ಗನ್ ಮ್ಯಾನ್ ಭದ್ರತೆ ವಾಪಸ್: ಆತಂಕ ವ್ಯಕ್ತಪಡಿಸಿದ ರಹೀಂ ಉಚ್ಚಿಲ್
ತಾಯಿ ಜತೆ ಮಾಧ್ಯಮದ ಮುಂದೆ ಬಂದ ಬ್ಯಾರಿ ಅಕಾಡೆಮಿ ಮಾಜಿ ಅಧ್ಯಕ್ಷ
Team Udayavani, Apr 24, 2023, 1:27 PM IST
ಮಂಗಳೂರು: ಹನ್ನೊಂದು ವರ್ಷಗಳಿಂದ ನನಗೆ ಇದ್ದ ಗನ್ ಮ್ಯಾನ್ ಭದ್ರತೆಯನ್ನು ಚುನಾವಣೆ ಘೋಷಣೆಯಾದ ದಿನದಿಂದ ವಾಪಸ್ ಪಡೆಯಲಾಗಿದ್ದು ಇದರಿಂದ ಭಯ ಉಂಟಾಗಿದೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ರಹೀಂ ಉಚ್ಚಿಲ್ ಹೇಳಿದ್ದಾರೆ.
ಸೋಮವಾರ ತಾಯಿ ಜತೆ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, 2012 ರಲ್ಲಿ ಅಕಾಡೆಮಿ ಅಧ್ಯಕ್ಷನಾಗಿದ್ದಾಗ ಏಳು ಮಂದಿಯ ತಂಡ ಕಚೇರಿಗೆ ನುಗ್ಗಿ ಯದ್ವಾತದ್ವಾ ಕೊಚ್ಚಿ ಕೊಲೆಯತ್ನ ನಡೆಸಿತ್ತು. ಅದರಲ್ಲಿ ಇಬ್ಬರು ಆರೋಪಿಗಳ ಆರೋಪ ಸಾಬೀತಾಗಿ ನ್ಯಾಯಾಲಯ ನಾಲ್ಕೂವರೆ ವರ್ಷ ಸಜೆ ವಿಧಿಸಿದೆ. ಆರೋಪಿಗಳು ಇದರ ವಿರುದ್ದ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅಲ್ಲಿ ತೀರ್ಪು ಬರುವ ಮೊದಲೇ ಗನ್ ಮ್ಯಾನ್ ಭದ್ರತೆ ವಾಪಸ್ ಪಡೆದುಕೊಳ್ಳಲಾಗಿದೆ.
ನನಗೆ ಬಂದಿರುವ ಬೆದರಿಕೆ ಕರೆಗಳ ಪೈಕಿ ಗಂಭೀರವಾದ ಬೆದರಿಕೆ ಬಗ್ಗೆ 30 ಕ್ಕಿಂತಲೂ ಅಧಿಕ ದೂರುಗಳು ಮಂಗಳೂರು ದಕ್ಷಿಣ ಠಾಣೆ, ಹುಬ್ಬಳ್ಳಿ ಮೊದಲಾದೆಡೆ ದಾಖಲಾಗಿದೆ. ಆದರೂ ಗನ್ ಮ್ಯಾನ್ ವಾಪಸ್ ಪಡೆದಿರುವುದು ಆಶ್ಷರ್ಯವನ್ನುಂಟು ಮಾಡಿದೆ. ದುಷ್ಕರ್ಮಿಗಳ ಭಯದಿಂದ ತಾಯಿಯೊಂದಿಗೆ ಓಡಾಡುತ್ತಿದ್ದೇನೆ ಎಂದವರು ಹೇಳಿದ್ದಾರೆ.
ಇದನ್ನೂ ಓದಿ:Viral: ಮದ್ಯ ಕುಡಿಯಲು ಹಣ ನೀಡದ ತಂದೆ; ಸಿಟ್ಟಾಗಿ ಹೈಟೆನ್ಷನ್ ವಿದ್ಯುತ್ ಕಂಬವೇರಿದ ಮಗ.!
ನಾನು ಯಾವುದೇ ಧರ್ಮ, ಸಮುದಾಯದವರ ವಿರುದ್ದವಾಗಿ ನಡೆದುಕೊಂಡಿಲ್ಲ. ಕೆಲವರು ನನ್ನ ವಿಚಾರಗಳನ್ನು ತಪ್ಪಾಗಿ ತಿಳಿದುಕೊಂಡು ನನ್ನ ಹತ್ಯೆಗೆ ಯತ್ನಿಸುತ್ತಿದ್ದರೆ ಅವರ ಕ್ಷಮೆ ಕೋರುತ್ತೇನೆ. ತಾಯಿಗಾಗಿ ನಾನು ಬದುಕಬೇಕಾಗಿದೆ. ನಾನು ರಾಷ್ಟ್ರೀಯತೆಗೆ ಪೂರಕವಾದ ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದೇನೆಯೇ ಹೊರತು ಯಾರ ಮನ ನೋಯಿಸುವ ಕೆಲಸವನ್ನು ಮಾಡಿಲ್ಲ. ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ತೊರೆಯುವುದಿಲ್ಲ. ನನಗೆ ಎರಡು ಬಾರಿ ಬ್ಯಾರಿ ಅಕಾಡೆಮಿಯ ಅಧ್ಯಕ್ಷ ಸ್ಥಾನ ನೀಡಿದ ಬಿಜೆಪಿಗೆ ಸದಾ ಋಣಿಯಾಗಿದ್ದೇನೆ. ಬೇರೆ ರಾಜಕೀಯ ಪಕ್ಷ ಸೇರುವುದಿಲ್ಲ. ನನಗೆ ಗನ್ ಮ್ಯಾನ್ ಭದ್ರತೆ ಮುಂದುವರೆಸುವಂತೆ ಡಿಸಿಪಿಯವರಿಗೆ ಮನವಿ ಮಾಡಿದ್ದೇನೆ. ಆದರೂ ಪ್ರಯೋಜನವಾಗಿಲ್ಲ. ನನ್ನ ಜೀವಕ್ಕೆ ಅಪಾಯ ಸಂಭವಿಸಿದರೆ ಯಾರೂ ಕಾರಣರಲ್ಲ, ನನ್ನ ಆಯುಷ್ಯವೇ ಕಾರಣವಾಗಿರುತ್ತದೆ ಎಂದು ರಹೀಂ ಉಚ್ಚಿಲ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಸೈಬರ್ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ
Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ
Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?
Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ
Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.