ಗುಂಡ್ಯ: ಅಂಗಡಿ ಮೇಲೆ ಎರಗಿದ ಬೃಹತ್‌ ಮರ


Team Udayavani, Apr 26, 2023, 7:42 AM IST

ಗುಂಡ್ಯ: ಅಂಗಡಿ ಮೇಲೆ ಎರಗಿದ ಬೃಹತ್‌ ಮರ

ಉಪ್ಪಿನಂಗಡಿ: ಶಿರಾಡಿ ಗ್ರಾಮದ ಗುಂಡ್ಯ ಮತ್ತು ಪರಿಸರದಲ್ಲಿ ಸುರಿದ ಭಾರೀ ಗಾಳಿ-ಮಳೆಯಿಂದಾಗಿ ಮರವೊಂದು ಉರುಳಿ ಅಂಗಡಿಯೊಂದು ನೆಲ ಸಮಗೊಂಡ ಘಟನೆ ಮಂಗಳವಾರ ಸಾಯಂಕಾಲ ಸಂಭವಿಸಿದೆ.

ಗುಂಡ್ಯ ಪೇಟೆಯಲ್ಲಿ ಹೆದ್ದಾರಿ ಬದಿಯ ಬೃಹತ್‌ ಮರವೊಂದು ರೋಬಿನ್‌ ಅವರ ಅಂಗಡಿಯ ಮೇಲೆ ಉರುಳಿ ಅಂಗಡಿ ಸಂಪೂರ್ಣ ನೆಲ ಸಮಗೊಂಡಿದೆ. ಅಂತೆಯೇ ಶಿರಿಬಾಗಿಲು ಗ್ರಾಮದ ಗುಂಡ್ಯ ತೋಟದ ಪೂವಪ್ಪ ಅವರ ಮನೆಯ ಹಂಚುಗಳು ಹಾಗೂ ಶೀಟುಗಳು ಗಾಳಿಯ ಹೊಡೆಯಕ್ಕೆ ಸಿಲುಕಿ ಹಾರಿ ಹೋಗಿ ಹಾನಿಗೀಡಾಗಿದೆ.

ಗುಂಡ್ಯ ಪರಿಸರದ ಹಲವಾರು ಕಡೆಗಳಲ್ಲಿ ಮರಗಳು ಧರೆಗುರುಳಿದ ಹಿನ್ನೆಲೆಯಲ್ಲಿ ವಿದ್ಯುತ್‌ ಕಂಬಗಳು ಹಾನಿಗೀಡಾಗಿದ್ದು, ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯವಾಯಿತು. ಕೆಲವು ಕಡೆ ಹೆದ್ದಾರಿಗೆ ಮರಗಳು ಉರುಳಿದ ಪರಿಣಾಮ ಕೆಲ ಕಾಲ ಹೆದ್ದಾರಿ ಸಂಚಾರಕ್ಕೂ ಅಡೆತಡೆಯಾಗಿತ್ತು. ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಸಿಬಂದಿ ಮರಗಳ್ನನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಗಾಳಿಯ ಅಬ್ಬರಕ್ಕೆ ಹಲವೆಡೆ ಅಡಿಕೆ ಮರಗಳ ಸಹಿತ ಕೃಷಿ ಬೆಳೆಗಳಿಗೆ ಹಾನಿಯಾಗಿದೆ. ಘಟನ ಸ್ಥಳಕ್ಕೆ ಕಂದಾಯ ಇಲಾಖಾಧಿಕಾರಿಗಳು ಹಾಗೂ ಪಂಚಾಯತ್‌ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕ್ಷಣ ಮಾತ್ರದಲ್ಲಿ ಮೂಡಿದ ವಿವೇಕ ಪ್ರಾಣವನ್ನುಳಿಸಿತು
ಗುಂಡ್ಯದಲ್ಲಿ ಭಾರೀ ಗಾಳಿಯೊಂದಿಗೆ ಮಳೆ ಸುರಿಯಲಾರಂಭಿಸಿದಾಗ ಗಾಳಿಯ ಹೊಡೆತಕ್ಕೆ ಅಂಗಡಿಯೊಳಗಿನ ವಸ್ತುಗಳು ಹಾರಿಹೋಗುವ ಸ್ಥಿತಿ ನಿರ್ಮಾಣವಾಗಿತ್ತು. ವಸ್ತುಗಳನ್ನು ರಕ್ಷಿಸಲು ಅಂಗಡಿಯ ಬಾಗಿಲು ಹಾಕಲೆಂದು ಹೊರ ಬಂದ ರೋಬಿನ್‌ ಅವರಿಗೆ ಹೆದ್ದಾರಿ ಬದಿಯ ಬೃಹತ್‌ ಮರವೊಂದು ಧರೆದುರುಳುತ್ತಿದ್ದ ದೃಶ್ಯ ಕಾಣಿಸಿತು. ಕೂಡಲೇ ದೂರಕ್ಕೆ ಓಡಿದ ಅವರು ಹಿಂದಿರುಗಿ ನೋಡುವಷ್ಟರಲ್ಲಿ ಬೃಹತ್‌ ಮರ ಬಿದ್ದು ಅಂಗಡಿ ನೆಲ ಸಮವಾಗಿತ್ತು. ಅಪಘಾತದಿಂದಾಗಿ ಅಂಗವಿಕಲರಾಗಿದ್ದ ರೋಬಿನ್‌ ಅವರ ಜೀವನೋಪಾಯಕ್ಕೆ ಇದ್ದ ಏಕೈಕ ಆಸರೆ ಈ ಅಂಗಡಿ. ಆ ಕ್ಷಣದಲ್ಲಿ ಅಂಗಡಿಯಿಂದ ಹೊರಗೋಡಿ ಬರಲು ಒದಗಿದ ಭಗವಂತನ ಪ್ರೇರಣೆ, ಹಾಗೂ ಅಂಗವೈಕಲ್ಯದ ನಡುವೆಯೂ ಓಡಿಹೋಗಿ ಜೀವ ಉಳಿಸಿಕೊಳ್ಳಲು ಭಗವಂತನ ಪ್ರೇರಣೆಯೇ ಕಾರಣ ಎಂದು ಗದ್ಗದಿತರಾಗಿ ಪತ್ರಿಕೆಗೆ ಪ್ರತಿಕ್ರಿಯಿಸಿದರು.

ಟಾಪ್ ನ್ಯೂಸ್

10

Tollywood: ʼಪುಷ್ಪ-3 ಬರುವುದು ಕನ್ಫರ್ಮ್..‌ ನಿರ್ಮಾಪಕರೇ ಬಿಟ್ಟು ಕೊಟ್ರು ಗುಟ್ಟು

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

MS Dhoni Sends ‘shocking’ Message To Chennai Super Kings

IPL 2025: ಸಿಎಸ್‌ ಕೆ ಅಭಿಮಾನಿಗಳಿಗೆ ಶಾಕಿಂಗ್‌ ಸುದ್ದಿ ಕೊಟ್ಟ ಎಂ.ಎಸ್.ಧೋನಿ

9

Actor Suriya: ತಾಯಿ ಮಾಡಿದ 25 ಸಾವಿರ ರೂ. ಸಾಲ ತೀರಿಸಲು ಸಿನಿಮಾ ರಂಗಕ್ಕೆ ಬಂದ ಸೂರ್ಯ

ಕಾನೂನು ಸಮರದಲ್ಲಿ ಪವಾರ್‌ ಗೆ ಕೈ ಕೊಟ್ಟ “ಗಡಿಯಾರ”, ಸುಪ್ರೀಂನಲ್ಲಿ ಅಜಿತ್‌ ಬಣಕ್ಕೆ ಮೇಲುಗೈ

ಕಾನೂನು ಸಮರದಲ್ಲಿ ಪವಾರ್‌ ಗೆ ಕೈ ಕೊಟ್ಟ “ಗಡಿಯಾರ”, ಸುಪ್ರೀಂನಲ್ಲಿ ಅಜಿತ್‌ ಬಣಕ್ಕೆ ಮೇಲುಗೈ

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Bellare: ಆಡನ್ನು ಪೇಟೆಗೆ ಬಿಟ್ಟ ಮಾಲಕರಿಗೆ ದಂಡ

1

Uppinangady: ಹೆದ್ದಾರಿ ಸಂಚಾರ ಅಡ್ಡಾದಿಡ್ಡಿ!

Kadaba-Rain

Heavy Rain: ಕಡಬ ಪರಿಸರದಲ್ಲಿ ಭಾರೀ ಮಳೆ: ರಸ್ತೆ ಜಲಾವೃತ

Dharmasthala

Dharmasthala: ಇಂದು ಡಾ.ಡಿ.ವೀರೇಂದ್ರ ಹೆಗ್ಗಡೆಯವರ 57ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ

Puuturu-VHP

Putturu: ವಿಶ್ವ ಹಿಂದೂ ಪರಿಷತ್‌ನಿಂದ ಸಾಮಾಜಿಕ ಸಮರಸದ ಭಾವ: ಗೋಪಾಲ್‌ ಜಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

10

Tollywood: ʼಪುಷ್ಪ-3 ಬರುವುದು ಕನ್ಫರ್ಮ್..‌ ನಿರ್ಮಾಪಕರೇ ಬಿಟ್ಟು ಕೊಟ್ರು ಗುಟ್ಟು

8

KSRTC ನಿಲ್ದಾಣ-ಲಾಲ್‌ಭಾಗ್‌ ರಸ್ತೆ ಫುಟ್‌ಪಾತ್‌ ಇಲ್ಲದೆ ಪಾದಚಾರಿಗಳ ಪರದಾಟ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

MS Dhoni Sends ‘shocking’ Message To Chennai Super Kings

IPL 2025: ಸಿಎಸ್‌ ಕೆ ಅಭಿಮಾನಿಗಳಿಗೆ ಶಾಕಿಂಗ್‌ ಸುದ್ದಿ ಕೊಟ್ಟ ಎಂ.ಎಸ್.ಧೋನಿ

7

Thekkatte: ಹೆದ್ದಾರಿ ಹೊಡೆತದಿಂದ ತೆಕ್ಕಟ್ಟೆ ಕನ್ನಡ ಶಾಲೆ ಉಳಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.