದಾರ್ಪಣೆ ಮಾಡಿದರು. 2014 ರಲ್ಲಿ ತಮ್ಮ ಟೆಸ್ಟ್ ವೃತ್ತಿಜೀವನವನ್ನು ಪ್ರಾರಂಭಿಸಿದ ಅವರು ಕೇವಲ ಹತ್ತು ಪಂದ್ಯಗಳಲ್ಲಿ ಟೆಸ್ಟ್ಗಳಲ್ಲಿ ಇಂಗ್ಲೆಂಡ್ 1000 ರನ್ ಗಳಿಸಿದ್ದರು. ವೇಗವಾಗಿ ಈ ಸಾಧನೆ ಮಾಡಿದ ಮೂರನೇ ಆಟಗಾರರಾಗಿದ್ದರು.
ಬ್ಯಾಲೆನ್ಸ್ ಕೊನೆಯ ಬಾರಿಗೆ 2017 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ತವರಿನ ಟೆಸ್ಟ್ ಸರಣಿಯಲ್ಲಿ ಇಂಗ್ಲೆಂಡ್ ತಂಡದಲ್ಲಿ ಕಾಣಿಸಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.