Udupi: ಸೈನಿಕರಿಗೆ ಇಟಿಪಿಬಿಎಸ್ ಮತದಾನ; ಜಿಲ್ಲೆಯಲ್ಲಿದ್ದಾರೆ 243 ಸೈನಿಕ ಮತದಾರರು
Team Udayavani, Apr 26, 2023, 3:50 PM IST
ಉಡುಪಿ: ಜಿಲ್ಲೆಯಲ್ಲಿ ವಿಧಾನಸಭಾ ಚುನಾವಣೆ ರಂಗೇರಿದ್ದು, ಕಣದಲ್ಲಿ ಅಭ್ಯರ್ಥಿಗಳು ಅಂತಿಮವಾಗಿದ್ದಾರೆ. ಇನ್ನು ಅಂಚೆ, ಇಟಿಪಿಬಿಎಸ್ ಮತದಾನ ಪ್ರಕ್ರಿಯೆ ಚುರುಕು ಪಡೆಯಲಿದೆ. ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಜಿಲ್ಲೆಯ 243 ಸೇವಾ ಮತದಾರರು ಇಟಿಪಿಬಿಎಸ್ (ಎಲೆಕ್ಟ್ರಾನಿಕಲಿ ಟ್ರಾನ್ಸ್ಮಿಟೆಡ್ ಪೋಸ್ಟಲ್ ಬ್ಯಾಲೆಟ್ (ಸ್ಟಂ) ಮೂಲಕ ಮತದಾನ ಮಾಡಲಿದ್ದಾರೆ.
ನಾಮಪತ್ರ ಹಿಂತೆಗೆದು ಕೊಳ್ಳುವ ಕೊನೆಯ ದಿನಾಂಕ ಮುಗಿದ ಅನಂತರ 24 ಗಂಟೆ ಕಳೆದು ಇಟಿಪಿಬಿಎಸ್ ಪ್ರಕ್ರಿಯೆ ಆರಂಭಗೊಳ್ಳಲಿದೆ.
ಈಗಾಗಲೇ ಕಣದಲ್ಲಿರುವ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಗೊಂಡಿದ್ದು, ಬುಧವಾರ ಇಟಿಪಿಬಿಎಸ್ ಪ್ರಕ್ರಿಯೆ ಪ್ರಾರಂಭ ಗೊಳ್ಳಲಿದೆ. ಸೇನೆಗೆ ಸಂಬಂಧಿಸಿದ ಎಲ್ಲ ರೆಜಿಮೆಂಟ್ ಗಳಲ್ಲಿಯೂ ಈ ಬಗ್ಗೆ ವ್ಯವಸ್ಥೆಯನ್ನು ಚುನಾವಣೆ ಆಯೋಗ ಮಾಡಿರುತ್ತದೆ.
ಪ್ರಜಾಪ್ರತಿನಿಧಿ ಕಾಯ್ದೆ 1950ರ ಸೆಕ್ಷನ್ 20ರ ಉಪ ಸೆಕ್ಷನ್ (8)ರ ಅನ್ವಯ ಕೇಂದ್ರ ಶಸಸ್ತ್ರ ಪಡೆಗಳ ಸಿಬಂದಿ, ಅಧಿಕಾರಿಗಳು, ಸೇನಾ ಕಾಯ್ದೆ 1950ರ ಸೆಕ್ಷನ್ 46 ಅನ್ವಯವಾಗುವ ಸೇನಾ ಸಿಬಂದಿ, ರಾಜ್ಯದ ಹೊರ ಭಾಗಗಳಲ್ಲಿ ಪೊಲೀಸ್ ಶಸಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ರಾಜ್ಯದವರು ಹಾಗೂ ಕೇಂದ್ರ ಸರಕಾರದ ಸೇವೆ ಮೇರೆಗೆ ವಿದೇಶಗಳಲ್ಲಿ ರಾಯಭಾರಿ ಕಚೇರಿಗಳಲ್ಲಿ ಸೇವೆ
ಸಲ್ಲಿಸುತ್ತಿರುವವರನ್ನು ಸೇವಾ ಮತದಾರರು ಎಂದು ಪರಿಗಣಿಸಲಾಗುತ್ತದೆ. ಜಿಲ್ಲೆಯಲ್ಲಿ 243 ಮಂದಿಯಲ್ಲಿ ಶೇ.90
ರಷ್ಟು ಮಂದಿ ಸೇನೆಗೆ ಸಂಬಂಧಿಸಿದ ಮತದಾರರಿದ್ದಾರೆ.
ಇಟಿಪಿಬಿಎಸ್ ಮತದಾನ ಪ್ರಕ್ರಿಯೆ ಹೇಗೆ ?
ಸೇವಾ ಮತದಾರರಾಗಿ ನೋಂದಾಯಿಸಿಕೊಳ್ಳಲು ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವವರು ಫಾರಂ-2ರಲ್ಲಿ ಸಶಸ್ತ್ರ ಪಡೆಗಳಲ್ಲಿ ಬೇರೆ ರಾಜ್ಯಗಳಲ್ಲಿ ಸೇವೆಯಲ್ಲಿರುವವರು ಫಾರಂ-2ರಲ್ಲಿ ಹಾಗೂ ವಿದೇಶಗಳಲ್ಲಿ ಕೇಂದ್ರ ಸರಕಾರದ ಸೇವೆಯಲ್ಲಿರುವವರು ಫಾರಂ-3 ಭರ್ತಿ ಮಾಡಿ ಆನ್ಲೈನ್ ನಲ್ಲಿ ನೋಂದಾಯಿಸಿಕೊಳ್ಳಬೇಕು. ಸೇವಾ ಮತದಾರರು ಮತದಾನ ಮಾಡಲು ಸಿ-ಡಾಕ್ ನೆರವಿನೊಂದಿಗೆ ಕೇಂದ್ರ ಚುನಾವಣ ಆಯೋಗವು ಇಟಿಪಿಬಿಎಸ್ ನೋಂದಾಯಿಸಿಕೊಂಡವರಿಗೆ ತಮ್ಮ ಕ್ಷೇತ್ರದ ಹೊರ
ಭಾಗದಿಂದಲೂ ಮತದಾನ ಮಾಡಲು ಇದರಿಂದ ಅವಕಾಶವಾಗುತ್ತಿದೆ.
ನೋಂದಣಿ ಮಾಡಿಕೊಂಡ ಸೇವಾ ಮತದಾರರ ಎಲೆಕ್ಟ್ರಾನಿಕ್ ಬ್ಯಾಲೆಟ್ ಅನ್ನು ಸಂಬಂಧಪಟ್ಟ ರೆಕಾರ್ಡ್ ಅಧಿಕಾರಿ ಮತ್ತು ಯೂನಿಟ್ ಅಧಿಕಾರಿಗೆ ಕಳಿಸಲಾಗುತ್ತದೆ. ಅವರು ಒಟಿಪಿ ಹಾಕಿ ಅದನ್ನು ಡೌನ್ಲೋಡ್ ಮಾಡಿ ಸಂಬಂಧಪಟ್ಟ ಸೇವಾ ಮತದಾರನಿಗೆ ಕೊಡಬೇಕು. ಅದನ್ನು ಭರ್ತಿ ಮಾಡಿ ಸೇವಾ ಮತದಾರರು ಲಕೋಟೆಯಲ್ಲಿ ಸಂಬಂಧಪಟ್ಟ
ಚುನಾವಣಾಧಿಕಾರಿಗೆ ಕಳುಹಿಸುತ್ತಾರೆ.
*ಅವಿನ್ ಶೆಟ್ಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Test Cricket : ಮೆಂಡಿಸ್ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.