ಚುನಾವಣೆ ಪರಿಣಾಮ: ಖಾಸಗಿ ಬಸ್‌ ಯಾನ ಬಲು ದುಬಾರಿ


Team Udayavani, Apr 25, 2023, 7:12 AM IST

Election Impact: Private bus travel is very expensive

ಮಂಗಳೂರು: ಮತದಾನ ಮಾಡಲೆಂದು ಊರಿಗೆ ತೆರಳಲು ಮನ ಮಾಡಿರುವ ದೂರದ ಊರಿನಲ್ಲಿರುವ ಮಂದಿಗೆ ಆಘಾತಕಾರಿ ಸುದ್ದಿಯೊಂದು ಕಾದಿದೆ. ಖಾಸಗಿ ಬಸ್‌ಗಳು ತಮ್ಮ ಹಳೇ ಚಾಳಿಯನ್ನು ಮುಂದುವರಿಸಿದ್ದು, ಪ್ರಯಾಣ ದರವನ್ನು ಮೂರುಪಟ್ಟು ಏರಿಕೆ ಮಾಡಿವೆ. ಸಾಮಾನ್ಯ ಪ್ರಯಾಣಿಕರು ಮತ ಚಲಾಯಿಸಲು ಹೆಚ್ಚಿನ ದರ ನೀಡಿ ತಮ್ಮ ಊರಿಗೆ ಬರುವ ಅನಿವಾರ್ಯ ಎದುರಾಗಿದೆ.

ಬೆಂಗಳೂರು, ಮೈಸೂರು ಸೇರಿದಂತೆ ಇನ್ನಿತರ ಪ್ರದೇಶದಲ್ಲಿರುವ ಮಂದಿ ಸಾಮಾನ್ಯವಾಗಿ ಚುನಾವಣೆಗೆಂದು ತಮ್ಮ ತಮ್ಮ ಊರಿಗೆ ಬರುತ್ತಾರೆ. ಅದರಲ್ಲಿಯೂ ಈ ಬಾರಿ ಚುನಾವಣೆ ದಿನದಿಂದ ಎರಡು ದಿನದಲ್ಲೇ ಎರಡನೇ ಶನಿವಾರ ಬಳಿಕ ರವಿವಾರ ರಜಾ ಇರುವ ಕಾರಣ ಈಗಾಗಲೇ ಯೋಜನೆಯನ್ನೂ ರೂಪಿಸಿರುತ್ತಾರೆ. ಇದನ್ನೇ ಬಂಡವಾಳವಾಗಿರಿಸಿಕೊಂಡ ಕೆಲ ಖಾಸಗಿ ಬಸ್‌ ಮಾಲಕರು ತಮ್ಮ ಬಸ್‌ ಟಿಕೆಟ್‌ ದರವನ್ನು ಏಕಾಏಕಿ ಏರಿಕೆ ಮಾಡಿದ್ದಾರೆ. ಸಾರ್ವಜನಿಕ ವಲಯದಲ್ಲಿ ಈ ಬಗ್ಗೆ ಟೀಕೆಗಳು ಕೇಳಿಬರುತ್ತಿವೆ.

ಹಬ್ಬಗಳ ಸಮಯ, ಚುನಾವಣೆ ವೇಳೆ ಖಾಸಗಿ ಬಸ್‌ ಯಾನ ದರ ಏರಿಕೆ ಇದೇ ಮೊದಲಲ್ಲ. ಕಳೆದ ಹಲವು ವರ್ಷಗಳಿಂದ ಇದೇ ರೀತಿ ವಿಶೇಷ ದಿನಗಳಲ್ಲಿ ಬಸ್‌ ಟಿಕೆಟ್‌ ದರ ದುಪ್ಪಟ್ಟು ಏರಿಕೆ ಮಾಡಲಾಗುತ್ತಿದೆ. ಸಾರಿಗೆ ಸಚಿವರು, ಸಾರಿಗೆ ಇಲಾಖೆ, ಪೊಲೀಸ್‌ ಇಲಾಖೆಯಿಂದ ಹಲವು ಬಾರಿ ಕಠಿನ ಕ್ರಮ ಕೈಗೊಳ್ಳುವ ಸೂಚನೆ ನೀಡಿದರೂ ಕೆಲವೊಂದು ಬಾರಿ ಪ್ರಕರಣ ದಾಖಲು ಮಾಡಿದರೂ ದರಕ್ಕೆ ಕಡಿವಾಣ ಹಾಕಲು ಸಾಧ್ಯವಾಗಿಲ್ಲ.

ಕೆಎಸ್ಸಾರ್ಟಿಸಿ ದರ ಸದ್ಯಕ್ಕೆ ಯಥಾಸ್ಥಿತಿ
ದೂರದ ಊರುಗಳಿಗೆ ಪ್ರಯಾಣಿಸುವ ಕೆಎಸ್ಸಾರ್ಟಿಸಿ ಯಾನ ದರ ಸದ್ಯಕ್ಕೆ ಯಥಾಸ್ಥಿತಿಯಲ್ಲಿದೆ. ಕೆಎಸ್ಸಾರ್ಟಿಸಿ ಅಧಿಕಾರಿಗಳು ಹೇಳುವ ಪ್ರಕಾರ ದೂರದ ಊರುಗಳಿಗೆ ಸಂಚರಿಸುವ ಸರಕಾರಿ ಬಸ್‌ಗಳಲ್ಲಿ ಸದ್ಯ ದರ ಹೆಚ್ಚಳವಾಗಲಿಲ್ಲ. ಸರಕಾರಿ ಬಸ್‌ಗಳಲ್ಲಿ ವಿಶೇಷ ದಿನಗಳ ದರ ಮತ್ತು ಸಾಮಾನ್ಯ ದಿನಗಳ ದರ ಎಂಬ ಎರಡು ದರಪಟ್ಟಿ ಇರುತ್ತದೆ.
ಕೆಎಸ್ಸಾರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್‌ ಶೆಟ್ಟಿ “ಉದಯವಾಣಿ’ಗೆ ಪ್ರತಿಕ್ರಿಯಿಸಿ, “ಚುನಾವಣೆ ಸಮಯದಲ್ಲಿ ಕೆಎಸ್ಸಾರ್ಟಿಸಿಯಿಂದ ಹೆಚ್ಚುವರಿ ಬಸ್‌ ಕಾರ್ಯಾಚರಿಸುತ್ತದೆ. ಆ ಮಾಹಿತಿ ಸದ್ಯದಲ್ಲೇ ನೀಡಲಾಗುತ್ತದೆ. ಕೆಎಸ್ಸಾರ್ಟಿಸಿ ಯಾನಕ್ಕೆ ಸದ್ಯಟಿಕೆಟ್‌ ದರ ಹೆಚ್ಚಳ ಮಾಡಲಾಗಿಲ್ಲ. ಕಾರ್ಯಾಚರಿಸುವ ವಿಶೇಷ ಬಸ್‌ಗಳಲ್ಲಿ ಟಿಕೆಟ್‌ಗೆ ಶೇ. 10ರಷ್ಟು ಹೆಚ್ಚಿನ ದರ ಪಾವತಿಸಬೇಕಾಗುತ್ತದೆ’ ಎಂದು ಹೇಳಿದ್ದಾರೆ.

ದರ ಮತ್ತಷ್ಟು ಹೆಚ್ಚಳ ಸಾಧ್ಯತೆ
ಚುನಾವಣೆಗೆಂದು ತಮ್ಮ ತಮ್ಮ ಊರುಗಳಿಗೆ ಬರಲು ಕೆಲವು ಮಂದಿ ಇದೀಗಷ್ಟೇ ಪ್ರಯಾಣಿಕರು ಬಸ್‌ಗಳಲ್ಲಿ ಸೀಟು ಬುಕ್‌ ಮಾಡುತ್ತಿದ್ದಾರೆ. ಸೀಟು ಭರ್ತಿಯಾದಂತೆ ಹೆಚ್ಚಿನ ಬಸ್‌ ಕಾರ್ಯಾಚರಣೆ ನಡೆಸುವ ಜತೆಗೆ ಪ್ರಯಾಣ ದರ ಕೂಡ ಹೆಚ್ಚಳವಾಗುತ್ತದೆ. ಸಾಮಾನ್ಯ ದಿನಗಳಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ 700 ರೂ.ನಿಂದ 800 ರೂ. ಇರುವ ಖಾಸಗಿ ಸೀಟರ್‌ ಬಸ್‌ ಟಿಕೆಟ್‌ ದರ ಚುನಾವಣೆಯ ಸಮಯದಲ್ಲಿ 2000 ರೂ.ಗೂ ಹೆಚ್ಚಿನ ದರಕ್ಕೆ ಏರಿಕೆಯಾಗಿದೆ.

ದೂರದೂರಿಗೆ ತೆರಳುವ ಖಾಸಗಿ ಬಸ್‌ಗಳಲ್ಲಿ ಟಿಕೆಟ್‌ ದರ ಏರಿಕೆಯಾದ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಯಾರೂ ದೂರು ನೀಡಿಲ್ಲ. ಈ ಕುರಿತು ಸಾರಿಗೆ ಇಲಾಖೆಗೆ ಯಾರಾದರು ದೂರು ನೀಡಿದರೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ.
– ಜಾನ್‌ ಮಿಸ್ಕಿತ್‌, ಮಂಗಳೂರು ಆರ್‌ಟಿಒ

– ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.