ಇಂದು ಡಾ.ರಾಜ್‌ ಹುಟ್ಟುಹಬ್ಬ: ವರನಟನ ನೆನಪಲ್ಲಿ ಅಭಿಮಾನಿಗಳು


Team Udayavani, Apr 24, 2023, 8:22 AM IST

ಇಂದು ಡಾ.ರಾಜ್‌ ಹುಟ್ಟುಹಬ್ಬ: ವರನಟನ ನೆನಪಲ್ಲಿ ಅಭಿಮಾನಿಗಳು

ಅಭಿಮಾನಿಗಳ ಆರಾಧ್ಯ ದೈವ, ವರನಟ ಡಾ.ರಾಜ್‌ಕುಮಾರ್‌ ದೈಹಿಕವಾಗಿ ನಮ್ಮೊಂದಿಗಿರುತ್ತಿದ್ದರೆ ಇಂದು (ಏಪ್ರಿಲ್‌ 24) ಅವರು 95ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದರು. ಆದರೆ, ಅಭಿಮಾನಿಗಳ ಹೃದಯ ಸಿಂಹಾಸನದಲ್ಲಿ ಭದ್ರವಾಗಿ ವಿರಾಜಮಾನವಾಗಿರುವ ರಾಜ್‌ಕುಮಾರ್‌ ಅವರ ಹುಟ್ಟುಹಬ್ಬವನ್ನು ಪ್ರತಿ ವರ್ಷ ಅದ್ಧೂರಿಯಾಗಿ ಆಚರಿಸಿಕೊಳ್ಳುತ್ತಾ ಬಂದಿದ್ದಾರೆ. ಈ ಬಾರಿಯೂ 95ನೇ ಹುಟ್ಟುಹಬ್ಬವನ್ನು ಹಲವು ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಆಚರಿಸಿಕೊಳ್ಳಲು ನಿರ್ಧರಿಸಿದ್ದಾರೆ. ಅವರ ಕುಟುಂಬ ವರ್ಗ ಕಂಠೀರವ ಸ್ಟುಡಿಯೋದಲ್ಲಿರುವ ರಾಜ್‌ ಸಮಾಧಿಗೆ ತೆರಳಿ ಪೂಜೆ ಸಲ್ಲಿಸಲಿದೆ. ಜೊತೆಗೆ ಸಾಕಷ್ಟು ಸಂಖ್ಯೆಯ ಅಭಿಮಾನಿ ಗಳು ಕೂಡಾ ಅಣ್ಣಾವ್ರ ಹುಟ್ಟುಹಬ್ಬ ಆಚರಿಸಲಿದ್ದಾರೆ. ಜೊತೆಗೆ ನೇತ್ರದಾನ, ರಕ್ತದಾನದಂತಹ ಸಾಮಾಜಿಕ ಕಾರ್ಯಗಳು ಕೂಡಾ ನಡೆಯಲಿದೆ.

ಅಭಿಮಾನಿಗಳ ಈ ಪ್ರೀತಿಗೆ ಕಾರಣ ಅಣ್ಣಾವ್ರ ವ್ಯಕ್ತಿತ್ವ. ಅಣ್ಣಾವ್ರು ಸೂಪರ್‌ಸ್ಟಾರ್‌ ಅಷ್ಟೇ ಆಗಿರಲಿಲ್ಲ. ಆಳಾಗಬಲ್ಲವನೇ ಅರಸಾಗುವ ಎಂಬುದು ಅವರಿಗೆ ಚೆನ್ನಾಗಿ ಗೊತ್ತಿತ್ತು. ಈ ಕಾಲದ ಸಂಪರ್ಕಸಾಧನಗಳು ಯಾವುವೂ ಇಲ್ಲದ ಕಾಲದಲ್ಲಿ ಅವರು ನಾಡಿನಾದ್ಯಂತ ಜನಪ್ರಿಯರಾಗಿದ್ದರು. ಒಬ್ಬ ನಟ ಎಲ್ಲರಿಗೂ ಹತ್ತಿರವಾಗುವುದು ಸ್ಟಾರ್‌ಗಿರಿಯಿಂದಲೋ ಪ್ರಚಾರದಿಂದಲೋ ಅಲ್ಲ. ಅಣ್ಣಾವ್ರಿಗೆ ಇದ್ದ ಜನಪ್ರೀತಿ ಮತ್ತು ಸಜ್ಜನಿಕೆಯಿಂದ.

ಕನ್ನಡ ನೆಲ, ಜಲ, ಭಾಷೆ, ಸಂಸ್ಕೃತಿಯ ಉಳಿವಿಗಾಗಿ ಬೇರೆ ಬೇರೆ ಕ್ಷೇತ್ರದ ಸಾಕಷ್ಟು ಮಹನೀಯರು ಕೊಡುಗೆ ನೀಡಿದ್ದಾರೆ. ಅದರ ಪರಿಣಾಮವಾಗಿಯೇ ನಮ್ಮ ಕನ್ನಡ ಭಾಷೆ ಮತ್ತು ಕರ್ನಾಟಕ ಸಾಂಸ್ಕೃತಿಕ ವೈಭವ ತನ್ನ ವೈಶಿಷ್ಟéಗಳೊಂದಿಗೆ ಜಗತ್ತಿನಾದ್ಯಂತ ತನ್ನದೇ ಆದ ಸ್ಥಾನ ಪಡೆದುಕೊಂಡಿದೆ. ಕನ್ನಡ ಚಿತ್ರರಂಗದ ವಿಷಯಕ್ಕೆ ಬರುವುದಾದರೆ, ಕನ್ನಡ ನಾಡು, ನುಡಿ, ನೆಲ-ಜಲ, ಹೋರಾಟ ಎಂದಾಗ ಮೊದಲು ನೆನಪಾಗುವ ಹೆಸರು ವರನಟ ಡಾ.ರಾಜ್‌ಕುಮಾರ್‌.

ಕನ್ನಡ ಚಿತ್ರರಂಗಕ್ಕೆ ಅಣ್ಣಾವ್ರು ಹಾಕಿಕೊಟ್ಟ ಭದ್ರಬುನಾದಿ ಆಳವಾಗಿ ಬೇರೂರಿದೆ. ಕೇವಲ ಒಬ್ಬ ನಟರಾಗಿ ಉಳಿಯದೇ ಕನ್ನಡ ಭಾಷೆ ಮತ್ತು ಕರ್ನಾಟಕವನ್ನು ಕಟ್ಟುವಲ್ಲಿ, ಸಧೃಡವನ್ನಾಗಿಸುವಲ್ಲಿ, ಜನರ ಮನದಲ್ಲಿ ಕನ್ನಡ ಮೇಲಿನ ಪ್ರೀತಿ ಹೆಚ್ಚಿಸುವಲ್ಲಿ ರಾಜ್‌ಕುಮಾರ್‌ ಅವರ ಪಾತ್ರ ಅಪಾರವಾದದ್ದು. ಅದು ಅವರ ವ್ಯಕ್ತಿತ್ವದಿಂದ ಹಿಡಿದು ಮಾಡಿದ ಪ್ರತಿ ಸಿನಿಮಾಗಳ, ಹಾಡಿದ ಕನ್ನಡ ಹಾಡುಗಳ ಹಾಗೂ ಕನ್ನಡಪರ ಹೋರಾಟಗಳ ಮೂಲಕ ಕನ್ನಡತನವನ್ನು ಬಿತ್ತುತ್ತಲೇ ಬಂದವರು ರಾಜಕುಮಾರ್‌. ಕನ್ನಡ ಚಿತ್ರರಂಗವನ್ನು ಕಟ್ಟುವಲ್ಲಿ ಅವರ ಪಾತ್ರ ಪ್ರಮುಖವಾದದ್ದು ಅಂದರೆ ತಪ್ಪಿಲ್ಲ. ಅಂದು ಡಾ.ರಾಜಕುಮಾರ್‌ ಅವರು ಹಾಕಿಕೊಟ್ಟ ಭದ್ರ ಬುನಾದಿಯ ಮೇಲೆ ಇಂದು ಕನ್ನಡ ಚಿತ್ರರಂಗ ಸಾಗುತ್ತಿದೆ ಮತ್ತು ಪ್ರಕಾಶಿಸುತ್ತಿದೆ. ಚಿತ್ರರಂಗದ ಶೈಲಿ, ತಂತ್ರಜ್ಞಾನ ಬದಲಾಗಿರಬಹುದು, ಹೊಸ ಕಥೆಗಳು ಬರುತ್ತಿರಬಹುದು. ಆದರೆ ಡಾ.ರಾಜ್‌ಕುಮಾರ್‌ ವ್ಯಕ್ತಿತ್ವ ಮಾತ್ರ ಇಂದಿಗೂ ಮಾದರಿ. ಅವರ ಛಾಪು ಎಂದಿಗೂ ಹಸಿರು.

ಡಾ.ರಾಜ್‌ಕುಮಾರ್‌ ಕೇವಲ ಕನ್ನಡ ಚಿತ್ರರಂಗಕ್ಕೆ ಸೀಮಿತವಾಗಲಿಲ್ಲ ಎಂಬುದು ಮತ್ತೂಂದು ವಿಶೇಷ. ಕನ್ನಡಿಗರಾಗಿ, ಕನ್ನಡ ಪ್ರೇಮವನ್ನು ಎಲ್ಲೆಡೆ ಬಿತ್ತಿದ ರಾಜಕುಮಾರ್‌, ಕನ್ನಡ ಚಿತ್ರಗಳಲ್ಲಿ ನಟಿಸುವುದಷ್ಟೇ ಅವರ ಕೆಲಸವಾಗಿರಲಿಲ್ಲ. ಕನ್ನಡ ಚಿತ್ರರಂಗದಲ್ಲಿ ತಾನೊಬ್ಬ ನಟರಾಗಿ ಹೊರಹೊಮ್ಮಲು ಕನ್ನಡಿಗರು ಕಾರಣ ಎಂಬುದನ್ನು ಎಲ್ಲಾ ವೇದಿಕೆಗಳಲ್ಲೂ ಹೇಳುತ್ತಿದ್ದ ರಾಜಕುಮಾರ್‌, ಕನ್ನಡ ಭಾಷೆ, ನೆಲ, ಜಲ ಮತ್ತು ಸಂಸ್ಕೃತಿಗೆ ಧಕ್ಕೆ ಬಂದಾಗ, ಅಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಹೋರಾಟಕ್ಕೂ ಹಿಂದೆ ಮುಂದೆ ನೋಡುತ್ತಿರಲಿಲ್ಲ. ಹಾಗೆ ದೊಡ್ಡ ಮಟ್ಟದ ಚಳವಳಿಗೆ ಕಾರಣವಾಗಿದ್ದು ಗೋಕಾಕ್‌ ಚಳವಳಿ.

ಹೌದು, ಗೋಕಾಕ್‌ ವರದಿಯು ಕನ್ನಡವನ್ನು ಪ್ರಾಥಮಿಕ ಶಿಕ್ಷಣದಲ್ಲಿ ಕಡ್ಡಾಯವಾಗಿ ಅಳವಡಿಸಿಕೊಳ್ಳುವುದು ಹಾಗೂ ಇನ್ನಿತರ ಮೂಲಭೂತ ಸೌಲಭ್ಯಗಳನ್ನು ಕನ್ನಡ ಭಾಷೆಗೆ ಕೊಡುವುದರ ಬಗ್ಗೆ ಸಿದ್ಧವಾಗಿತ್ತು. ಆದರೆ, ಈ ವರದಿಯು ಜಾರಿಗೆ ಬಂದಿರಲಿಲ್ಲ. 1981ರಲ್ಲಿ ಅನೇಕ ಸಾಹಿತಿಗಳು, ಕನ್ನಡಪರ ಹೋರಾಟಗಾರರು, ಕನ್ನಡದ ಹಲವು ಸಂಘಟನೆಗಳು ಗೋಕಾಕ್‌ ವರದಿ ಜಾರಿಗೊಳಿಸುವಂತೆ ಚಳವಳಿ ಆರಂಭಿಸಿದ್ದವು. ಕಾಲ ಕ್ರಮೇಣ ಆ ಚಳವಳಿ ಗೋಕಾಕ್‌ ಚಳವಳಿ ಎಂದೇ ಹೆಸರಾಯಿತು. ಚಳವಳಿ ಶುರುವಾಗಿ ತಿಂಗಳು ಕಳೆದರೂ ಅಷ್ಟಾಗಿ ಉತ್ಸಾಹ ಕಂಡು ಬರಲಿಲ್ಲ. ಆ ಸಮಯದಲ್ಲಿ ಡಾ.ರಾಜ್‌ ಕುಮಾರ್‌ ಅವರನ್ನು ಚಳವಳಿಗೆ ಆಹ್ವಾನಿಸಿ, ಚಳವಳಿಯನ್ನು ಇನ್ನಷ್ಟು ಚುರುಕುಗೊಳಿಸಬೇಕೆಂಬ ತೀರ್ಮಾನ ಮಾಡಿದ ಸಾಹಿತಿಗಳು, ಕನ್ನಡ ಪರ ಹೋರಾಟಗಾರರು, ಡಾ. ರಾಜಕುಮಾರ್‌ ಅವರ ನೇತೃತ್ವದಲ್ಲಿ ಕನ್ನಡ ಚಿತ್ರರಂಗದ ಸಹಕಾರದಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡರು. ರಾಜ್ಯದೆಲ್ಲೆಡೆ ಸಭೆ, ಭಾಷಣ ನಡೆದವು. ಕನ್ನಡಿಗರೆಲ್ಲರೂ ರಾಜಕುಮಾರ್‌ ನೇತೃತ್ವದಲ್ಲಿ ಭಾಗಿಯಾದರು. ಕನ್ನಡ ಭಾಷೆಗೆ ಸಿಗಬೇಕಾದ ಮಾನ್ಯತೆ ಬಗ್ಗೆ ಆಗಿನ ಸರ್ಕಾರಕ್ಕೆ ಮನದಟ್ಟಾಯಿತು. ಡಾ.ರಾಜಕುಮಾರ್‌ ಅವರ ನೇತೃತ್ವದ ಚಳವಳಿಯ ತೀವ್ರತೆಗೆ ಸ್ಪಂದಿಸಿದ ಸರ್ಕಾರ, ಗೋಕಾಕ್‌ ವರದಿಯನ್ನು ಜಾರಿಗೊಳಿಸಿತು. ಈ ಮೂಲಕ ರಾಜ್‌, ಕನ್ನಡ ನೆಲದ ದೊಡ್ಡ ಹೋರಾಟಕ್ಕೆ ಸಾಕ್ಷಿಯಾದರು

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.