ಮಂಗಳೂರು: ರೈಲಿನ ಶೌಚಾಲಯದಲ್ಲೇ 24 ಗಂಟೆ ಮೃತದೇಹ ಬಾಕಿ!


Team Udayavani, Apr 25, 2023, 7:20 AM IST

ಮಂಗಳೂರು: ರೈಲಿನ ಶೌಚಾಲಯದಲ್ಲೇ 24 ಗಂಟೆ ಮೃತದೇಹ ಬಾಕಿ!

ಮಂಗಳೂರು: ಮುಂಬಯಿ- ಮಂಗಳೂರು ರೈಲಿನಲ್ಲಿ ಊರಿಗೆ ಮರಳುತ್ತಿದ್ದ ವ್ಯಕ್ತಿ ರೈಲಿನ ಶೌಚಾಲಯದಲ್ಲೇ ಮೃತಪಟ್ಟು ರೈಲಿನ ಸಿಬಂದಿಯ ಗಮನಕ್ಕೇ ಬಾರದೆ ಮೃತದೇಹವು ಮತ್ತೆ ಅದೇ ರೈಲಿನಲ್ಲಿ ಮುಂಬಯಿಗೆ ಹೋದ ಹೃದಯ ಕಲಕುವ ವಿದ್ಯಮಾನ ಘಟಿಸಿದೆ.

ಇಲ್ಲಿನ ಕಿನ್ನಿಗೋಳಿಯ ಮೆನ್ನ ಬೆಟ್ಟಿ ನವರಾದ ಮೋಹನ್‌ ಬಂಗೇರ (56) ಅವರು ಮುಂಬಯಿಯಿಂದ ಊರಿಗೆ ಮರಳುವ ವೇಳೆಗೆ ಹೃದ ಯಾಘಾತದಿಂದ ಮೃತಪಟ್ಟಿದ್ದು ವಿಷಯ ಗೊತ್ತಾಗದೆ ಅವರ ಕುಟುಂಬಿಕರು ಮುಂಬಯಿ ವರೆಗೂ ಹುಡುಕಾಡಿದ್ದಾರೆ. ಆದರೆ ಅವರಿದ್ದ ಬೋಗಿಯ ಶೌಚಾಲಯ ಸಹಿತ ತಪಾಸಣೆ  ಮಾಡಬೇಕಿದ್ದ ರೈಲು ಸಿಬಂದಿ ಕರ್ತವ್ಯಲೋಪ ಮಾಡಿದ್ದಲ್ಲದೆ ತಾವು ತಪಾಸಣೆ ಮಾಡಿದ್ದಾಗಿ ವರದಿ ಕೊಟ್ಟಿ ರುವುದು ನೋವು ತಂದಿದೆ.

ಕೊಳೆತ ಶರೀರ
ಮೃತದೇಹವನ್ನು ರೈಲಿನಲ್ಲೇ ಮತ್ತೆ ಹಿಂದೆ ಕಳುಹಿಸಲು, ಮರಣೋತ್ತರ ಪರೀಕ್ಷೆಗೆ 10 ಸಾವಿರ ರೂ.ಗಳನ್ನು ಪಾವತಿಸಿದ್ದು ಏಜೆನ್ಸಿಯೊಂದು ಪ್ಯಾಕ್‌ ಮಾಡಿ ಕಳಿಸಿದೆ. ಆದರೆ ಪಾರ್ಸೆಲ್‌ ಇಲ್ಲಿಗೆ ಬರುವಾಗ ದೇಹ ಪೂರ್ಣ ಕೊಳೆತು ದುರ್ವಾಸನೆ ಬೀರುತ್ತಿತ್ತು.

ಎಸಿ ಬೋಗಿಯಲ್ಲಿ ಸಂಚರಿಸು ವವ ರಿಗೇ ಇಂತಹ ದುಃಸ್ಥಿತಿಯಾದರೆ ಹೇಗೆ? ಇಂತಹ ಸ್ಥಿತಿ ಯಾರಿಗೂ ಬರದಿರಲಿ. ರೈಲು ಸಿಬಂದಿ ಇಷ್ಟು ನಿರ್ಲಕ್ಷé ವಹಿಸಿ ದ್ದರಿಂದ ಹೀಗಾಗಿದೆ. ಇದಕ್ಕಾಗಿ ಪರಿ ಹಾರಕ್ಕೂ ಆಗ್ರಹಿಸಿ ದೂರು ಸಲ್ಲಿಸಿದ್ದೇವೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಮೋಹನ್‌ ಬಂಗೇರ ಹಲವು ವರ್ಷ ಗಳಿಂದ ಮುಂಬಯಿನಲ್ಲಿ ಮಿಲ್ಕ್ ಪಾರ್ಲರ್‌ ನಡೆಸುತ್ತಿದ್ದರು. ಪತ್ನಿ ಹಾಗೂ ಇಬ್ಬರು ಪುತ್ರರು ಕಿನ್ನಿಗೋಳಿಯ ಮನೆಯಲ್ಲಿದ್ದಾರೆ.

ಆಗಿದ್ದೇನು?
ಮುಂಬಯಿಯಿಂದ ಮೋಹನ್‌ ಬಂಗೇರ ಅವರು ಎ. 18ರ ಮುಂಬಯಿ ಸಿಎಸ್‌ಟಿ ಮಂಗಳೂರು ಜಂಕ್ಷನ್‌ ರೈಲಿನ ಬಿ-3 ಕೋಚ್‌ನಲ್ಲಿ ಪ್ರಯಾಣ ಆರಂಭಿಸಿದ್ದರು. ಅವರನ್ನು ಕರೆದೊಯ್ಯಲು ಸೋದರ ಹಾಗೂ ಇತರರು ಸುರತ್ಕಲ್‌ನಲ್ಲಿ ಕಾಯುತ್ತಿದ್ದರು. ಆಗ ಮೋಹನ್‌ ಬಂಗೇರ ಅವರು ರೈಲಿನಲ್ಲಿ ನಾಪತ್ತೆಯಾದ ವಿಚಾರ ಅವರಿಗೆ ರೈಲಿನ ಟಿಟಿಇ ಮೂಲಕ ಫೋನ್‌ನಲ್ಲಿ ಲಭಿಸಿತು. ಅವರ ಬ್ಯಾಗ್‌, ಪರ್ಸ್‌ ಮತ್ತು ಮೊಬೈಲ್‌ ಕುಳಿತಿದ್ದ ಜಾಗದಲ್ಲೇ ಇತ್ತು.

ಟಿಟಿಇಯಲ್ಲಿ ಈ ಕುರಿತು ಮಾತನಾಡಿದಾಗ, ಅವರು ಮೋಹನ್‌ ಬಂಗೇರರು ಕಂಕಾವಲಿ ಅಥವಾ ಮಡಗಾಂವ್‌ನಲ್ಲಿ ಇಳಿದು ಹೋದಂತಿದೆ, ಅಲ್ಲಿಯ ಸಿಸಿಟಿವಿ ಫೂಟೇಜ್‌ ನೋಡಿದರೆ ಗೊತ್ತಾಗಬಹುದು ಎಂದಿದ್ದರು. ಬಳಿಕ ಮೋಹನ್‌ ಕುಟುಂಬದವರು ಮಂಗಳೂರು ಜಂಕ್ಷನ್‌ಗೆ ತೆರಳಿ ಅಲ್ಲಿನ ಅಧಿಕಾರಿಗಳ ಸಲಹೆಯಂತೆ ರೈಲ್ವೇ ಪೊಲೀಸರಿಗೆ ನಾಪತ್ತೆ ದೂರು ನೀಡಿದ್ದರು.
ಈ ನಡುವೆ ಮುಂಬಯಿಯಲ್ಲಿರುವ ಸಂಬಂಧಿಕರೂ ಹಲವು ಸ್ಟೇಷನ್‌ಗಳಲ್ಲಿ ಸಿಸಿಟವಿ ದೃಶ್ಯಾವಳಿ ಪರಿಶೀಲನೆ ನಡೆಸಿದರೂ ಎಲ್ಲೂ ಪತ್ತೆಯಾಗಲಿಲ್ಲ. ಮರುದಿನ ಮೋಹನ್‌ ಅವರ ಅಣ್ಣ ರಾಮ ಬಂಗೇರ ಅವರಿಗೆ ಮುಂಬಯಿ ಸಿಎಸ್‌ಟಿ ಸ್ಟೇಷನ್‌ನಿಂದ ಟಿಟಿಇ ಕರೆ ಮಾಡಿದ್ದು ಮೃತದೇಹ ರೈಲಿನ ಟಾಯ್ಲೆಟ್‌ನಲ್ಲಿ ಪತ್ತೆಯಾಗಿರುವುದನ್ನು ತಿಳಿಸಿದ್ದ.

ತಮ್ಮನ ಮೃತದೇಹ ಮಂಗಳೂರಿಗೇ ರೈಲಿನ ಶೌಚಾಲಯದಲ್ಲೇ ಬಂದಿತ್ತು. ಆದರೆ ಸಿಬಂದಿ ಸರಿಯಾಗಿ ಹುಡುಕಾಡದೆ ನಿರ್ಲಕ್ಷé ತೋರಿದ್ದರು. ಒಂದುವೇಳೆ ಅವರು ಜೀವಂತವಿದ್ದ ಸಣ್ಣ ಅವಕಾಶವಿದ್ದರೂ ಇಲ್ಲಿ ಬದುಕಿಸಬಹುದಿತ್ತು, ಆದರೆ ಟಾಯ್ಲೆಟ್‌ ತಪಾಸಣೆ ಮಾಡದೇ ಹೋದ ಕಾರಣ ಮೃತಶರೀರ ಹಾಗೇ ಅದೇ ರೈಲಿನಲ್ಲಿ ಮುಂಬಯಿಗೆ ಮರಳಿದೆ ಎನ್ನುತ್ತಾರೆ ರಾಮಬಂಗೇರ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.