ಅವಿಭಜಿತ ದ.ಕ. ಜಿಲ್ಲೆ ಈ ಬಾರಿ 95 ಅಭ್ಯರ್ಥಿಗಳ ಚುನಾವಣ ಕಣ


Team Udayavani, Apr 27, 2023, 6:55 AM IST

ಅವಿಭಜಿತ ದ.ಕ. ಜಿಲ್ಲೆ ಈ ಬಾರಿ 95 ಅಭ್ಯರ್ಥಿಗಳ ಚುನಾವಣ ಕಣ

ಮಂಗಳೂರು: ಕಳೆದ ವಿಧಾನ ಸಭಾ ಚುನಾವಣೆಗೆ ಹೋಲಿಸಿದರೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಈ ಬಾರಿ ಸ್ಪರ್ಧಿಗಳ ಸಂಖ್ಯೆಯಲ್ಲಿ ಏರಿಕೆಯಾಗಿ ರುವುದು ಮೂರೇ ಮಂದಿ. ಜತೆಗೆ ಪಕ್ಷಗಳ ಸಂಖ್ಯೆಯಲ್ಲಿ ಕೊಂಚ ಹೆಚ್ಚಳವಾಗಿದೆ.

2013ರ ಚುನಾವಣೆಯಲ್ಲಿ ದ.ಕ. ಜಿಲ್ಲೆ ಯ 8 ಕ್ಷೇತ್ರಗಳಲ್ಲಿ 71, 2018ರಲ್ಲಿ 58 ಅಭ್ಯ ರ್ಥಿ‌ಗಳಿದ್ದರೆ ಈ ಬಾರಿ 60 ಮಂದಿ ಇದ್ದಾರೆ. ಉಡುಪಿ ಜಿಲ್ಲೆಯ 5 ಕ್ಷೇತ್ರಗಳಲ್ಲಿ 2013ರಲ್ಲಿ 46, 2018 ರಲ್ಲಿ 34, ಈ ಬಾರಿ 35 ಮಂದಿಇದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ
ದ.ಕ. ಜಿಲ್ಲೆಯಲ್ಲಿ ಬಿಜೆಪಿ, ಕಾಂಗ್ರೆಸ್‌ ಮತ್ತು ಆಪ್‌ನಿಂದ ತಲಾ 8, ಜೆಡಿಎಸ್‌ನಿಂದ 7, ಎಸ್‌ಡಿಪಿಐಯಿಂದ 5 ಹಾಗೂ ಇತರರು ಸೇರಿದಂತೆ ಒಟ್ಟು 60 ಮಂದಿ ಕಣದಲ್ಲಿದ್ದಾರೆ. 2018ರಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ನಿಂದ ತಲಾ 8, ಸಿಪಿಎಂ 4, ಜೆಡಿಎಸ್‌ 5, ಬಿಎಸ್‌ಪಿ ಯಿಂದ 1 ಹಾಗೂ ಇತರ 32 ಅಭ್ಯರ್ಥಿ ಗಳು ಒಳಗೊಂಡು 58 ಮಂದಿ ಇದ್ದರು. 2013ರಲ್ಲಿ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಮತ್ತು ಕೆಜೆಪಿಯಿಂದ ತಲಾ 8, ಎಸ್‌ಡಿಪಿಐ 7, ಸಿಪಿಎಂ 3, ಬಿಎಸ್‌ಪಿ 1, ಇತರ 28 ಮಂದಿ ಒಳಗೊಂಡು 71 ಮಂದಿ ಸ್ಪರ್ಧಿಸಿದ್ದರು.

ಮಂಗಳೂರು ಉತ್ತರದಲ್ಲಿ ಗರಿಷ್ಠ
ಮಂಗಳೂರು ಉತ್ತರದಲ್ಲಿ ಈ ಬಾರಿ 10 (ಕಳೆದ ಬಾರಿ 7) ಮಂದಿ ಕಣದಲ್ಲಿದ್ದಾರೆ. ಮೂಡುಬಿದಿರೆಯಲ್ಲಿ 8 (7), ಪುತ್ತೂರಿನಲ್ಲಿ 8 (11) ಬೆಳ್ತಂಗಡಿ 8 (6), ಮಂಗಳೂರು ನಗರ ದಕ್ಷಿಣ 8 (11) ಮಂಗಳೂರು 5 (5), ಬಂಟ್ವಾಳ 5 (5) ಹಾಗೂ ಸುಳ್ಯದಲ್ಲಿ 8 (6) ಅಭ್ಯರ್ಥಿಗಳಿದ್ದಾರೆ.

ಉಡುಪಿ ಜಿಲ್ಲೆ
ಜಿಲ್ಲೆಯ 5 ಕ್ಷೇತ್ರಗಳಲ್ಲಿ ಈ ಬಾರಿ ಬಿಜೆಪಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ನಿಂದ ತಲಾ 5, ಆಪ್‌ನಿಂದ 4 ಸಹಿತ ಇತರರು ಸೇರಿದಂತೆ 35 ಮಂದಿ ಕಣದಲ್ಲಿದ್ದಾರೆ. 2018ರಲ್ಲಿ ಬಿಜೆಪಿ, ಕಾಂಗ್ರೆಸ್‌ ನಿಂದ ತಲಾ 5, ಜೆಡಿಎಸ್‌ 4, ಸಿಪಿಎಂ, ಬಿಎಸ್‌ಪಿಯಿಂದ ತಲಾ 1, ಇತರ 18 ಅಭ್ಯರ್ಥಿಗಳು ಒಳ ಗೊಂಡು 34 ಮಂದಿ ಕಣದಲ್ಲಿದ್ದರು. 2013 ರ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್‌ ತಲಾ 5, ಜೆಡಿಎಸ್‌ 4, ಕೆಜೆಪಿ 2, ಬಿಎಸ್‌ಪಿ 3 ಹಾಗೂ ಪಕ್ಷೇತರರು ಸೇರಿ ಇತರ 27 ಮಂದಿ ಸೇರಿದಂತೆ 46 ಮಂದಿ ಸ್ಪರ್ಧಿಸಿದ್ದರು.

ಕಾರ್ಕಳ, ಬೈಂದೂರು ಗರಿಷ್ಠ
ಉಡುಪಿ ಕ್ಷೇತ್ರದಲ್ಲಿ 7 (ಕಳೆದ ಬಾರಿ 8), ಕುಂದಾಪುರ 5 (5), ಬೈಂದೂರು 9 (9), ಕಾರ್ಕಳ 9 (7)ಹಾಗೂ ಕಾಪು ಕ್ಷೇತ್ರದಲ್ಲಿ 5 (5) ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಪಕ್ಷೇತರರ ಸಂಖ್ಯೆ ಇಳಿಮುಖ
ದ.ಕ. ಜಿಲ್ಲೆಯಲ್ಲಿ 2013ರ ಚುನಾವಣೆಯಲ್ಲಿ 28 ಪಕ್ಷೇತರರಿದ್ದರು. 2018ರಲ್ಲಿ ಪಕ್ಷೇತರರ ಸಂಖ್ಯೆ 17ಕ್ಕೆ ಇಳಿಮುಖವಾಗಿತ್ತು.
ಈ ವರ್ಷ ಮತ್ತೂ ಕಡಿಮೆಯಾಗಿದ್ದು, ಕೇವಲ 10 ಮಂದಿ ಇದ್ದಾರೆ. ಉಡುಪಿ ಜಿಲ್ಲೆಯಲ್ಲಿ ಈ ಬಾರಿ 8 ಮಂದಿ ಪಕ್ಷೇತರರಿದ್ದಾರೆ. ಇಲ್ಲಿ 2013ರಲ್ಲಿ 22 ಮಂದಿ ಸ್ಪರ್ಧಿಸಿದ್ದರು. ಕಳೆದ ಬಾರಿ ಅದು ಕಡಿಮೆಯಾಗಿತ್ತು.

ಪಕ್ಷಗಳ ಸಂಖ್ಯೆ ಹೆಚ್ಚಳ
ಈ ಬಾರಿ ಆಮ್‌ ಆದ್ಮಿ ಪಾರ್ಟಿ, ಎಸ್‌ಡಿಪಿಐ ಹಾಗೂ ಉತ್ತಮ ಪ್ರಜಾಕೀಯ ಪಕ್ಷವೂ ಸೇರಿದೆ.
ಆಮ್‌ ಆದ್ಮಿ ಪಾರ್ಟಿ ಉಭಯ ಜಿಲ್ಲೆಗಳ 12 ಕ್ಷೇತ್ರಗಳಲ್ಲಿ ತನ್ನ ಸ್ಪರ್ಧಿಗಳನ್ನು ನಿಲ್ಲಿಸಿದ್ದರೆ, ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದೆ.
ಉತ್ತಮ ಪ್ರಜಾಕೀಯ ಪಕ್ಷಗಳ ಅಭ್ಯರ್ಥಿಗಳೂ ಕೆಲವೆಡೆ ಸ್ಪರ್ಧಿಸಿದ್ದಾರೆ. ಇವುಗಳೊಂದಿಗೆ ಇತರೆ ಪಕ್ಷಗಳ ಅಭ್ಯರ್ಥಿಗಳೂ ಕಣದಲ್ಲಿದ್ದಾರೆ.

ಟಾಪ್ ನ್ಯೂಸ್

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

7-bng

Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ

6-bng

Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.