ಬುದ್ಧನ ಚಿಂತನೆಗಳಿಂದ ಜಾಗತಿಕ ಸಮಸ್ಯೆಗಳಿಗೆ ಪರಿಹಾರ: PM ನರೇಂದ್ರ ಮೋದಿ
Team Udayavani, Apr 21, 2023, 7:44 AM IST
ನವದೆಹಲಿ: ಇಡೀ ಜಗತ್ತು ಯುದ್ಧ, ಆರ್ಥಿಕ ಅಸ್ಥಿರತೆ, ಭಯೋತ್ಪಾದನೆ, ಮತೀಯ ತೀವ್ರವಾದ, ಹವಾಮಾನ ವೈಪರೀತ್ಯಕ್ಕೆ ಸಿಲುಕಿ ತೊಳಲಾಡುತ್ತಿದೆ. ಈ ಸಮಸ್ಯೆಗಳಿಗೆಲ್ಲ ಭಗವಾನ್ ಬುದ್ಧನ ಚಿಂತನೆಗಳಿಂದ ಪರಿಹಾರ ಸಾಧ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಅವರು ನವದೆಹಲಿಯಲ್ಲಿ ಗುರುವಾರ ಆರಂಭವಾಗ ಜಾಗತಿಕ ಬೌದ್ಧ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು. ಜಗತ್ತಿನ ಶ್ರೀಮಂತ ರಾಷ್ಟ್ರಗಳ ಯೋಚನಾಕ್ರಮವನ್ನೂ ಟೀಕಿಸಿದ ಅವರು, ಜಾಗತಿಕ ಹವಾಮಾನ ವೈಪರೀತ್ಯಕ್ಕೆ ಜಗತ್ತಿನ ಕೆಲವು ರಾಷ್ಟ್ರಗಳು ಕಾರಣ. ಅವು ಇತರರ ಬಗ್ಗೆ, ಭವಿಷ್ಯದ ಪೀಳಿಗೆಗಳ ಬಗ್ಗೆ ಯೋಚಿಸಲಿಲ್ಲ. ದಶಕಗಳ ಕಾಲ ಪ್ರಕೃತಿಯ ಮೇಲೆ ದಾಳಿ ಮಾಡುತ್ತಲೇ ಹೋದರು. ಇದರಿಂದ ತಮಗೇನು ಸಮಸ್ಯೆಯಿಲ್ಲ ಎಂದು ಭಾವಿಸಿ, ಪರಿಣಾಮವನ್ನು ಇತರರ ಮೇಲೆ ಹೇರುತ್ತಲೇ ಹೋದರು. ಒಂದು ವೇಳೆ ಬುದ್ಧನ ಚಿಂತನೆಗಳನ್ನು ಅಳವಡಿಸಿಕೊಂಡಿದ್ದರೆ ಜಗತ್ತು ಈ ಸ್ಥಿತಿಯಲ್ಲಿರುತ್ತಿಲ್ಲ ಎಂದು ಮೋದಿ ಹೇಳಿದರು.
ಬುದ್ಧನ ಚಿಂತನೆಗಳ ಬೆಳಕಿನಲ್ಲಿ ತಮ್ಮ ಮತ್ತು ಜಗತ್ತಿನ ಹಿತವನ್ನು ಸಾಧಿಸಲು ಎಲ್ಲ ದೇಶಗಳು ಚಿಂತಿಸಬೇಕಿರುವುದೇ ಈಗಿನ ಆದ್ಯತೆ. ಬುದ್ಧನ ಚಿಂತನೆಗಳಿಂದ ಪ್ರಭಾವಿತಗೊಂಡೇ ಭಾರತ ಜಾಗತಿಕ ಕಲ್ಯಾಣಕ್ಕೆ ಆದ್ಯತೆ ಕೊಡುತ್ತಿದೆ. ಇತ್ತೀಚೆಗೆ ಭೂಕಂಪಪೀಡಿತವಾದ ಟರ್ಕಿಗೆ ಭಾರತ ನೆರವಿನ ಹಸ್ತ ಚಾಚಿದ್ದೇ ಈ ಕಾರಣದಿಂದ ಎಂದು ಪ್ರಧಾನಿ ಮೋದಿ ಪ್ರತಿಪಾದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ
Punjab; ಆಮ್ ಆದ್ಮಿ ನಾಯಕನಿಗೆ ಗುಂಡೇಟು ಹೊಡೆದ ಅಕಾಲಿ ದಳ ಮುಖಂಡ
Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು
Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Varun Tej; ನ.14ಕ್ಕೆ ‘ಮಟ್ಕಾ’ ತೆರೆಗೆ
Sandalwood: ಎಚ್ಚರಗೊಂಡ ನಿದ್ರಾದೇವಿ; ಶೂಟಿಂಗ್ ಮುಗಿಸಿ, ಪೋಸ್ಟ್ ಪ್ರೊಡಕ್ಷನ್ ನತ್ತ..
Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್ ಸ್ಪೋರ್ಟ್ಸ್ ಮತ್ತೆ ಆರಂಭ
Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ
Alzheimer’s disease: ಅಲ್ಜೀಮರ್ – ಮರೆಗುಳಿ ಕಾಯಿಲೆಯ ಬಗ್ಗೆ ತಿಳಿಯಿರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.