Congress ಬಂಡಾಯ: ಉಡುಪಿಯಲ್ಲಿ ನಾಮಪತ್ರ ಹಿಂಪಡೆದುಕೊಂಡ ಕೆ.ಕೃಷ್ಣಮೂರ್ತಿ ಆಚಾರ್ಯ
Team Udayavani, Apr 24, 2023, 5:14 PM IST
ಉಡುಪಿ: ಉಡುಪಿ ಜಿಲ್ಲೆೆಯ 5 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 7 ನಾಮಪತ್ರಗಳನ್ನು ಸೋಮವಾರ ಹಿಂಪಡೆಯಲಾಗಿದೆ.
ವಿಧಾನಸಭೆ ಚುನಾವಣೆಗೆ ಉಡುಪಿ ಕ್ಷೇತ್ರದಿಂದ ಕಾಂಗ್ರೆಸ್ ನಿಂದ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದ ಕೆ.ಕೃಷ್ಣಮೂರ್ತಿ ಆಚಾರ್ಯ ನಾಮಪತ್ರವನ್ನು ಹಿಂದಕ್ಕೆ ತೆಗದುಕೊಂಡಿದ್ದಾರೆ.
ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಅಭ್ಯರ್ಥಿಗಳು ನಾಮಪತ್ರ ಹಿಂದಕ್ಕೆ ತೆಗೆದುಕೊಳ್ಳಲು ಸೋಮವಾರ ( ಎ.24 ರಂದು) ಕೊನೆಯ ದಿನವಾಗಿತ್ತು. ಉಡುಪಿಯಿಂದ ಕಾಂಗ್ರೆಸ್ ನಿಂದ ಟಿಕೆಟ್ ಗೆ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಕೆ.ಕೃಷ್ಣಮೂರ್ತಿ ಆಚಾರ್ಯ ಅವರಿಗೆ ಟಿಕೆಟ್ ಕೈತಪ್ಪಿತ್ತು. ಇದರಿಂದ ಸಹಜವಾಗಿ ಅಸಮಾಧನಾಗೊಂಡಿದ್ದ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದರು.
ಕಾರ್ಯಕರ್ತರ ಜೊತೆ ಚರ್ಚಿಸಿ ನಿರ್ಧಾರ ಕೈಗೊಂಡಿದ್ದ ಅವರು ತಮ್ಮ ಬೆಂಬಲಿಗರೊಂದಿಗೆ ನಾಮಪತ್ರವನ್ನು ಸಲ್ಲಿಸಿದ್ದರು. ಇದೀಗ ನಾಮಪತ್ರವನ್ನು ಹಿಂದಕ್ಕೆ ತೆಗೆದುಕೊಂಡಿದ್ದಾರೆ.
ಉಡುಪಿಯಿಂದ ಕಾಂಗ್ರೆಸ್ ಪಕ್ಷದಿಂದ ಪ್ರಸಾದ್ ರಾಜ್ ಕಾಂಚನ್ ಅವರು ಸ್ಪರ್ಧಿಸುತ್ತಿದ್ದಾರೆ.
ಉಡುಪಿ ಜಿಲ್ಲೆೆ: 7 ನಾಮಪತ್ರ ಹಿಂತೆಗೆತ: ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 7 ನಾಮಪತ್ರಗಳನ್ನು ಸೋಮವಾರ ಹಿಂಪಡೆಯಲಾಗಿದೆ.
ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಜಯರಾಜ, ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ದೀನ ಪ್ರಭಾಕರ ಸಾಲ್ಯಾನ್, ಕೆ.ಕೃಷ್ಣಮೂರ್ತಿ ಆಚಾರ್ಯ, ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಬ್ದುಲ್ ರಝಕ್ ಶಾಬನ್ ಅಹ್ಮದ್, ಅಬ್ದುಲ್ ರಹಿಮಾನ್, ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಕೃಷ್ಣ ಶೆಟ್ಟಿ, ಕೆ.ಹರೀಶ್ ಅಧಿಕಾರಿ ನಾಮಪತ್ರ ಹಿಂತೆಗೆದುಕೊಂಡಿದ್ದಾರೆ. ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಯಾರೂ ನಾಮಪತ್ರ ಹಿಂಪಡೆಯಲಿಲ್ಲ. ನಾಮಪತ್ರ ಹಿಂಪಡೆಯಲು ಎ.24 ಕೊನೆಯ ದಿನವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.