ತನ್ನ ನೋಡಿ ತಾಯಿ ನಕ್ಕಳೆಂದು ಮಗನ ಹತ್ಯೆ: ಆರೋಪಿಗೆ ಜೀವಾವಧಿ ಶಿಕ್ಷೆ, 25 ಸಾವಿರ ರೂ. ದಂಡ


Team Udayavani, Apr 25, 2023, 6:27 PM IST

ತನ್ನ ನೋಡಿ ತಾಯಿ ನಕ್ಕಳೆಂದು ಮಗನ ಹತ್ಯೆ: ಆರೋಪಿಗೆ ಜೀವಾವಧಿ ಶಿಕ್ಷೆ, 25 ಸಾವಿರ ರೂ. ದಂಡ

ವಿಜಯಪುರ: ತನ್ನನ್ನು ನೋಡಿ ತಾಯಿ ನಕ್ಕಳೆಂದು, ಇದರಿಂದ ಆಕೆಯನ್ನು ನಿಂದಿಸಿದ್ದನ್ನು ಪ್ರಶ್ನಿಸಿದ ಮಹಿಳೆಯ ಮಗನನ್ನು ಹತ್ಯೆ ಮಾಡಿದ ಆರೋಪಿಗೆ ಜಿಲ್ಲಾ ನ್ಯಾಯಾಲಯ ಮಂಗಳವಾರ ಜೀವಾವಧಿ ಶಿಕ್ಷೆಗೆ ಆದೇಶ ನೀಡಿದ್ದು, 26 ಸಾವಿರ ರೂ. ದಂಡವನ್ನೂ ವಿಧಿಸಿದೆ.

ಸರಿಯಾಗಿ 16 ತಿಂಗಳ ಹಿಂದೆ ಖತಿಜಾಪುರ ಗ್ರಾಮದ ಹಸೀನಾ ಉರ್ಫ್ ಬುಡ್ಡಿಮಾ ಮುಲ್ಲಾ ರಸ್ತೆಯಲ್ಲಿ ಹೋಗುವಾಗ ತನ್ನನ್ನು ನೋಡಿ ನಕ್ಕಳೆಂದು ಅನುಮಾನಿಸಿದ ಅದೇ ಗ್ರಾಮದ ಖಾಜಲ್ ಉರ್ಫ್ ಅಮೀನಸಾಬ್, ಇದನ್ನು ಪ್ರಶ್ನಿಸುವ ನೆಪದಲ್ಲಿ ಮಹಿಳೆಗೆ ಅವಾಚ್ಯವಾಗಿ ನಿಂದಿಸಿದ್ದ.

ಆದರೆ ತಾನು ಆರೋಪಿಯನ್ನು ನೋಡಿ ನಗಲಿಲ್ಲ ಎಂದು ಮಹಿಳೆ ಸಮಜಾಯಿಸಿ ನೀಡಿದರೂ ಆರೋಪಿ ಅಮೀನಸಾಬ್ ಮತ್ತೆ ಮನೆಗೆ ಆಗಮಿಸಿ ನಿಂದನೆ ಮಾಡಿದ್ದ. ಈ ವಿಷಯ ಹಸೀನಾಳ ಹಿರಿಯ ಮಗ ಇಸ್ಮಾಯಲ್‍ಗೆ ತಿಳಿದು, ಪ್ರಶ್ನಿಸಲು ಮುಂದಾಗಿದ್ದ.

ಇದನ್ನೂ ಓದಿ: Mamukkoya: ಜನರ ಸಮ್ಮುಖದಲ್ಲೇ ಕುಸಿದು ಬಿದ್ದ ಮಾಲಿವುಡ್‌ ದಿಗ್ಗಜ ನಟ ಮಾಮುಕ್ಕೋಯ

ಈ ಹಂತದಲ್ಲಿ ತನ್ನ ಚಿಕನ್ ಅಂಗಡಿ ಮುಂದೆ ಬಂದು ಇಸ್ಮಾಯಿಲ್ ಪ್ರಶ್ನಿಸಿದ್ದರಿಂದ ಕುಪಿತನಾದ ಆರೋಪಿ ಅಮೀನಸಾಬ್, ಚಿಕನ್ ಕತ್ತರಿಸುವ ಚಾಕು ಹಿಡಿದು ಬೆನ್ನತ್ತಿದ್ದು, ಕುಡಿಯುವ ನೀರಿನ ಘಟಕದ ಬಳಿ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದ.

ಈ ಕುರಿತು ಹಸೀನಾ ವಿಜಯಪುರ ಗ್ರಾಮೀಣ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಬಳಿಕ ತನಿಖಾಧಿಕಾರಿ ಸಿಪಿಐ ಎಸ್.ಬಿ.ಪಾಲಭಾವಿ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ವಿಜಯಪುರ ಜಿಲ್ಲಾ 3ನೇ ಅಧಿಕ ಜಿಲ್ಲಾ-ಸತ್ರ ನ್ಯಾಯಾಲಯದ ನ್ಯಾಯಾಧೀಶ ಸುಭಾಶ ಸಂಕದ ಹತ್ಯೆ ಮಾಡಿದ ಅಮೀನಸಾಬ್‍ಗೆ ಜೀವಾವಧಿ ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿದ್ದಾರೆ. ಅಲ್ಲದೇ ಇದೇ ಪ್ರಕರಣದ ಇತರೆ ಅಪರಾಧಕ್ಕಾಗಿ 2 ವರ್ಷ ಶಿಕ್ಷೆ, 1 ಸಾವಿರ ರೂ. ದಂಡ ವಿಧಿಸಿದೆ.

ದಂಡದ ಹಣದಲ್ಲಿ 20 ಸಾವಿರ ರೂ. ಪರಿಹಾರವಾಗಿ ಹತ್ಯೆ ಮಾಡಿದ ಅಮೀನಸಾಬ್‍ನಿಂದ ಮೃತನ ತಾಯಿ ಹಸೀನಾಳಿಗೆ ನೀಡುವಂತೆ ನ್ಯಾಯಾಧೀಶರು ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಮೂರನೇ ಅಧಿಕ ಸರ್ಕಾರಿ ಅಭಿಯೋಜಕ ಬಿ.ಡಿ.ಭಾಗವಾನ ವಾದ ಮಂಡಿಸಿದ್ದರು.

ಟಾಪ್ ನ್ಯೂಸ್

Wooden Block: ರೈಲು ಹಳಿ ಮೇಲೆ ಮರದ ದಿಮ್ಮಿ ಇಟ್ಟು ದುಷ್ಕೃತ್ಯ… ತಪ್ಪಿದ ದುರಂತ

Wooden Block: ರೈಲು ಹಳಿ ಮೇಲೆ ಮರದ ದಿಮ್ಮಿ ಇಟ್ಟು ದುಷ್ಕೃತ್ಯ… ತಪ್ಪಿದ ದುರಂತ

ಕದನಾವರಣ: ಆಕ್ರಮಣಕ್ಕೆ ಪ್ರತಿಕಾರ.. ಇರಾನ್ ಮತ್ತು ಸಿರಿಯಾ ಮೇಲೆ ದಾಳಿ ನಡೆಸಿದ ಇಸ್ರೇಲ್!

ಕದನಾವರಣ: ಆಕ್ರಮಣಕ್ಕೆ ಪ್ರತಿಕಾರ.. ಇರಾನ್ ಮತ್ತು ಸಿರಿಯಾ ಮೇಲೆ ದಾಳಿ ನಡೆಸಿದ ಇಸ್ರೇಲ್!

Desi Swara: ನ್ಯೂಯಾರ್ಕ್‌-“ಮಿಸ್‌ ಇಂಡಿಯಾ’ ಕಿರೀಟ ಗೆದ್ದ ಮೊದಲ ಕನ್ನಡತಿ ಜೀವಿಕಾ

Desi Swara: ನ್ಯೂಯಾರ್ಕ್‌-“ಮಿಸ್‌ ಇಂಡಿಯಾ’ ಕಿರೀಟ ಗೆದ್ದ ಮೊದಲ ಕನ್ನಡತಿ ಜೀವಿಕಾ

ಮುಂದಿನ ಸೀಸನ್ ಐಪಿಎಲ್‌ ಆಡುತ್ತಾರಾ..? ದೊಡ್ಡ ಸುಳಿವು ನೀಡಿದ ಧೋನಿ

IPL 2025: ಮುಂದಿನ ಐಪಿಎಲ್‌ ಸೀಸನ್ ಆಡುತ್ತಾರಾ..? ದೊಡ್ಡ ಸುಳಿವು ನೀಡಿದ ಧೋನಿ

Desi Swara: ಸಾಧನೆಗೆ ಆತ್ಮಸಂತೃಪ್ತಿಯೇ ಅಳತೆಗೋಲು : ಸಾಮಾಜಿಕ ಸಾಧನೆ ಸ್ವಾರ್ಥವಾಗದಿರಲಿ

Desi Swara: ಸಾಧನೆಗೆ ಆತ್ಮಸಂತೃಪ್ತಿಯೇ ಅಳತೆಗೋಲು : ಸಾಮಾಜಿಕ ಸಾಧನೆ ಸ್ವಾರ್ಥವಾಗದಿರಲಿ

Ellige Payana Yavudo Daari Review: ರೋಚಕ ಹಾದಿಯ ಸುಖಕರ ಪಯಣವಿದು…

Ellige Payana Yavudo Daari Review: ರೋಚಕ ಹಾದಿಯ ಸುಖಕರ ಪಯಣವಿದು…

Kundapura: ಬೀಜಾಡಿ ಬೀಚ್ ನಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರಪಾಲು

Kundapura: ಬೀಜಾಡಿ ಬೀಚ್ ನಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರಪಾಲು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

Karnataka: ಬೇಲೆಕೇರಿ ಅದಿರು; ಸತೀಶ್‌ ಸೈಲ್‌ ಸೇರಿ 7 ಮಂದಿಗೆ ಇಂದು ಶಿಕ್ಷೆ ಪ್ರಕಟ

Karnataka: ಬೇಲೆಕೇರಿ ಅದಿರು; ಸತೀಶ್‌ ಸೈಲ್‌ ಸೇರಿ 7 ಮಂದಿಗೆ ಇಂದು ಶಿಕ್ಷೆ ಪ್ರಕಟ

1-aa-nama

By election; 3 ಕ್ಷೇತ್ರ 83 ನಾಮಪತ್ರ

1-aaree

MUDA Case: ಸಿಎಂ ಸಿದ್ದರಾಮಯ್ಯ ಪತ್ನಿ 3 ತಾಸು ಲೋಕಾ ವಿಚಾರಣೆ

Agri

Rain ;ಹಿಂಗಾರು ಮಳೆಗೆ ರಾಜ್ಯದ 1 ಲಕ್ಷ ಹೆಕ್ಟೇರ್‌ ಬೆಳೆ ನಾಶ

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

12-

Kengeri ಉಪನಗರ- ಆರ್ವಿ ಕಾಲೇಜು ರಸ್ತೆ ಬಳಿ ಕಸದ ರಾಶಿ

Wooden Block: ರೈಲು ಹಳಿ ಮೇಲೆ ಮರದ ದಿಮ್ಮಿ ಇಟ್ಟು ದುಷ್ಕೃತ್ಯ… ತಪ್ಪಿದ ದುರಂತ

Wooden Block: ರೈಲು ಹಳಿ ಮೇಲೆ ಮರದ ದಿಮ್ಮಿ ಇಟ್ಟು ದುಷ್ಕೃತ್ಯ… ತಪ್ಪಿದ ದುರಂತ

ಕದನಾವರಣ: ಆಕ್ರಮಣಕ್ಕೆ ಪ್ರತಿಕಾರ.. ಇರಾನ್ ಮತ್ತು ಸಿರಿಯಾ ಮೇಲೆ ದಾಳಿ ನಡೆಸಿದ ಇಸ್ರೇಲ್!

ಕದನಾವರಣ: ಆಕ್ರಮಣಕ್ಕೆ ಪ್ರತಿಕಾರ.. ಇರಾನ್ ಮತ್ತು ಸಿರಿಯಾ ಮೇಲೆ ದಾಳಿ ನಡೆಸಿದ ಇಸ್ರೇಲ್!

11-dinesh

Bengaluru: ತುಪ್ಪದ 5 ಸ್ಯಾಂಪಲ್‌ಗಳಲ್ಲಿ ಅಪಾಯದ ಅಂಶಗಳು ಪತ್ತೆ: ಸಚಿವ ಗುಂಡೂರಾವ್‌

10-

Bengaluru: ಕಲಬೆರಕೆ ಆಹಾರ ಪತ್ತೆಗೆ ಮ್ಯಾಜಿಕ್‌ ಬಾಕ್ಸ್‌ ಅಳವಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.