ಪ್ರೀತಂಗೌಡರನ್ನು ಸೋಲಿಸಿ ಹಾಸನದಿಂದ ಓಡಿಸಿ: ಭವಾನಿ
Team Udayavani, Apr 27, 2023, 7:26 AM IST
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮತ್ತು ಮಹಿಳೆಯರ ಬಗ್ಗೆ ಅವಹೇಳನ ಮಾಡಿರುವ ಶಾಸಕ ಪ್ರೀತಂಗೌಡ ಅವರನ್ನು ಸೋಲಿಸಿ ಹಾಸನದಿಂದ ಓಡಿಸಬೇಕು ಎಂದು ಜಿಪಂ ಮಾಜಿ ಸದಸ್ಯೆ ಭವಾನಿ ರೇವಣ್ಣ ವಾಗ್ಧಾಳಿ ನಡೆಸಿದರು.
ನಗರದ ಗಾಂಧಿ ಬಜಾರ್ನಲ್ಲಿರುವ ನಿಲುವಾಗಿಲು ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ಬುಧವಾರ ಪತಿ ರೇವಣ್ಣ ಮತ್ತು ಹಾಸನ ಕ್ಷೇತ್ರದ ಜೆಡಿಎಸ್ ಮುಖಂಡರೊಂದಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಜೆಡಿಎಸ್ ಅಭ್ಯರ್ಥಿ ಎಚ್.ಪಿ.ಸ್ವರೂಪ್ ಪರ ವಿವಿಧ ವಾರ್ಡ್ಗಳಲ್ಲಿ ಚುನಾವಣಾ ಪ್ರಚಾರ ನಡೆಸಿದ ಅವರು, ಎಚ್.ಡಿ.ದೇವೇಗೌಡರು ಇಡೀ ರಾಜ್ಯಕ್ಕೆ ತಂದೆ ಸಮಾನರು. ಅವರ ಬಗ್ಗೆ ಹಗುರುವಾಗ ಮಾತನಾಡಿ ಅವರ ಸಾವು ಬಯಸಿ ಮಾತನಾಡಿದ್ದ ಬಿಜೆಪಿ ಶಾಸಕ ಪ್ರೀತಂಗೌಡ ನನ್ನ ಬಗ್ಗೆಯೂ ಹಗುರವಾಗಿ ಮಾತನಾಡುವ ಮೂಲಕ ಸ್ತ್ರೀ ಕುಲಕ್ಕೆ ಅವಮಾನ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಮ್ಮಂತೆಯೇ ಬಿಜೆಪಿ ಶಾಸಕರಿಂದ ನೋವು ತಿಂದಿರುವ ಕುಟುಂಬಗಳು ಸಾಕಷ್ಟಿವೆ. ಪ್ರತಿಯೊಬ್ಬರೂ ಹಾಸನ ಕ್ಷೇತ್ರದಲ್ಲಿ ಬಿಜೆಪಿ ಸೋಲಿಸುವ ಪ್ರತಿಜ್ಞೆ ಮಾಡಬೇಕು. ಈಗಿರುವ ಉತ್ಸಾಹದಲ್ಲಿಯೇ ಜೆಡಿಎಸ್ ಕಾರ್ಯಕರ್ತರು ಮುನ್ನುಗ್ಗಬೇಕು. ಬಿಜೆಪಿ ಶಾಸಕರನ್ನು ಹಾಸನ ಬಿಟ್ಟು ಓಡಿಸ್ತೀವಿ ಎಂದು ಕೂಗು ಹಾಕೋಣ ಎಂದು ಕಾರ್ಯಕರ್ತರನ್ನು ಭವಾನಿ ರೇವಣ್ಣ ಹುರಿದುಂಬಿಸಿದರು.
ಎಲ್ಲರಿಗೂ ಒಬ್ಬರು ತಾಯಿ ಇರ್ತಾರೆ. ಆದರೆ ಹಾಸನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಚ್.ಪಿ.ಸ್ವರೂಪ್ಗೆ ಇಬ್ಬರು ತಾಯಂದಿರಿದ್ದಾರೆ. ಲಲಿತಾ ಅವರು ಸ್ವರೂಪ್ ಹೆತ್ತ ತಾಯಿ, ನಾನು ಸ್ವರೂಪ್ ಭಾರ ಹೊತ್ತುಕೊಂಡಿರುವ ತಾಯಿ. ಈ ವಿಚಾರದಲ್ಲಿ ಸ್ವರೂಪ್ ಅದೃಷ್ಟವಂತ.
-ಭವಾನಿ ರೇವಣ್ಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…
Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ
Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…
Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ
Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.