ಸುಬ್ರಹ್ಮಣ್ಯ: ಹೆದ್ದಾರಿಯಲ್ಲಿ ಕಾಡಾನೆ; ಅಸ್ವಸ್ಥಗೊಂಡಿರುವ ಶಂಕೆ !
Team Udayavani, Apr 25, 2023, 6:44 AM IST
ಸುಬ್ರಹ್ಮಣ್ಯ: ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿ ಬದಿಯಲ್ಲಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಅದು ಅನಾರೋಗ್ಯಕ್ಕೀಡಾಗಿರುವ ಶಂಕೆ ವ್ಯಕ್ತವಾಗಿದೆ.
ರವಿವಾರ ಸಂಜೆಯಿಂದ ರಾತ್ರಿ ವರೆಗೆ ಬಿಳಿನೆಲೆ ಭಾಗದ ಚೇರು ಪರಿಸರದಲ್ಲಿ ಸಂಚರಿಸಿರುವ ಕಾಡಾನೆ ಸೋಮವಾರ ಬೆಳಗ್ಗೆ ಎರ್ಮಾಯಿಲ್ ಭಾಗದಲ್ಲಿ ಕಾಣಸಿಕ್ಕಿದೆ. ಅದರ ಎಡಗಾಲಿಗೆ ಬಲವಾದ ಗಾಯವಾದಂತೆ ಕಾಣಿಸುತ್ತಿದ್ದು, ತೀರಾ ಅಸ್ವಸ್ಥಗೊಂಡಿರುವಂತಿದೆ. ನಡೆದಾಡಲು ಕಷ್ಟಪಡುತ್ತಿದೆ. ತಿಂದ ಆಹಾರವನ್ನು ಜಗಿದು ಅಲ್ಲಲ್ಲೇ ಉಗುಳಿ ಹೋಗುತ್ತಿದೆ. ಅರಣ್ಯ ಇಲಾಖೆ ಗಮನ ಹರಿಸುವಂತೆ ಸ್ಥಳೀಯರು ತಿಳಿಸಿದ್ದಾರೆ.
ಈ ಬಗೆಗಿನ ಬರಹವೂ ವೈರಲ್ ಆಗಿದೆ. ಪ್ರತ್ಯಕ್ಷದರ್ಶಿಗಳು ಇದೇ ಮಾತನ್ನು ಹೇಳುತ್ತಿದ್ದಾರೆ. ಕಾಡಾನೆ ಹೆದ್ದಾರಿ ದಾಟುವ ವೀಡಿಯೋ ವೈರಲ್ ಆಗಿದ್ದು ಅದರಲ್ಲಿ ಅದು ನಿಧಾನವಾಗಿ ಸಂಚರಿಸುವುದು ಕಂಡುಬರುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.