IPL 2023 ಚಿನ್ನಸ್ವಾಮಿಯಲ್ಲಿ ರಾಯಲ್ ಕದನ: ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್
Team Udayavani, Apr 23, 2023, 3:09 PM IST
ಬೆಂಗಳೂರು: ರಾಯಲ್ ಕದನಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಸಜ್ಜಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ ರಾಯಲ್ಸ್ ತಂಡಗಳು ಸಿದ್ದವಾಗಿದ್ದು, ಟಾಸ್ ಗೆದ್ದ ಸಂಜು ಸ್ಯಾಮ್ಸನ್ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿದ್ದಾರೆ.
ವಿಶೇಷವೆಂದರೆ ಇಂದಿನ ಪಂದ್ಯದಲ್ಲಿ ಆರ್ ಸಿಬಿ ಹಸಿರು ಬಣ್ಣದ ಜೆರ್ಸಿಯಲ್ಲಿ ಆಡಲಿದೆ. 2019ರ ಬಳಿಕ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಗ್ರೀನ್ ಜೆರ್ಸಿಯಲ್ಲಿ ಆಡುತ್ತಿದೆ.
‘ಗೋ ಗ್ರೀನ್’ ಅಭಿಯಾನವು ಮರಗಳನ್ನು ನೆಡುವ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಜಾಗತಿಕ ತಾಪಮಾನದ ಪರಿಣಾಮವನ್ನು ಕಡಿಮೆ ಮಾಡಲು ರೂಪಿಸಲಾಗಿದೆ. ಇದರ ಭಾಗವಾಗಿ ಟಾಸ್ ಸಮಯದಲ್ಲಿ ಆರ್ಸಿಬಿಯ ನಾಯಕ ವಿರಾಟ್ ಎದುರಾಳಿ ನಾಯಕ ಸಂಜು ಸ್ಯಾಮ್ಸನ್ ಗೆ ಸ್ಮರಣಿಕೆಯಾಗಿ ಸಸ್ಯವನ್ನು ಕೊಟ್ಟರು.
ಇದನ್ನೂ ಓದಿ:ಇಂದು ಸಮಾಜದಲ್ಲಿ ಸತ್ಯ ಹೇಳುವವರಿಗೆ ಭಯ ಹುಟ್ಟಿಸಲಾಗುತ್ತಿದೆ: ಬಸವನಾಡಿನಲ್ಲಿ ರಾಹುಲ್ ಗಾಂಧಿ
ಇಂದಿನ ಪಂದ್ಯದಲ್ಲೂ ವಿರಾಟ್ ಕೊಹ್ಲಿ ಅವರು ಆರ್ ಸಿಬಿ ತಂಡವನ್ನು ಮುನ್ನಡೆಸುತ್ತಿದ್ದಾರೆ. ಪಾರ್ನೆಲ್ ಬದಲಿಗೆ ಆರ್ ಸಿಬಿ ತಂಡದಲ್ಲಿ ಡೇವಿಡ್ ವಿಲ್ಲಿ ಸ್ಥಾನ ಪಡೆದಿದ್ದಾರೆ.
ರಾಜಸ್ಥಾನ್ ರಾಯಲ್ಸ್: ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾ/ವಿ.ಕೀ), ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ಧ್ರುವ್ ಜುರೆಲ್, ರವಿಚಂದ್ರನ್ ಅಶ್ವಿನ್, ಜೇಸನ್ ಹೋಲ್ಡರ್, ಟ್ರೆಂಟ್ ಬೌಲ್ಟ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಾಹಲ್
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ (ನಾ), ಫಾಫ್ ಡು ಪ್ಲೆಸಿಸ್, ಮಹಿಪಾಲ್ ಲೊಮ್ರೊರ್, ಗ್ಲೆನ್ ಮ್ಯಾಕ್ಸ್ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿ.ಕೀ), ಸುಯಶ್ ಪ್ರಭುದೇಸಾಯಿ, ಡೇವಿಡ್ ವಿಲ್ಲಿ, ವನಿಂದು ಹಸರಂಗ, ಮೊಹಮ್ಮದ್ ಸಿರಾಜ್, ವಿಜಯಕುಮಾರ್ ವೈಶಾಕ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್
IPL 2025: ಮತ್ತೆ ರಾಹುಲ್ ದ್ರಾವಿಡ್ ಜತೆ ಸೇರಿದ ವಿಕ್ರಮ್ ರಾಥೋರ್
INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್ ಗೆ ಆಲೌಟ್
INDvsBAN: ಟೆಸ್ಟ್ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ
Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.