ಮತದಾರರಲ್ಲೂ ಕಾರ್ಯಕರ್ತರ ಉತ್ಸಾಹ-Congressನಿಂದ ಪರಿವರ್ತನೆ ಎಂಬ ಭರವಸೆ :ಭೀಮಣ್ಣ ನಾಯ್ಕ
ಶಿರಸಿಯ ಸಮಗ್ರ ಅಭಿವೃದ್ಧಿ, ಆರೋಗ್ಯ ಸೌಲಭ್ಯಕ್ಕೆ ಬದ್ಧ
Team Udayavani, Apr 20, 2023, 4:29 PM IST
ಶಿರಸಿ: ಸಿದ್ದಾಪುರ, ಶಿರಸಿ ವಿಧಾನ ಸಭಾ ಕ್ಷೇತ್ರದ ಸಮಗ್ರ ಅಭಿವೃದ್ದಿಯ ಜೊತೆ ಆರೋಗ್ಯಕ್ಕೆ ಸಂಬಂಧಿಸಿ ಸಕಲ ವ್ಯವಸ್ಥೆ ಮಾಡಲಾಗುತ್ತದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ವಾಗ್ದಾನ ಮಾಡಿದರು.
ಗುರುವಾರ ತಾಲೂಕಿನ ಮಂಜುಗುಣಿಯ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ವಿವಿಧಡೆ ಕಾರ್ಯಕರ್ತರ ಭೇಟಿ, ಮತದಾರರ ಸಂಪರ್ಕ ಮಾಡಿದ ಬಳಿಕ ಮಾತನಾಡಿದರು.
ಬಹುತೇಕ ಗ್ರಾಮೀಣ ರಸ್ತೆಗಳು ಅರಬರೆಯಾಗಿದೆ. ಎಷ್ಟೋ ಊರುಗಳುಗೆ ಶಾಶ್ವತ ಕುಡಿಯುವ ನೀರಿನ ಸಮಸ್ಯೆ ಅರಿವಿಗೆ ಬಂದಿದೆ. ಸರಕಾರಿ ಸೌಲಭ್ಯಗಳು ಅರ್ಹರಿಗೆ ತಲುಪಿಸುವ ಕಾರ್ಯ ಆಗಬೇಕು. ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಬದ್ಧ ಎಂದರು.
ಆರೋಗ್ಯ ಸಂಬಂಧಿ ಕೊರತೆ ನೀಗಿಸಲೂ ಪ್ರಯತ್ನ ಮಾಡಬೇಕಿದೆ. ಅದಕ್ಕೂ ಆದ್ಯತೆಯಲ್ಲಿ ಕೆಲಸ ಮಾಡಲಾಗುತ್ತದೆ. ಆರೋಗ್ಯಕ್ಕೆ ಸಂಬಂಧಿಸಿ ತುರ್ತು ಸೇವೆಗೆ ಹೊರ ಜಿಲ್ಲೆಯ ಸೌಲಭ್ಯ ಅವಲಂಬಿಸಬೇಕಾಗಿದೆ. ಅದರ ಜೊತೆಗೆ ಪ್ರವಾಸೋದ್ಯಮಕ್ಷೇತ್ರದ ಅಭಿವೃದ್ದಿ, ಯುವಕರಿಗೆ ಮಾದರಿ ಉದ್ಯೋಗಕ್ಕೂ ಹೆಜ್ಜೆ ಇಡಲಾಗುತ್ತದೆ ಎಂದರು.
ಈಗಾಗಲೇ ಕಾಂಗ್ರೆಸ್ ನೀಡದ ಗ್ಯಾರೆಂಟಿ ಕಾರ್ಡ ಜೊತೆಗೆ ಇನ್ನೂ ಅನೇಕ ಯೋಜನೆಯ ಪ್ರಣಾಳಿಕೆಯನ್ನು ಘೋಷಿಸಲಾಗುತ್ತದೆ. ಕಾಂಗ್ರೆಸ್ ನೀಡಿದ ಭಾಷೆಗೆ ತಪ್ಪಿ ನಡೆಯುವದಿಲ್ಲ ಎಂದರು.
ಬಿಜೆಪಿಯಿಂದ ಜಗದೀಶ ಶೆಟ್ಟರ ಅವರು ಕಾಂಗ್ರೆಸ್ ಸೇರಿದ್ದೂ ಇನ್ನಷ್ಟು ಶಕ್ತಿ ಬಂದಿದೆ. ಕ್ಷೇತ್ರದಲ್ಲಿ, ರಾಜ್ಯದಲ್ಲೂ ಬದಲಾವಣೆ ಗಾಳಿ ಇದೆ. ಈ ಬಾರಿ ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಗೆ ಅವಕಾಶ ನೀಡಲು ವಿನಂತಿಸುತ್ತೇವೆ. ನೀವು ಬಯಸಿದ ಆಡಳಿತ ನೀಡುತ್ತೇವೆ ಎಂದರು.
ಇದನ್ನೂ ಓದಿ: Karnataka election 2023: ಪುತ್ತೂರು- ಬಡವರು ಗೆಲ್ಲಲು ಕಾಂಗ್ರೆಸ್ ಗೆಲ್ಲಿಸಿ: ಅಶೋಕ್ ರೈ
ಭೀಮಣ್ಣ ನಾಯ್ಕ ಅವರು, ಬಂಡಲ ಮತ್ತು ಮಂಜುಗುಣಿ ಗ್ರಾಮ ಪಂಚಾಯತಿ ವ್ಯಾಪ್ತಿಯ ತೋಟದಗದ್ದೆ, ಮಲ್ಲಳ್ಳಿ, ಮುಂಡಗಾರ, ಕುಪ್ಪಳ್ಳಿ, ತೆಪ್ಪಾರ, ಹೊಸ್ಕೆರೆ, ಕಳಕಾರ, ಬಡಗಿ, ಐಗಿನಮನೆ, ಖೂರ್ಸೆ , ಮಂಜುಗುಣಿ, ಕಳುಗಾರ, ಸವಲೆ, ಬೈಲ್ ಗದ್ದೆ ಭಾಗದಲ್ಲಿ ಜನರ ಜೊತೆ ಸಂಪರ್ಕ ಮಾಡಿ ಮತ ಯಾಚನೆ ಮಾಡಿದರು.
ಈ ವೇಳೆ ಬ್ಲಾಕ್ ಅಧ್ಯಕ್ಷ ಜಗದೀಶ ಗೌಡ, ಮುಖಂಡರಾದ ಪ್ರವೀಣ ಗೌಡ, ದೇವರಾಜ ಮರಾಠಿ, ಜ್ಯೋತಿ ಪಾಟೀಲ, ನಾಗರಾಜ ಮುರ್ಡೇಶ್ವರ, ನಾರಾಯಣ ನಾಯ್ಕ್ ಸೇರಿದಂತೆ ಇತರ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಶಿರಸಿ ಸಿದ್ದಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಪರವಾದ ಅಲೆ ಇನ್ನಷ್ಟು ಶಕ್ತಿ ತುಂಬುತ್ತಿದೆ. ಜನರ ನೋವಿಗೆ ಕಾಂಗ್ರೆಸ್ ಮಾತ್ರ ಭರವಸೆಯ ಶಕ್ತಿ ಎಂದು ಮತದಾರರೇ ಹೇಳುತ್ತಿದ್ದಾರೆ.
-ಭೀಮಣ್ಣ ನಾಯ್ಕ, ಕಾಂಗ್ರೆಸ್ ಅಭ್ಯರ್ಥಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ
Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ
ಶಿರೂರುಗುಡ್ಡ ಕುಸಿತ ಸ್ಥಳ ತಲುಪಿದ ಡ್ರೆಜ್ಜಿಂಗ್ ಯಂತ್ರ-3 ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ!
Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.